ಏಸೂರು ತಿರಿಗಿದರು ಬೀಸೋಣಾ ಬಿಡದವ್ವಾ

ಏಸೂರು ತಿರಿಗಿದರು ಬೀಸೋಣಾ ಬಿಡದವ್ವಾ
ಬೀಸೋಣ ಬರ್ರೆವ್ವ ಹಾಡ್ಯಾಡಿ ||ಪ||

ಹಸ್ತಿನಿ ಚತ್ತಿನಿ ಶಂಖಿನಿ ಪದ್ಮಿನಿ
ಕರಿತಾರೆ ಬರ್ರೆವ್ವ ಕೂಡಿ ||ಅ.ಪ.||

ದೇಹವೆಂಬುವ ಬೀಸುಕಲ್ಲು ಶಿವಪುರದಾಗ
ಉಪ್ಪಾರನ ಕೈಲೆ ಹೊಡಿಸಿ
ಮೇಲೆ ಗಂಟಲು ಮ್ಯಾಗಿನ ಪಾಳಿಗೆ
ನಡುಮಧ್ಯದಿ ಬಾಯಿ ತೆಗಸಿ
ಕೆಳಗಿನ ಪಾಳಿಗೆ ಮಲಮೂತ್ರ ಬಿಡುತಿಹ
ಅಸವಲ್ಲದೊಂದ ತೂತ ತಗಸಿ
ತಕ್ಕಂಥ ಗೂಟವು ಕಾಯ ಮರದ ಮ್ಯಾಗ
ಸಾಗವಾನಿಯ ಕಟಗಿಯ ತರಿಸಿ
ಸವ್ವಾನೂರು ವರ್ಷ ಬಾಳುವ ಗೂಟಕ್ಕೆ
ಮೇಲೊಂದ ಅಣಸನು ಜಡಿಸಿ
ನಾನು ಬೇಕಾಗಿ ಬೀಸೇನೇ ಕಲ್ಲು ತರಿಸಿದ್ದೆನೇ
ಸೂತ್ರ ಎಂಬುವ ಚಿತ್ರ ತೆಗಸಿದ್ದೇನೇ
ವಾಯು ದೇಹವೆಂಬುವ ಪಿರಿಕಿ ಹಾಕಿದ್ದೇನೇ
ಇಂಥಾ ಕಲ್ಲು ಸಮತೋಲು ನಿಜಮನವೆಂಬ ಜಾಗದಾಗ ನಡಸಿದ್ದೆನೇ
ನಾರಿ ಕರಿಯುವನೇ ನಾರೇರು ಎಲ್ಲಾರು ಬರ್ರೆವ್ವ ಭದ್ರ್ಯಾರು ಕೂಡಿ ||೧||

ಅಬ್ಬರೆಂಬುವ ಗೋದಿ ಕಡಲಿಯ ತಂದು
ತನುವೆಂಬಂತಸ್ತದಿ ತೋಯಿಸಿ
ಮನದ ಮೈಲಿಗೆಯೆಂಬ ಮ್ಯಾಗಿನ ತೌಡು
ಅನುವಿಂದ ಒಳ್ಳಾಗ ಕುಟ್ಟಿಸಿ ತೆಗದು
ಸುಜ್ಞಾನವೆಂಬುವ ಧೂಳವ ಕೇರಿಸಿ
ಬುದ್ಧಿಯೆಂಬುವ ಬುಟ್ಟಿಯನು ತುಂಬಿಸಿ
ಧರ್ಮಯೆಂಬುವಂಥಾ ಬಲಗೈಲೆ
ಒಂದೊಂದು ಹಿಡಿ ಹಿಡಿ ಮುಕ್ಕನೆ ನಾ ಹಾಕಿಸಿ
ಕರ್ಮವೆಂಬುವಂಥಾ ಎಡಗೈಲೆ
ತಿರುತಿರುವಿ ಸಣ್ಣಾಗಿ ಮುಕ್ಕನುರಿಸಿ
ತ್ರಿಗುಣೆಂಬ ಹಿಟ್ಟನು ಗೂಡಿಸಿದ್ದೆನೇ
ಒಂಬತ್ತು ತೂತಿನ ಸಾಣಿಗೀಲೆ ಸಾಣಿಸಿದ್ದೆನೇ
ಇಂಥಾ ಹಿಟ್ಟು ಬಚ್ಚಿಟ್ಟು
ಆತ್ಮವೆಂಬುವ ಅಮೃತದ ಗಡಿಗಿ ತುಂಬಿಸಿದ್ದೆನೇ
ತಾಯಿ ಮಾಯಿ ತಾಯವ್ವನ ಕರಕೊಂಡು ನಡಿರೆವ್ವ ಅಡಗೀಯ ಮಾಡೀ ||೨||

ಅನುಭವ ತನುಭವ ಚಿನುಮಯವೆಂಬುವ ಮೂರು ಒಲಿಯ ಗುಂಡು ಹೂಡಿ
ಕಾಮಕ್ರೋಧವೆಂಬ ಕಾಡಕಟ್ಟಿಗಿ ಸುಟ್ಟು ಬೇಗ ಒಲಿಯ ಪುಟಮಾಡಿ
ಪಂಚತತ್ವದಿಂದ ಪಕ್ವಾನ್ನ ಮಾಡಿ
ಗಡಿಗೆ ಇಳುವಿದ್ದೇನ್ರೇ ಪಟ್ಟಿ ತೀಡೀದ್ದೇನ್ರೇ
ಸಪ್ತಭೂತಂಗಳಿಗೆ ಗುಪ್ತ ಅಡಗಿಯ ಮಾಡಿ
ಹೊತ್ತಿದ್ದನ್ನವನು ನೀಡಿ
ಅನ್ನವು ತೀರಿತು ಗಡಿಗೆಯು ಒಡದೀತು
ಒಲಿಗುಂಡು ಬಿತ್ತ್ರೆವ್ವ ಒಂದು ಕಡಿ
ಕಾಳು ಕಡಿಗಾಯಿತು ಕಲ್ಲು ಇಲ್ಲುಳದಿತು
ಇನ್ನೆಲ್ಲಿ ಬಂದೀತು ಭೂಮಿ ಮೂಡಿ ನಾನು
ಕಾಳು ಹೋದಿಂದೆ ಮ್ಯಾಳ ಮುರಿದು ಗೀಳಾದೆ
ಸಾಧು ಸಾಧಕರೊಳು ವ್ಯಾಳಗಳದೆ
ಸುಳ್ಳೇ ಸಂಸಾರದೊಳು ಬಿದ್ದೆ ಪಾಪ ಹೊದ್ದೆ
ಪೊಡವಿಪ ಶಿಶುನಾಳಧೀಶನ ದಯದಿಂದ
ಕಡೆಗೆ ನಾ ಮುಕ್ತಿಯ ಕಂಡೇ ||೩||
*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಕ್ಕಾಂವ ಗೆದ್ದಾಂವ
Next post ಹರಕೆಯ ಕುರಿ

ಸಣ್ಣ ಕತೆ

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

  • ವ್ಯವಸ್ಥೆ

    ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

cheap jordans|wholesale air max|wholesale jordans|wholesale jewelry|wholesale jerseys