ಹೊಟ್ಟೆ ಪಾಡು

ಇನ್ನೂ ಅರ್ಥಾಗಲಿಲ್ಲೇನ್ನಿನ್ಗೆ
ನಾಕಕ್ಸರಾ ಬಾಯಾಗಿಟಗಂಡು
ನಾಕ ಪುಸ್ತಕಾ ತಲೆಯಾಗಿಟ್ಟುಗಂಡು
ನಾಕ ಕಾಸ ಕೈಯಾಗಿಟಗಂಡು
ಯಾಕ ಮೆರೀತಿಯಲೇ
ಬಾಯಾಗೇ ಅಂತ್ರಕ್ಕೇಣೀ ಹಾಕ್ತೀ
ಸಮತಾ, ಸೋದರತಾ, ಗಾಂಧಿ ತಾತಾ
ಅಂತಾ ಬಂಗಾರದೊಳ್ಳೊಳ್ಳೆ ನಾಣ್ಣಿಗಳನ್ನ
ಒದರಿ ಒದರೀ ಒಡಕು ಬೋಕಿ ಮಾಡಿಬಿಟ್ಟಿ
ಗುಂಪು ಸೇರ್ಸಿ ಶಂಖಾ ಊದ್ತಿ
ಕೇಳಾವರ್‍ನ ನೋಡಾವರ್‍ನ
ಕುರೀಗಳನ ಮಾಡೀಯೇನ್ಲೆ
ನಿನ್ನ ತಲೀ ದೊಡ್ಡದಿರುಭೌದು
ಲೇ ಕೈ ಕಾಲ್ಸಣ್ಯಾ
ಆದರೆ ದುಡಿಯೋದು ತೋಳು
ನೆನಪಿರ್‍ಲಿ
ಅನ್ನಾ ಮೊದಲು ಹೋಗಬೇಕು ಹೊಟ್ಟಿಗೆ
ಅಲ್ಲಿಂದ ಜೀರ್ಣಾಗಿ ರಕ್ತಾಗಿ
ಹರೀಬೇಕೆಲ್ಲಾ ಕಡೀಗೆ
ತಲಿಗು ಕೂಡಾ
ನಾ ಮಾತಾಡದೇ ಇರಭೌದು
ಆದರೆ ಒಮ್ಮೆಲೇ ಮಾಡಿ ತೋರಿಸ್ತೀನಿ
ಎಚ್ಚರಾ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ತ.ರ.ಸು ಕಾದಂಬರಿಗಳಾಧರಿತ ಚಲನಚಿತ್ರಗಳು
Next post ಲಿಂಗಮ್ಮನ ವಚನಗಳು – ೯೦

ಸಣ್ಣ ಕತೆ

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

  • ಹಳ್ಳಿ…

    ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿ‌ಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…