Home / ಕವನ / ಕವಿತೆ / ಎಂಥ ಭಾರತ ೨

ಎಂಥ ಭಾರತ ೨

ಇಲ್ಲಿಯವರೆಗೆ ನಿರೋಧ-ನಿಷೇಧಗಳ ಹಿಡಿತ-ಬಿಗಿತಗಳ
‘ಋಣ’ ಮಾರ್ಗದಲ್ಲಿ ನಡೆದದ್ದಾಯಿತು
ಹುಲಿಯ ಮೈ ಬೋಳಿಸಿ ಆಕಳ ಮಾಡುವ ಯತ್ನ ನಡೆಯಿತು
ಆಟಗುಳಿ ಬಾಲಕನ ಕೈಕಾಲು ಕಟ್ಟಿ ಮೂಲೆ ಹಿಡಿಸಿದ್ದಾಯಿತು
ಹರಿವ ನಾಲಗೆಯ ಕತ್ತರಿಸಿ, ಉರಿವಗ್ನಿಯ ಮೇಲೆ ತಣ್ಣೀರು ಸುರುವಿ
ಕಡಿವ ಕತ್ತಿಯ ಬಂಡೆಗೆ ಹೊಡೆದು ಮೊಂಡಾಗಿಸಿ ಮೆರೆದ
ಅಹಿಂಸೆಯ ಹಿಂಸೆಯ, ಬ್ರಹ್ಮಚರ್ಯದ ಭಾನಗಡಿಯ,
ಸಾತ್ವಿಕತನದ ಸೂಳೆಗಾರಿಕೆಯ, ಸ್ವರ್ಗದ ದುರ್ಮಾರ್ಗವ
ನೀತಿಯ ನೇಣನು, ಭಕ್ತಿಯ ಭೋಳೆತನವ,
ಯೋಗದ ಗಂಡುಜೋಗತಿತನವ
ಇನ್ನಾದರೂ ಸಾಕು ಮಾಡೋಣ,

ಚೈತನ್ಯವ ಉಸಿರು ಕಟ್ಟಿಸುವ, ಜೀವ ಶವವಾಗುವ ಪರಿಸಾಕು
ಆ ದೈವ ಚಿಂತನೆಯನ್ನು ಯುಗಗಳಿಗೊಮ್ಮೆ ಹುಟ್ಟುವ
ಆ ಮಹಾಪುರುಷರಿಗಷ್ಟೇ ಬಿಟ್ಟುಕೊಟ್ಟು
ನಾವು ‘ಧನ’ ಮಾರ್ಗದ ಇಹಚಿಂತನೆ ಮಾಡೋಣ,
ಚೆನ್ನಾಗಿ ಉಳುವ ಬೆಳೆವ, ಚೆನ್ನಾಗಿ ಉಣ್ಣುವ-ಉಡುವ,
ಕಣ್ದಣಿಯೆ ಸೊಗವಾಡಿ ನೋಡಿ ಹಿಗ್ಗುವ,
ಮನದಣಿಯೆ ನಕ್ಕು ಅತ್ತು, ಭಾವ ಪೂರ ಹರಿಸುವ,
ಬಾಯಿ ತುಂಬ ಮಕಾತಾಡುವ, ತೆಕ್ಕೆತುಂಬಾ ಸ್ನೇಹಿಸುವ
ಕೈಕಾಲು ತಲೆಗಳಿಗೆ ತೆರಪಿಲ್ಲದೆ ಕೆಲಸ ತುಂಬುವ,
ನೋವಿನ ನಂಜುಂಡು, ಎಂಥ ಹೊಡೆತಗಳಿಗೂ ಕಾಯವ ಕಲ್ಲಾಗಿಸುವ,
ನಮ್ಮ ಬೆನ್ನಂಟಿದ ಹೊಟ್ಟೆಗಳ ತುಂಬಿ ತೇಗಿಸುವ,
ರಾತ್ರಿ ತುಂಬಾ ನಿದ್ರಿಸಿ, ಪುನರ್ಜನ್ಮವನಣಕಿಸುವ,
ಹಗಲು ತುಂಬಾ ದಣಿದು ಭೂತಪಾಪಗಳ ಸುಡುವ
ಮಾರ್ಗವನು ಇನ್ನು ಹಿಡಿಯೋಣ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...