Home / ಕವನ / ಕವಿತೆ / ಏಸೂರು ತಿರಿಗಿದರು ಬೀಸೋಣಾ ಬಿಡದವ್ವಾ

ಏಸೂರು ತಿರಿಗಿದರು ಬೀಸೋಣಾ ಬಿಡದವ್ವಾ

ಏಸೂರು ತಿರಿಗಿದರು ಬೀಸೋಣಾ ಬಿಡದವ್ವಾ
ಬೀಸೋಣ ಬರ್ರೆವ್ವ ಹಾಡ್ಯಾಡಿ ||ಪ||

ಹಸ್ತಿನಿ ಚತ್ತಿನಿ ಶಂಖಿನಿ ಪದ್ಮಿನಿ
ಕರಿತಾರೆ ಬರ್ರೆವ್ವ ಕೂಡಿ ||ಅ.ಪ.||

ದೇಹವೆಂಬುವ ಬೀಸುಕಲ್ಲು ಶಿವಪುರದಾಗ
ಉಪ್ಪಾರನ ಕೈಲೆ ಹೊಡಿಸಿ
ಮೇಲೆ ಗಂಟಲು ಮ್ಯಾಗಿನ ಪಾಳಿಗೆ
ನಡುಮಧ್ಯದಿ ಬಾಯಿ ತೆಗಸಿ
ಕೆಳಗಿನ ಪಾಳಿಗೆ ಮಲಮೂತ್ರ ಬಿಡುತಿಹ
ಅಸವಲ್ಲದೊಂದ ತೂತ ತಗಸಿ
ತಕ್ಕಂಥ ಗೂಟವು ಕಾಯ ಮರದ ಮ್ಯಾಗ
ಸಾಗವಾನಿಯ ಕಟಗಿಯ ತರಿಸಿ
ಸವ್ವಾನೂರು ವರ್ಷ ಬಾಳುವ ಗೂಟಕ್ಕೆ
ಮೇಲೊಂದ ಅಣಸನು ಜಡಿಸಿ
ನಾನು ಬೇಕಾಗಿ ಬೀಸೇನೇ ಕಲ್ಲು ತರಿಸಿದ್ದೆನೇ
ಸೂತ್ರ ಎಂಬುವ ಚಿತ್ರ ತೆಗಸಿದ್ದೇನೇ
ವಾಯು ದೇಹವೆಂಬುವ ಪಿರಿಕಿ ಹಾಕಿದ್ದೇನೇ
ಇಂಥಾ ಕಲ್ಲು ಸಮತೋಲು ನಿಜಮನವೆಂಬ ಜಾಗದಾಗ ನಡಸಿದ್ದೆನೇ
ನಾರಿ ಕರಿಯುವನೇ ನಾರೇರು ಎಲ್ಲಾರು ಬರ್ರೆವ್ವ ಭದ್ರ್ಯಾರು ಕೂಡಿ ||೧||

ಅಬ್ಬರೆಂಬುವ ಗೋದಿ ಕಡಲಿಯ ತಂದು
ತನುವೆಂಬಂತಸ್ತದಿ ತೋಯಿಸಿ
ಮನದ ಮೈಲಿಗೆಯೆಂಬ ಮ್ಯಾಗಿನ ತೌಡು
ಅನುವಿಂದ ಒಳ್ಳಾಗ ಕುಟ್ಟಿಸಿ ತೆಗದು
ಸುಜ್ಞಾನವೆಂಬುವ ಧೂಳವ ಕೇರಿಸಿ
ಬುದ್ಧಿಯೆಂಬುವ ಬುಟ್ಟಿಯನು ತುಂಬಿಸಿ
ಧರ್ಮಯೆಂಬುವಂಥಾ ಬಲಗೈಲೆ
ಒಂದೊಂದು ಹಿಡಿ ಹಿಡಿ ಮುಕ್ಕನೆ ನಾ ಹಾಕಿಸಿ
ಕರ್ಮವೆಂಬುವಂಥಾ ಎಡಗೈಲೆ
ತಿರುತಿರುವಿ ಸಣ್ಣಾಗಿ ಮುಕ್ಕನುರಿಸಿ
ತ್ರಿಗುಣೆಂಬ ಹಿಟ್ಟನು ಗೂಡಿಸಿದ್ದೆನೇ
ಒಂಬತ್ತು ತೂತಿನ ಸಾಣಿಗೀಲೆ ಸಾಣಿಸಿದ್ದೆನೇ
ಇಂಥಾ ಹಿಟ್ಟು ಬಚ್ಚಿಟ್ಟು
ಆತ್ಮವೆಂಬುವ ಅಮೃತದ ಗಡಿಗಿ ತುಂಬಿಸಿದ್ದೆನೇ
ತಾಯಿ ಮಾಯಿ ತಾಯವ್ವನ ಕರಕೊಂಡು ನಡಿರೆವ್ವ ಅಡಗೀಯ ಮಾಡೀ ||೨||

ಅನುಭವ ತನುಭವ ಚಿನುಮಯವೆಂಬುವ ಮೂರು ಒಲಿಯ ಗುಂಡು ಹೂಡಿ
ಕಾಮಕ್ರೋಧವೆಂಬ ಕಾಡಕಟ್ಟಿಗಿ ಸುಟ್ಟು ಬೇಗ ಒಲಿಯ ಪುಟಮಾಡಿ
ಪಂಚತತ್ವದಿಂದ ಪಕ್ವಾನ್ನ ಮಾಡಿ
ಗಡಿಗೆ ಇಳುವಿದ್ದೇನ್ರೇ ಪಟ್ಟಿ ತೀಡೀದ್ದೇನ್ರೇ
ಸಪ್ತಭೂತಂಗಳಿಗೆ ಗುಪ್ತ ಅಡಗಿಯ ಮಾಡಿ
ಹೊತ್ತಿದ್ದನ್ನವನು ನೀಡಿ
ಅನ್ನವು ತೀರಿತು ಗಡಿಗೆಯು ಒಡದೀತು
ಒಲಿಗುಂಡು ಬಿತ್ತ್ರೆವ್ವ ಒಂದು ಕಡಿ
ಕಾಳು ಕಡಿಗಾಯಿತು ಕಲ್ಲು ಇಲ್ಲುಳದಿತು
ಇನ್ನೆಲ್ಲಿ ಬಂದೀತು ಭೂಮಿ ಮೂಡಿ ನಾನು
ಕಾಳು ಹೋದಿಂದೆ ಮ್ಯಾಳ ಮುರಿದು ಗೀಳಾದೆ
ಸಾಧು ಸಾಧಕರೊಳು ವ್ಯಾಳಗಳದೆ
ಸುಳ್ಳೇ ಸಂಸಾರದೊಳು ಬಿದ್ದೆ ಪಾಪ ಹೊದ್ದೆ
ಪೊಡವಿಪ ಶಿಶುನಾಳಧೀಶನ ದಯದಿಂದ
ಕಡೆಗೆ ನಾ ಮುಕ್ತಿಯ ಕಂಡೇ ||೩||
*****

 

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...