Home / ಕವನ / ಕವಿತೆ / ಕನ್ನಡಮ್ಮ

ಕನ್ನಡಮ್ಮ

ರಾಜ್ಯೋತ್ಸವ ಬಂದೇ ಬಿಡುತ್ತದೆ
ಚಳಿಗಾಲ ಕಾಲಿಕ್ಕುತ್ತಿದ್ದಂತೆಯೇ
ಮುದುರಿದ ಕನ್ನಡಮ್ಮನ ಶೃಂಗಾರ
ನಾಡು ನುಡಿಗಳ ಹೊಗಳಿಕೆ
ರಾಜಕೀಯದವುಗಳ ಉದ್ದುದ್ದ ಭಾಷಣ
ಸಾಹಿತಿಗಳ ಹೊಗಳು ಭಟ್ಟಂಗಿ ಕೆಲಸ
ಪ್ರಶಸ್ತಿಗಳ ಸುರಿಮಳೆ.
ನಾಡಿನ ಜನರೇ ಎದ್ದೇಳಿ ಎದ್ದೇಳಿ
ಬರೆಯುವ ಕವಿಗಳ
ಕಾವ್ಯಕನ್ನಿಕೆ ಇತ್ತಿತ್ತಲಾಗಿ
ಸುಸ್ತಾಗಿ ಜೋಲಿ ಹೋಗಿ ಬೀಳುತ್ತಿದ್ದಾಳೆ.
ಆಯಿತಲ್ಲ ಕನ್ನಡಮ್ಮನಿಗೆ
ನೂರಾರು ಸಾವಿರಾರು ವರುಷಗಳು
ಹಸಿವು ಬಡತನ ನಿರುದ್ಯೋಗ
ಕನ್ನಡಮ್ಮ ಸಿಕ್ಕು ಒದ್ದಾಡುತ್ತಿದ್ದಾಳೆ,
ನಾಲಿಗೆ ತೊದಲುತಿದೆ
ನೆರೆ ರಾಜ್ಯಗಳ ಭಾಷೆಯಲಿ
ವಿದೇಶಿಯರ ವಿಲಾಸಗಳಲಿ
ಪಬ್ – ಡಿಸ್ಕೋ ಸಂಸ್ಕೃತಿಗಳಲಿ
ಅಷ್ಟೇ ಅಲ್ಲ
ತನ್ನ ಸ್ವಾರ್ಥ ರಾಜಕೀಯ
ಮಕ್ಕಳ ಅಧಿಕಾರ ದಾಹ ಕಚ್ಚಾಟಗಳಲಿ
ಸಾಹಿತಿಗಳ ಇಬ್ಬಗೆಯ ನೀತಿಗಳಲಿ
ಸಮಾಜದ ಕಳಂಕ ಲಂಪಟರ
ಧೂರ್ತ ಅನಾಚಾರ
ಅತ್ಯಾಚಾರರ ಹತ್ಯಾಕಾಂಡಗಳಲಿ

ಅಮ್ಮ ಕನ್ನಡಮ್ಮ
ಸುಸ್ತಾಗುತ್ತಿದ್ದಾಳೆ.
ಪ್ರತಿ ವರ್ಷಗಳ ರಾಜ್ಯೋತ್ಸವಗಳಲಿ
ಕನ್ನಡಮ್ಮನ ಮಕ್ಕಳು
ಏರಿದ್ದೆಷ್ಟೇ ಇದ್ದರೂ
ಅಮ್ಮ ಮಾತ್ರ ಇನ್ನೂ ಇನ್ನೂ
ಪ್ರಪಾತದಾಳಕ್ಕೆ ಇಳಿಯುತ್ತಲೇ ಇದ್ದಾಳೆ
ಭರ್ರನೆ ಬಂದು ಝರ್ರನೆ ಇಳಿದು ಹೋಗುವ
ರಾಜ್ಯೋತ್ಸವ ರಾಜಕೀಯ
ಉತ್ಸವಗಳಾಗುತ್ತಿವೆ,
ಕನ್ನಡಮ್ಮನಿಗೆ ಕ್ಯಾನ್ಸರ ಬಂದರೇನು ಗತಿ!
ಬನ್ನಿ ಎಲ್ಲರೂ
ಕನ್ನಡಮ್ಮನಿಗೆ ಪ್ರೀತಿ ಕೊಡೋಣ
ಸುತ್ತುವರಿಯೋಣ, ಕಾಯೋಣ
ಉಳಿಸಿಕೊಳ್ಳೋಣ
ಅವಳ ಮುಖದ ಮೇಲಿನ
ಶಾಂತ ಸ್ವರೂಪದ
ಸಂತೋಷದ ಹೆಮ್ಮೆಯ
ನಗು ಕಾಣೋಣ
ಬನ್ನಿ ಎಲ್ಲರೂ, ಬನ್ನಿ ಎಲ್ಲರೂ
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...