Home / ಕವನ / ಕವಿತೆ / ಕನ್ನಡಮ್ಮ

ಕನ್ನಡಮ್ಮ

ರಾಜ್ಯೋತ್ಸವ ಬಂದೇ ಬಿಡುತ್ತದೆ
ಚಳಿಗಾಲ ಕಾಲಿಕ್ಕುತ್ತಿದ್ದಂತೆಯೇ
ಮುದುರಿದ ಕನ್ನಡಮ್ಮನ ಶೃಂಗಾರ
ನಾಡು ನುಡಿಗಳ ಹೊಗಳಿಕೆ
ರಾಜಕೀಯದವುಗಳ ಉದ್ದುದ್ದ ಭಾಷಣ
ಸಾಹಿತಿಗಳ ಹೊಗಳು ಭಟ್ಟಂಗಿ ಕೆಲಸ
ಪ್ರಶಸ್ತಿಗಳ ಸುರಿಮಳೆ.
ನಾಡಿನ ಜನರೇ ಎದ್ದೇಳಿ ಎದ್ದೇಳಿ
ಬರೆಯುವ ಕವಿಗಳ
ಕಾವ್ಯಕನ್ನಿಕೆ ಇತ್ತಿತ್ತಲಾಗಿ
ಸುಸ್ತಾಗಿ ಜೋಲಿ ಹೋಗಿ ಬೀಳುತ್ತಿದ್ದಾಳೆ.
ಆಯಿತಲ್ಲ ಕನ್ನಡಮ್ಮನಿಗೆ
ನೂರಾರು ಸಾವಿರಾರು ವರುಷಗಳು
ಹಸಿವು ಬಡತನ ನಿರುದ್ಯೋಗ
ಕನ್ನಡಮ್ಮ ಸಿಕ್ಕು ಒದ್ದಾಡುತ್ತಿದ್ದಾಳೆ,
ನಾಲಿಗೆ ತೊದಲುತಿದೆ
ನೆರೆ ರಾಜ್ಯಗಳ ಭಾಷೆಯಲಿ
ವಿದೇಶಿಯರ ವಿಲಾಸಗಳಲಿ
ಪಬ್ – ಡಿಸ್ಕೋ ಸಂಸ್ಕೃತಿಗಳಲಿ
ಅಷ್ಟೇ ಅಲ್ಲ
ತನ್ನ ಸ್ವಾರ್ಥ ರಾಜಕೀಯ
ಮಕ್ಕಳ ಅಧಿಕಾರ ದಾಹ ಕಚ್ಚಾಟಗಳಲಿ
ಸಾಹಿತಿಗಳ ಇಬ್ಬಗೆಯ ನೀತಿಗಳಲಿ
ಸಮಾಜದ ಕಳಂಕ ಲಂಪಟರ
ಧೂರ್ತ ಅನಾಚಾರ
ಅತ್ಯಾಚಾರರ ಹತ್ಯಾಕಾಂಡಗಳಲಿ

ಅಮ್ಮ ಕನ್ನಡಮ್ಮ
ಸುಸ್ತಾಗುತ್ತಿದ್ದಾಳೆ.
ಪ್ರತಿ ವರ್ಷಗಳ ರಾಜ್ಯೋತ್ಸವಗಳಲಿ
ಕನ್ನಡಮ್ಮನ ಮಕ್ಕಳು
ಏರಿದ್ದೆಷ್ಟೇ ಇದ್ದರೂ
ಅಮ್ಮ ಮಾತ್ರ ಇನ್ನೂ ಇನ್ನೂ
ಪ್ರಪಾತದಾಳಕ್ಕೆ ಇಳಿಯುತ್ತಲೇ ಇದ್ದಾಳೆ
ಭರ್ರನೆ ಬಂದು ಝರ್ರನೆ ಇಳಿದು ಹೋಗುವ
ರಾಜ್ಯೋತ್ಸವ ರಾಜಕೀಯ
ಉತ್ಸವಗಳಾಗುತ್ತಿವೆ,
ಕನ್ನಡಮ್ಮನಿಗೆ ಕ್ಯಾನ್ಸರ ಬಂದರೇನು ಗತಿ!
ಬನ್ನಿ ಎಲ್ಲರೂ
ಕನ್ನಡಮ್ಮನಿಗೆ ಪ್ರೀತಿ ಕೊಡೋಣ
ಸುತ್ತುವರಿಯೋಣ, ಕಾಯೋಣ
ಉಳಿಸಿಕೊಳ್ಳೋಣ
ಅವಳ ಮುಖದ ಮೇಲಿನ
ಶಾಂತ ಸ್ವರೂಪದ
ಸಂತೋಷದ ಹೆಮ್ಮೆಯ
ನಗು ಕಾಣೋಣ
ಬನ್ನಿ ಎಲ್ಲರೂ, ಬನ್ನಿ ಎಲ್ಲರೂ
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...