Home / ಕವನ / ಕವಿತೆ / ಏಸೂರು ತಿರಿಗಿದರು ಬೀಸೋಣಾ ಬಿಡದವ್ವಾ

ಏಸೂರು ತಿರಿಗಿದರು ಬೀಸೋಣಾ ಬಿಡದವ್ವಾ

ಏಸೂರು ತಿರಿಗಿದರು ಬೀಸೋಣಾ ಬಿಡದವ್ವಾ
ಬೀಸೋಣ ಬರ್ರೆವ್ವ ಹಾಡ್ಯಾಡಿ ||ಪ||

ಹಸ್ತಿನಿ ಚತ್ತಿನಿ ಶಂಖಿನಿ ಪದ್ಮಿನಿ
ಕರಿತಾರೆ ಬರ್ರೆವ್ವ ಕೂಡಿ ||ಅ.ಪ.||

ದೇಹವೆಂಬುವ ಬೀಸುಕಲ್ಲು ಶಿವಪುರದಾಗ
ಉಪ್ಪಾರನ ಕೈಲೆ ಹೊಡಿಸಿ
ಮೇಲೆ ಗಂಟಲು ಮ್ಯಾಗಿನ ಪಾಳಿಗೆ
ನಡುಮಧ್ಯದಿ ಬಾಯಿ ತೆಗಸಿ
ಕೆಳಗಿನ ಪಾಳಿಗೆ ಮಲಮೂತ್ರ ಬಿಡುತಿಹ
ಅಸವಲ್ಲದೊಂದ ತೂತ ತಗಸಿ
ತಕ್ಕಂಥ ಗೂಟವು ಕಾಯ ಮರದ ಮ್ಯಾಗ
ಸಾಗವಾನಿಯ ಕಟಗಿಯ ತರಿಸಿ
ಸವ್ವಾನೂರು ವರ್ಷ ಬಾಳುವ ಗೂಟಕ್ಕೆ
ಮೇಲೊಂದ ಅಣಸನು ಜಡಿಸಿ
ನಾನು ಬೇಕಾಗಿ ಬೀಸೇನೇ ಕಲ್ಲು ತರಿಸಿದ್ದೆನೇ
ಸೂತ್ರ ಎಂಬುವ ಚಿತ್ರ ತೆಗಸಿದ್ದೇನೇ
ವಾಯು ದೇಹವೆಂಬುವ ಪಿರಿಕಿ ಹಾಕಿದ್ದೇನೇ
ಇಂಥಾ ಕಲ್ಲು ಸಮತೋಲು ನಿಜಮನವೆಂಬ ಜಾಗದಾಗ ನಡಸಿದ್ದೆನೇ
ನಾರಿ ಕರಿಯುವನೇ ನಾರೇರು ಎಲ್ಲಾರು ಬರ್ರೆವ್ವ ಭದ್ರ್ಯಾರು ಕೂಡಿ ||೧||

ಅಬ್ಬರೆಂಬುವ ಗೋದಿ ಕಡಲಿಯ ತಂದು
ತನುವೆಂಬಂತಸ್ತದಿ ತೋಯಿಸಿ
ಮನದ ಮೈಲಿಗೆಯೆಂಬ ಮ್ಯಾಗಿನ ತೌಡು
ಅನುವಿಂದ ಒಳ್ಳಾಗ ಕುಟ್ಟಿಸಿ ತೆಗದು
ಸುಜ್ಞಾನವೆಂಬುವ ಧೂಳವ ಕೇರಿಸಿ
ಬುದ್ಧಿಯೆಂಬುವ ಬುಟ್ಟಿಯನು ತುಂಬಿಸಿ
ಧರ್ಮಯೆಂಬುವಂಥಾ ಬಲಗೈಲೆ
ಒಂದೊಂದು ಹಿಡಿ ಹಿಡಿ ಮುಕ್ಕನೆ ನಾ ಹಾಕಿಸಿ
ಕರ್ಮವೆಂಬುವಂಥಾ ಎಡಗೈಲೆ
ತಿರುತಿರುವಿ ಸಣ್ಣಾಗಿ ಮುಕ್ಕನುರಿಸಿ
ತ್ರಿಗುಣೆಂಬ ಹಿಟ್ಟನು ಗೂಡಿಸಿದ್ದೆನೇ
ಒಂಬತ್ತು ತೂತಿನ ಸಾಣಿಗೀಲೆ ಸಾಣಿಸಿದ್ದೆನೇ
ಇಂಥಾ ಹಿಟ್ಟು ಬಚ್ಚಿಟ್ಟು
ಆತ್ಮವೆಂಬುವ ಅಮೃತದ ಗಡಿಗಿ ತುಂಬಿಸಿದ್ದೆನೇ
ತಾಯಿ ಮಾಯಿ ತಾಯವ್ವನ ಕರಕೊಂಡು ನಡಿರೆವ್ವ ಅಡಗೀಯ ಮಾಡೀ ||೨||

ಅನುಭವ ತನುಭವ ಚಿನುಮಯವೆಂಬುವ ಮೂರು ಒಲಿಯ ಗುಂಡು ಹೂಡಿ
ಕಾಮಕ್ರೋಧವೆಂಬ ಕಾಡಕಟ್ಟಿಗಿ ಸುಟ್ಟು ಬೇಗ ಒಲಿಯ ಪುಟಮಾಡಿ
ಪಂಚತತ್ವದಿಂದ ಪಕ್ವಾನ್ನ ಮಾಡಿ
ಗಡಿಗೆ ಇಳುವಿದ್ದೇನ್ರೇ ಪಟ್ಟಿ ತೀಡೀದ್ದೇನ್ರೇ
ಸಪ್ತಭೂತಂಗಳಿಗೆ ಗುಪ್ತ ಅಡಗಿಯ ಮಾಡಿ
ಹೊತ್ತಿದ್ದನ್ನವನು ನೀಡಿ
ಅನ್ನವು ತೀರಿತು ಗಡಿಗೆಯು ಒಡದೀತು
ಒಲಿಗುಂಡು ಬಿತ್ತ್ರೆವ್ವ ಒಂದು ಕಡಿ
ಕಾಳು ಕಡಿಗಾಯಿತು ಕಲ್ಲು ಇಲ್ಲುಳದಿತು
ಇನ್ನೆಲ್ಲಿ ಬಂದೀತು ಭೂಮಿ ಮೂಡಿ ನಾನು
ಕಾಳು ಹೋದಿಂದೆ ಮ್ಯಾಳ ಮುರಿದು ಗೀಳಾದೆ
ಸಾಧು ಸಾಧಕರೊಳು ವ್ಯಾಳಗಳದೆ
ಸುಳ್ಳೇ ಸಂಸಾರದೊಳು ಬಿದ್ದೆ ಪಾಪ ಹೊದ್ದೆ
ಪೊಡವಿಪ ಶಿಶುನಾಳಧೀಶನ ದಯದಿಂದ
ಕಡೆಗೆ ನಾ ಮುಕ್ತಿಯ ಕಂಡೇ ||೩||
*****

 

Tagged:

Leave a Reply

Your email address will not be published. Required fields are marked *

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...