Home / ಕವನ / ಕವಿತೆ / ಉಳಿಸಿರೋ

ಉಳಿಸಿರೋ

ಆಯ್ದು ತಿನ್ನುವ ಕೋಳಿಗಳ
ಕಾಲು ಕುತ್ತಿಗೆಗಳು ಯಾವಾಗ ಮುರಿದಾವು
ಎಂದು ಹೇಳಲಾಸಲ್ಲ
ಯಾವ ಹಣ ರಣಹದ್ದುಗಳ ಬಾಯಿಗೆ
ನಮ್ಮ ಹೀಚು ಹೂಮೊಗ್ಗುಗಳು
ಸಿಕ್ಕಾವು ಹೇಳಲಾಸಲ್ಲ
ರಕ್ಕಸ ಬೀದಿಗಳಲ್ಲಿ ಯಮಲೋಕದ
ಬಾಗಿಲುಗಳ ಮುಂದೆ ಸುಳಿದಾಟ

ಆರಡಿ ನೆಲಗಳಿಗೆ, ನಾಲ್ಕು ಹೆಗಲುಗಳಿಗೆ
ಹೊಯ್ದುಕೊಳ್ಳುವ ಬಾಯಿ ಬಸುರುಗಳಿಗೆ
ಮುಂಗಡ ಹೇಳಿದಂತಾಗುವುದೋ,
ವಾಯು ವಿಹಾರದ ಹೊಸ ಪಾರಿವಾಳಗಳ
ಪಿಸುಮಾತುಗಳು ಗಂಟಲಲ್ಲೇ ಸಿಕ್ಕು
ಯಾವ ರಾವಣಪ್ಪರು, ಕೀಚಕನ ಕುಲಜರು
ಆ ಹಸಿ ಮಾಂಸ ಚಪ್ಪರಿಸುವರೋ,
ರೆಕ್ಕೆ ಪುಚ್ಚ ಸುಲಿಯುವರೋ,
ಹೇಳಲಾಸಲ್ಲ

ನಮ್ಮ ಹರಣಗಳು ಗಾಳಿಯಲ್ಲಿ
ಹಾರಾಡಿ ಗೋಳಿಡುತ್ತಿವೆ
ಉಳಿಸಿರೋ ನಮ್ಮ
ನಾವು ದುರ್ಬಲರು! ಅಬಲೆಯರು!
ಹಸುಕಂದಗಳು! ಉಳಿಸಿರೋ
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...