Home / ಕವನ / ಕವಿತೆ / ಸ್ವಾತಂತ್ರ್ಯ ಬಂದಿದೆ

ಸ್ವಾತಂತ್ರ್ಯ ಬಂದಿದೆ

ನಮಗೆ ಸ್ವಾತಂತ್ರ್ಯ ಬಂದಿದೆ ಸ್ವಾಮೀ ನಮಗೆ ಸ್ವಾತಂತ್ರ್ಯ ಬಂದಿದೆ,
ನಮ್ಮ ಹಡೆದ ತಂದೆ ತಾಯಿಗಳ ಕಾಲಿಂದೊದೆಯಲು
ನಮ್ಮ ತಿದ್ದಿ ಬೆಳೆಸಿದ ಗುರು ಹಿರಿಯರನೂ ಅಲ್ಲಗಳೆಯಲು
ಆಡಳಿತದಾಡುಂಬೊಲದಲ್ಲಿ ಬೇಲಿ ಎದ್ದು ಹೊಲ ಮೇಯಲು
ಜನಸೇವಾ ಭವನಗಳಲ್ಲಿ ಇಲಿ ಹೆಗ್ಗಣಗಳು ಕೊಬ್ಬಲು
ಕುರಿಮಂದಿಯ ಕರಾರಿಲ್ಲದೆ ತಿಂಬ ತೋಳಗಳು ಬೆಳೆಯಲು
ದೀನ ದಲಿತರ ಹೆಸರು ಕೂಗಿಕೂಗಿ ದಬ್ಬಾಳಿಕೆಯ ಬಸಿರುಬ್ಬಿಸಲು

ನಮ್ಮ ಹೂದೋಟಗಳಲ್ಲಿ ಮುಳ್ಳುಕಂಟಿಗಳ ಧಾರಾಳ ಬೆಳೆಸಲು
ನಮ್ಮ ಮನೆಯಂಗಳಗಳಲ್ಲೆ ತಿಪ್ಪೆಯೊಟ್ಟಿಕೊಳ್ಳಲು
ಪೂರ್ವ ಶಿಖಿಯ ಕತ್ತರಿಸಲು ಪಾಶ್ಚಾತ್ಯ ಕಸಿಯ ತಲೆತುಂಬಾ
ಸಿಕ್ಕಾಪಟ್ಟೆ ಬೆಳೆಸಲು ಸ್ವಾತಂತ್ರ್ಯ ಬಂದಿದೆ.

ಬೇಕು ಬೇಕಾದವರ ಬೇಕಾದೆಡೆಗಳಲ್ಲಿ ತುಂಬಿಸಿಕೊಳ್ಳಲು
ಬೇಡಾದವರ ಆಗದವರ ಮೇಲೆಲ್ಲಾ ರೊಚ್ಚೆ ಚಿಮ್ಮಿಸಲು
ದುಡಿದು ತಿಂಬವರ ಒಡಲ ತುಳಿದು ನಮ್ಮ ಬೊಜ್ಜು ಬೇಕಾದಂತೆ
ಬೆಳೆಸಲು ಸ್ವಾತಂತ್ರ್ಯ ಬಂದಿದೆ

ಕುಡಿದು ಬೇಕಾದಷ್ಟು ಬೀದಿಯಲ್ಲಿ ಹೊರಳಾಡಿ ಸ್ವರ್ಗಕಾಣಲು
ಮಾತುಗಳೊಲೆಯ ಮೇಲೆ ಸ್ವಾರ್ಥದಡಿಗೆ ಬೇಯಿಸಿಕೊಳ್ಳಲು
ಬುದ್ದಿ ಶಕ್ತಿ, ಯೋಗ್ಯತೆ, ಗುಣಗಳನ್ನು
ಹೆಣಮಾಡಿ ಹೂಳಿಡಲು
ಗೂಂಡಾ ಗುಂಪುಗಾರಿಕೆ, ಹಣಗಳನ್ನು ಸಿಂಹಾಸನಕ್ಕೇರಿಸಲು
ಕೆಳಬಿದ್ದವರನೆಬ್ಬಿಸುವ ನೆಪದಲ್ಲಿ ಎದ್ದವರ ಹೊಡೆದು ಬೀಳಿಸಲು
ಸ್ವಾತಂತ್ರ್ಯ ಬಂದಿದೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...