Home / ಕವನ / ಕವಿತೆ / ಏಸೂರು ತಿರಿಗಿದರು ಬೀಸೋಣಾ ಬಿಡದವ್ವಾ

ಏಸೂರು ತಿರಿಗಿದರು ಬೀಸೋಣಾ ಬಿಡದವ್ವಾ

ಏಸೂರು ತಿರಿಗಿದರು ಬೀಸೋಣಾ ಬಿಡದವ್ವಾ
ಬೀಸೋಣ ಬರ್ರೆವ್ವ ಹಾಡ್ಯಾಡಿ ||ಪ||

ಹಸ್ತಿನಿ ಚತ್ತಿನಿ ಶಂಖಿನಿ ಪದ್ಮಿನಿ
ಕರಿತಾರೆ ಬರ್ರೆವ್ವ ಕೂಡಿ ||ಅ.ಪ.||

ದೇಹವೆಂಬುವ ಬೀಸುಕಲ್ಲು ಶಿವಪುರದಾಗ
ಉಪ್ಪಾರನ ಕೈಲೆ ಹೊಡಿಸಿ
ಮೇಲೆ ಗಂಟಲು ಮ್ಯಾಗಿನ ಪಾಳಿಗೆ
ನಡುಮಧ್ಯದಿ ಬಾಯಿ ತೆಗಸಿ
ಕೆಳಗಿನ ಪಾಳಿಗೆ ಮಲಮೂತ್ರ ಬಿಡುತಿಹ
ಅಸವಲ್ಲದೊಂದ ತೂತ ತಗಸಿ
ತಕ್ಕಂಥ ಗೂಟವು ಕಾಯ ಮರದ ಮ್ಯಾಗ
ಸಾಗವಾನಿಯ ಕಟಗಿಯ ತರಿಸಿ
ಸವ್ವಾನೂರು ವರ್ಷ ಬಾಳುವ ಗೂಟಕ್ಕೆ
ಮೇಲೊಂದ ಅಣಸನು ಜಡಿಸಿ
ನಾನು ಬೇಕಾಗಿ ಬೀಸೇನೇ ಕಲ್ಲು ತರಿಸಿದ್ದೆನೇ
ಸೂತ್ರ ಎಂಬುವ ಚಿತ್ರ ತೆಗಸಿದ್ದೇನೇ
ವಾಯು ದೇಹವೆಂಬುವ ಪಿರಿಕಿ ಹಾಕಿದ್ದೇನೇ
ಇಂಥಾ ಕಲ್ಲು ಸಮತೋಲು ನಿಜಮನವೆಂಬ ಜಾಗದಾಗ ನಡಸಿದ್ದೆನೇ
ನಾರಿ ಕರಿಯುವನೇ ನಾರೇರು ಎಲ್ಲಾರು ಬರ್ರೆವ್ವ ಭದ್ರ್ಯಾರು ಕೂಡಿ ||೧||

ಅಬ್ಬರೆಂಬುವ ಗೋದಿ ಕಡಲಿಯ ತಂದು
ತನುವೆಂಬಂತಸ್ತದಿ ತೋಯಿಸಿ
ಮನದ ಮೈಲಿಗೆಯೆಂಬ ಮ್ಯಾಗಿನ ತೌಡು
ಅನುವಿಂದ ಒಳ್ಳಾಗ ಕುಟ್ಟಿಸಿ ತೆಗದು
ಸುಜ್ಞಾನವೆಂಬುವ ಧೂಳವ ಕೇರಿಸಿ
ಬುದ್ಧಿಯೆಂಬುವ ಬುಟ್ಟಿಯನು ತುಂಬಿಸಿ
ಧರ್ಮಯೆಂಬುವಂಥಾ ಬಲಗೈಲೆ
ಒಂದೊಂದು ಹಿಡಿ ಹಿಡಿ ಮುಕ್ಕನೆ ನಾ ಹಾಕಿಸಿ
ಕರ್ಮವೆಂಬುವಂಥಾ ಎಡಗೈಲೆ
ತಿರುತಿರುವಿ ಸಣ್ಣಾಗಿ ಮುಕ್ಕನುರಿಸಿ
ತ್ರಿಗುಣೆಂಬ ಹಿಟ್ಟನು ಗೂಡಿಸಿದ್ದೆನೇ
ಒಂಬತ್ತು ತೂತಿನ ಸಾಣಿಗೀಲೆ ಸಾಣಿಸಿದ್ದೆನೇ
ಇಂಥಾ ಹಿಟ್ಟು ಬಚ್ಚಿಟ್ಟು
ಆತ್ಮವೆಂಬುವ ಅಮೃತದ ಗಡಿಗಿ ತುಂಬಿಸಿದ್ದೆನೇ
ತಾಯಿ ಮಾಯಿ ತಾಯವ್ವನ ಕರಕೊಂಡು ನಡಿರೆವ್ವ ಅಡಗೀಯ ಮಾಡೀ ||೨||

ಅನುಭವ ತನುಭವ ಚಿನುಮಯವೆಂಬುವ ಮೂರು ಒಲಿಯ ಗುಂಡು ಹೂಡಿ
ಕಾಮಕ್ರೋಧವೆಂಬ ಕಾಡಕಟ್ಟಿಗಿ ಸುಟ್ಟು ಬೇಗ ಒಲಿಯ ಪುಟಮಾಡಿ
ಪಂಚತತ್ವದಿಂದ ಪಕ್ವಾನ್ನ ಮಾಡಿ
ಗಡಿಗೆ ಇಳುವಿದ್ದೇನ್ರೇ ಪಟ್ಟಿ ತೀಡೀದ್ದೇನ್ರೇ
ಸಪ್ತಭೂತಂಗಳಿಗೆ ಗುಪ್ತ ಅಡಗಿಯ ಮಾಡಿ
ಹೊತ್ತಿದ್ದನ್ನವನು ನೀಡಿ
ಅನ್ನವು ತೀರಿತು ಗಡಿಗೆಯು ಒಡದೀತು
ಒಲಿಗುಂಡು ಬಿತ್ತ್ರೆವ್ವ ಒಂದು ಕಡಿ
ಕಾಳು ಕಡಿಗಾಯಿತು ಕಲ್ಲು ಇಲ್ಲುಳದಿತು
ಇನ್ನೆಲ್ಲಿ ಬಂದೀತು ಭೂಮಿ ಮೂಡಿ ನಾನು
ಕಾಳು ಹೋದಿಂದೆ ಮ್ಯಾಳ ಮುರಿದು ಗೀಳಾದೆ
ಸಾಧು ಸಾಧಕರೊಳು ವ್ಯಾಳಗಳದೆ
ಸುಳ್ಳೇ ಸಂಸಾರದೊಳು ಬಿದ್ದೆ ಪಾಪ ಹೊದ್ದೆ
ಪೊಡವಿಪ ಶಿಶುನಾಳಧೀಶನ ದಯದಿಂದ
ಕಡೆಗೆ ನಾ ಮುಕ್ತಿಯ ಕಂಡೇ ||೩||
*****

 

Tagged:

Leave a Reply

Your email address will not be published. Required fields are marked *

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...

ಕಾಲ ಹನ್ನೆರಡನೆ ಶತಮಾನ. ದೇಶ ಜಪಾನ್. ಅರಸನ ಹೆಸರು ಅಂತೋಕು. ವಯಸ್ಸು ಕೇವಲ ಏಳು ಸಂವತ್ಸರಗಳು. ಅಂತೋಕು ಹೈಕೆ ಎಂಬ ಸಾಮುರಾಯ ದಳದ ನಾಮ ಮಾತ್ರ ಮುಂದಾಳುವಾಗಿದ್ದು ನಿಜವಾದ ಅಧಿಕಾರ ಇವನ ಅಜ್ಜಮ್ಮನ ಕೈಯಲ್ಲಿತ್ತು. ಅಜ್ಜಮ್ಮನ ಹೆಸರು ನೀ ಎಂದು. ನೀಯ ಜವಾಬ್ದಾರಿ ಗುರುತರವಾಗಿತ್ತು ಎಂದು...

ಶೇಖರನಿಗೆ ಇನ್ನೂ ಎರಡು ದಿನಗಳ ‘ವಾರ’ ಕಡಿಮೆ ಬಿದ್ದಿತ್ತು. ಎಲ್ಲಿಯೂ ಹುಟ್ಟುವಂತೆ ತೋರಲಿಲ್ಲ. ಶ್ರೀಮಾನ್ ಪದ್ಮನಾಭ ಹೆಬ್ಬಾರರ ಮನೆಯಲ್ಲಿ ಕೇಳಬೇಕೆಂದು ನಾಲ್ಕಾರು ಸಲ ಯೋಚಿಸಿದ. ಆದರೆ ಅವರು ಭಿಕ್ಷುಕರನ್ನೂ, ವರ್ಗಣಿ ಕೇಳುವವರನ್ನೂ ವಾರದ ಮಾಣಿಗಳನ್ನೂ ಅಂಗಳಕ್ಕೂ ಬರಗೊ...

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ ಇವನ ಮುಂದೆಯೇ ನಿಂತಂತಾಯಿತು. ಆಕೆಯ...

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...