ಕನ್ನಡಮ್ಮ

ರಾಜ್ಯೋತ್ಸವ ಬಂದೇ ಬಿಡುತ್ತದೆ
ಚಳಿಗಾಲ ಕಾಲಿಕ್ಕುತ್ತಿದ್ದಂತೆಯೇ
ಮುದುರಿದ ಕನ್ನಡಮ್ಮನ ಶೃಂಗಾರ
ನಾಡು ನುಡಿಗಳ ಹೊಗಳಿಕೆ
ರಾಜಕೀಯದವುಗಳ ಉದ್ದುದ್ದ ಭಾಷಣ
ಸಾಹಿತಿಗಳ ಹೊಗಳು ಭಟ್ಟಂಗಿ ಕೆಲಸ
ಪ್ರಶಸ್ತಿಗಳ ಸುರಿಮಳೆ.
ನಾಡಿನ ಜನರೇ ಎದ್ದೇಳಿ ಎದ್ದೇಳಿ
ಬರೆಯುವ ಕವಿಗಳ
ಕಾವ್ಯಕನ್ನಿಕೆ ಇತ್ತಿತ್ತಲಾಗಿ
ಸುಸ್ತಾಗಿ ಜೋಲಿ ಹೋಗಿ ಬೀಳುತ್ತಿದ್ದಾಳೆ.
ಆಯಿತಲ್ಲ ಕನ್ನಡಮ್ಮನಿಗೆ
ನೂರಾರು ಸಾವಿರಾರು ವರುಷಗಳು
ಹಸಿವು ಬಡತನ ನಿರುದ್ಯೋಗ
ಕನ್ನಡಮ್ಮ ಸಿಕ್ಕು ಒದ್ದಾಡುತ್ತಿದ್ದಾಳೆ,
ನಾಲಿಗೆ ತೊದಲುತಿದೆ
ನೆರೆ ರಾಜ್ಯಗಳ ಭಾಷೆಯಲಿ
ವಿದೇಶಿಯರ ವಿಲಾಸಗಳಲಿ
ಪಬ್ – ಡಿಸ್ಕೋ ಸಂಸ್ಕೃತಿಗಳಲಿ
ಅಷ್ಟೇ ಅಲ್ಲ
ತನ್ನ ಸ್ವಾರ್ಥ ರಾಜಕೀಯ
ಮಕ್ಕಳ ಅಧಿಕಾರ ದಾಹ ಕಚ್ಚಾಟಗಳಲಿ
ಸಾಹಿತಿಗಳ ಇಬ್ಬಗೆಯ ನೀತಿಗಳಲಿ
ಸಮಾಜದ ಕಳಂಕ ಲಂಪಟರ
ಧೂರ್ತ ಅನಾಚಾರ
ಅತ್ಯಾಚಾರರ ಹತ್ಯಾಕಾಂಡಗಳಲಿ

ಅಮ್ಮ ಕನ್ನಡಮ್ಮ
ಸುಸ್ತಾಗುತ್ತಿದ್ದಾಳೆ.
ಪ್ರತಿ ವರ್ಷಗಳ ರಾಜ್ಯೋತ್ಸವಗಳಲಿ
ಕನ್ನಡಮ್ಮನ ಮಕ್ಕಳು
ಏರಿದ್ದೆಷ್ಟೇ ಇದ್ದರೂ
ಅಮ್ಮ ಮಾತ್ರ ಇನ್ನೂ ಇನ್ನೂ
ಪ್ರಪಾತದಾಳಕ್ಕೆ ಇಳಿಯುತ್ತಲೇ ಇದ್ದಾಳೆ
ಭರ್ರನೆ ಬಂದು ಝರ್ರನೆ ಇಳಿದು ಹೋಗುವ
ರಾಜ್ಯೋತ್ಸವ ರಾಜಕೀಯ
ಉತ್ಸವಗಳಾಗುತ್ತಿವೆ,
ಕನ್ನಡಮ್ಮನಿಗೆ ಕ್ಯಾನ್ಸರ ಬಂದರೇನು ಗತಿ!
ಬನ್ನಿ ಎಲ್ಲರೂ
ಕನ್ನಡಮ್ಮನಿಗೆ ಪ್ರೀತಿ ಕೊಡೋಣ
ಸುತ್ತುವರಿಯೋಣ, ಕಾಯೋಣ
ಉಳಿಸಿಕೊಳ್ಳೋಣ
ಅವಳ ಮುಖದ ಮೇಲಿನ
ಶಾಂತ ಸ್ವರೂಪದ
ಸಂತೋಷದ ಹೆಮ್ಮೆಯ
ನಗು ಕಾಣೋಣ
ಬನ್ನಿ ಎಲ್ಲರೂ, ಬನ್ನಿ ಎಲ್ಲರೂ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ರಾಮುಲುವೂ ಸೋಮುಲುವೂ
Next post ಮ್ಯಾಚಿಂಗ್

ಸಣ್ಣ ಕತೆ

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

  • ಪ್ರೇಮನಗರಿಯಲ್ಲಿ ಮದುವೆ

    ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

cheap jordans|wholesale air max|wholesale jordans|wholesale jewelry|wholesale jerseys