Home / ಕವನ / ಕವಿತೆ / ಬಾ ಮತ್ತೊಮ್ಮೆ

ಬಾ ಮತ್ತೊಮ್ಮೆ

ಪಕ್ಷಗಳು ಕುದಿಯುತಿವೆ ರಾಜಕೀಯ ಕುಲುಮೆಯಲಿ
ಆಕಾರಕ್ಕೆ ಬರದೆ ಮತ್ತೆ ಮತ್ತೆ ಬೀಳುತಲಿವೆ
ಅಸತ್ಯದ ಕುಲುಮೆಯೊಳಗೆ
ಸುತ್ತಿಗೆ ಹಿಡಿದು ಮತ್ತೊಮ್ಮೆ
ಬರಬಾರದೇ ನೀನು ‘ಕಮ್ಮಾರನಾಗಿ’
ಜಾತಿ ಮತ ಕುಲ ಧರ್ಮಗಳ
ಹೆಸರಿನಲಿ ಹುಟ್ಟಿಸುತಿಹರು ಹೊಸ ಹೊಸ
ಪಕ್ಷಗಳು ಗಂಟಲು ಹರಿದು ಕಿರುಚಿತಿಹರು
ಪಕ್ಷಗಳ ನೇತಾರರು
ಮೋಸ ಮಾಡುತಿವೆ ಬಡವರಿಗೆ
ಮೋಡಿ ಹಾಕುವ ಆಶ್ವಾಸನೆಯ ಭರವಸೆಗಳು
ಭಾವನೆಗಳಿಗೆ ಬೆಲೆ ಕೊಡದೆ
ಮತ ಗಳಿಸುವ ಕದೀಮರನೊಯ್ದು
ಚಿಲುಮೆಗೊಮ್ಮೆ ನೂಕಲು ಕರಕಾಗಿಸಲು
ಮತ್ತೊಮ್ಮೆ ಬರಬಾರದೇ ನೀನು….
ಬಾಂಬುಗಳಿಗೆ ಹತರಾಗುತ ನೋವಿನಲಿ ನಲಗುತ
ಮಾತನಾಡಲಾಗದವರ ಬಂಡೇಳದವರ
ಹಸಿದವರ ಬೆವರು ಹರಿಸುವವರ
ಕಾಲು ಕಸವಾಗುವವರ ಬೆಲೆಯೇ ಇಲ್ಲದವರ
ಕನಸುಗಳು ಕುಸಿಯುತಿವೆ.
‘ಬರುತ್ತಿಲ್ಲ ಈಗ ಸಾಂತ್ವನಕ್ಕೆ
ನಿನ್ನ ಸತ್ಯದ ಅಹಿಂಸೆಯ ಮಾತುಗಳು
ಹೋದವೆಲ್ಲಿ ನಿನ್ನ ಸತ್ಯ ಅಹಿಂಸೆಯ ಕ್ರಾಂತಿಗಳು’
ಅನರ್ಥಗಳಿಗೆ ಹಪಹಪಿಸುವ
ಚುನಾವಣೆ ಪ್ರಜಾಪ್ರಭುತ್ವಕ್ಕೆ ಹೊಡೆದಾಡುವ
ಈ ರಾಜಕೀಯ ಕ್ರಾಂತಿಗಳು ತೋಳ
ಕುರಿಯಾಟಗಳ ರಕ್ತಕ್ರಾಂತಿಗಳಾಗುತಲಿವೆ
ಬಿಡು ಇನ್ನು ಮೌನ ಹಿಡಿ ಇನ್ನು ಸುತ್ತಿಗೆ
ಕೊಡು ಇನ್ನು ಪೆಟ್ಟು ಬಾ ಮತ್ತೊಮ್ಮೆ…
ಮಾಂಸ ಮೃಷ್ಟಾನ್ನ ಭೋಜನದ ಬೊಜ್ಜುಗಾರರಿಗೆ
ಏರ್ ಕಂಡೀಷನ್‌ದ ಮೋಜುಗಾರರಿಗೆ
ಅಧಿಕಾರ ಮದದ ಗೂಳಿ ಗೂಂಡಾಗಳಿಗೆ
ಗುಂಡಿನ ಲಾಬಿಗಳಲಿ ಹೊರಳಾಡುವ ಹೆಗ್ಗಣ ಹದ್ದುಗಳಿಗೆ
ಧರ್ಮದ ನೆಪ ಧರ್ಮಾಂಧರಿಗೆ
ಸಮಯ ಸಾಧಕರಿಗೆ ಪಕ್ಷಾಂತರಿಗಳನೆಲ್ಲ
ಚಿಲುಮೆಯಗ್ನಿಯಲಿ ಹಾಕು ಸುಡು
ಕುಲುಮೆಯಲಿ ಕಾಯಿಸಿ ಕರಗಿಸಿ
ಸುತ್ತುಗೆಯಿಂದ ಹೊಡೆ ಹೊಡೆದು
ರೂಪ ಕೊಡಲು ಬಾ ಮತ್ತೊಮ್ಮೆ
ದೇಶಕ್ಕೆ ಕಮ್ಮಾರನಾಗಿ
ಕೇಳಿಸಲಿ ಮತ್ತೊಮ್ಮೆ ಆ
ಚಮ್ಮಟೆ ಧ್ವನಿ ದೇಶದೊಳ ಹೊರಗೆಲ್ಲ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...