Home / ಕವನ / ಕವಿತೆ / ಏಸೂರು ತಿರಿಗಿದರು ಬೀಸೋಣಾ ಬಿಡದವ್ವಾ

ಏಸೂರು ತಿರಿಗಿದರು ಬೀಸೋಣಾ ಬಿಡದವ್ವಾ

ಏಸೂರು ತಿರಿಗಿದರು ಬೀಸೋಣಾ ಬಿಡದವ್ವಾ
ಬೀಸೋಣ ಬರ್ರೆವ್ವ ಹಾಡ್ಯಾಡಿ ||ಪ||

ಹಸ್ತಿನಿ ಚತ್ತಿನಿ ಶಂಖಿನಿ ಪದ್ಮಿನಿ
ಕರಿತಾರೆ ಬರ್ರೆವ್ವ ಕೂಡಿ ||ಅ.ಪ.||

ದೇಹವೆಂಬುವ ಬೀಸುಕಲ್ಲು ಶಿವಪುರದಾಗ
ಉಪ್ಪಾರನ ಕೈಲೆ ಹೊಡಿಸಿ
ಮೇಲೆ ಗಂಟಲು ಮ್ಯಾಗಿನ ಪಾಳಿಗೆ
ನಡುಮಧ್ಯದಿ ಬಾಯಿ ತೆಗಸಿ
ಕೆಳಗಿನ ಪಾಳಿಗೆ ಮಲಮೂತ್ರ ಬಿಡುತಿಹ
ಅಸವಲ್ಲದೊಂದ ತೂತ ತಗಸಿ
ತಕ್ಕಂಥ ಗೂಟವು ಕಾಯ ಮರದ ಮ್ಯಾಗ
ಸಾಗವಾನಿಯ ಕಟಗಿಯ ತರಿಸಿ
ಸವ್ವಾನೂರು ವರ್ಷ ಬಾಳುವ ಗೂಟಕ್ಕೆ
ಮೇಲೊಂದ ಅಣಸನು ಜಡಿಸಿ
ನಾನು ಬೇಕಾಗಿ ಬೀಸೇನೇ ಕಲ್ಲು ತರಿಸಿದ್ದೆನೇ
ಸೂತ್ರ ಎಂಬುವ ಚಿತ್ರ ತೆಗಸಿದ್ದೇನೇ
ವಾಯು ದೇಹವೆಂಬುವ ಪಿರಿಕಿ ಹಾಕಿದ್ದೇನೇ
ಇಂಥಾ ಕಲ್ಲು ಸಮತೋಲು ನಿಜಮನವೆಂಬ ಜಾಗದಾಗ ನಡಸಿದ್ದೆನೇ
ನಾರಿ ಕರಿಯುವನೇ ನಾರೇರು ಎಲ್ಲಾರು ಬರ್ರೆವ್ವ ಭದ್ರ್ಯಾರು ಕೂಡಿ ||೧||

ಅಬ್ಬರೆಂಬುವ ಗೋದಿ ಕಡಲಿಯ ತಂದು
ತನುವೆಂಬಂತಸ್ತದಿ ತೋಯಿಸಿ
ಮನದ ಮೈಲಿಗೆಯೆಂಬ ಮ್ಯಾಗಿನ ತೌಡು
ಅನುವಿಂದ ಒಳ್ಳಾಗ ಕುಟ್ಟಿಸಿ ತೆಗದು
ಸುಜ್ಞಾನವೆಂಬುವ ಧೂಳವ ಕೇರಿಸಿ
ಬುದ್ಧಿಯೆಂಬುವ ಬುಟ್ಟಿಯನು ತುಂಬಿಸಿ
ಧರ್ಮಯೆಂಬುವಂಥಾ ಬಲಗೈಲೆ
ಒಂದೊಂದು ಹಿಡಿ ಹಿಡಿ ಮುಕ್ಕನೆ ನಾ ಹಾಕಿಸಿ
ಕರ್ಮವೆಂಬುವಂಥಾ ಎಡಗೈಲೆ
ತಿರುತಿರುವಿ ಸಣ್ಣಾಗಿ ಮುಕ್ಕನುರಿಸಿ
ತ್ರಿಗುಣೆಂಬ ಹಿಟ್ಟನು ಗೂಡಿಸಿದ್ದೆನೇ
ಒಂಬತ್ತು ತೂತಿನ ಸಾಣಿಗೀಲೆ ಸಾಣಿಸಿದ್ದೆನೇ
ಇಂಥಾ ಹಿಟ್ಟು ಬಚ್ಚಿಟ್ಟು
ಆತ್ಮವೆಂಬುವ ಅಮೃತದ ಗಡಿಗಿ ತುಂಬಿಸಿದ್ದೆನೇ
ತಾಯಿ ಮಾಯಿ ತಾಯವ್ವನ ಕರಕೊಂಡು ನಡಿರೆವ್ವ ಅಡಗೀಯ ಮಾಡೀ ||೨||

ಅನುಭವ ತನುಭವ ಚಿನುಮಯವೆಂಬುವ ಮೂರು ಒಲಿಯ ಗುಂಡು ಹೂಡಿ
ಕಾಮಕ್ರೋಧವೆಂಬ ಕಾಡಕಟ್ಟಿಗಿ ಸುಟ್ಟು ಬೇಗ ಒಲಿಯ ಪುಟಮಾಡಿ
ಪಂಚತತ್ವದಿಂದ ಪಕ್ವಾನ್ನ ಮಾಡಿ
ಗಡಿಗೆ ಇಳುವಿದ್ದೇನ್ರೇ ಪಟ್ಟಿ ತೀಡೀದ್ದೇನ್ರೇ
ಸಪ್ತಭೂತಂಗಳಿಗೆ ಗುಪ್ತ ಅಡಗಿಯ ಮಾಡಿ
ಹೊತ್ತಿದ್ದನ್ನವನು ನೀಡಿ
ಅನ್ನವು ತೀರಿತು ಗಡಿಗೆಯು ಒಡದೀತು
ಒಲಿಗುಂಡು ಬಿತ್ತ್ರೆವ್ವ ಒಂದು ಕಡಿ
ಕಾಳು ಕಡಿಗಾಯಿತು ಕಲ್ಲು ಇಲ್ಲುಳದಿತು
ಇನ್ನೆಲ್ಲಿ ಬಂದೀತು ಭೂಮಿ ಮೂಡಿ ನಾನು
ಕಾಳು ಹೋದಿಂದೆ ಮ್ಯಾಳ ಮುರಿದು ಗೀಳಾದೆ
ಸಾಧು ಸಾಧಕರೊಳು ವ್ಯಾಳಗಳದೆ
ಸುಳ್ಳೇ ಸಂಸಾರದೊಳು ಬಿದ್ದೆ ಪಾಪ ಹೊದ್ದೆ
ಪೊಡವಿಪ ಶಿಶುನಾಳಧೀಶನ ದಯದಿಂದ
ಕಡೆಗೆ ನಾ ಮುಕ್ತಿಯ ಕಂಡೇ ||೩||
*****

 

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...