Home / ಕವನ / ಕವಿತೆ / ಬಾ ಮತ್ತೊಮ್ಮೆ

ಬಾ ಮತ್ತೊಮ್ಮೆ

ಪಕ್ಷಗಳು ಕುದಿಯುತಿವೆ ರಾಜಕೀಯ ಕುಲುಮೆಯಲಿ
ಆಕಾರಕ್ಕೆ ಬರದೆ ಮತ್ತೆ ಮತ್ತೆ ಬೀಳುತಲಿವೆ
ಅಸತ್ಯದ ಕುಲುಮೆಯೊಳಗೆ
ಸುತ್ತಿಗೆ ಹಿಡಿದು ಮತ್ತೊಮ್ಮೆ
ಬರಬಾರದೇ ನೀನು ‘ಕಮ್ಮಾರನಾಗಿ’
ಜಾತಿ ಮತ ಕುಲ ಧರ್ಮಗಳ
ಹೆಸರಿನಲಿ ಹುಟ್ಟಿಸುತಿಹರು ಹೊಸ ಹೊಸ
ಪಕ್ಷಗಳು ಗಂಟಲು ಹರಿದು ಕಿರುಚಿತಿಹರು
ಪಕ್ಷಗಳ ನೇತಾರರು
ಮೋಸ ಮಾಡುತಿವೆ ಬಡವರಿಗೆ
ಮೋಡಿ ಹಾಕುವ ಆಶ್ವಾಸನೆಯ ಭರವಸೆಗಳು
ಭಾವನೆಗಳಿಗೆ ಬೆಲೆ ಕೊಡದೆ
ಮತ ಗಳಿಸುವ ಕದೀಮರನೊಯ್ದು
ಚಿಲುಮೆಗೊಮ್ಮೆ ನೂಕಲು ಕರಕಾಗಿಸಲು
ಮತ್ತೊಮ್ಮೆ ಬರಬಾರದೇ ನೀನು….
ಬಾಂಬುಗಳಿಗೆ ಹತರಾಗುತ ನೋವಿನಲಿ ನಲಗುತ
ಮಾತನಾಡಲಾಗದವರ ಬಂಡೇಳದವರ
ಹಸಿದವರ ಬೆವರು ಹರಿಸುವವರ
ಕಾಲು ಕಸವಾಗುವವರ ಬೆಲೆಯೇ ಇಲ್ಲದವರ
ಕನಸುಗಳು ಕುಸಿಯುತಿವೆ.
‘ಬರುತ್ತಿಲ್ಲ ಈಗ ಸಾಂತ್ವನಕ್ಕೆ
ನಿನ್ನ ಸತ್ಯದ ಅಹಿಂಸೆಯ ಮಾತುಗಳು
ಹೋದವೆಲ್ಲಿ ನಿನ್ನ ಸತ್ಯ ಅಹಿಂಸೆಯ ಕ್ರಾಂತಿಗಳು’
ಅನರ್ಥಗಳಿಗೆ ಹಪಹಪಿಸುವ
ಚುನಾವಣೆ ಪ್ರಜಾಪ್ರಭುತ್ವಕ್ಕೆ ಹೊಡೆದಾಡುವ
ಈ ರಾಜಕೀಯ ಕ್ರಾಂತಿಗಳು ತೋಳ
ಕುರಿಯಾಟಗಳ ರಕ್ತಕ್ರಾಂತಿಗಳಾಗುತಲಿವೆ
ಬಿಡು ಇನ್ನು ಮೌನ ಹಿಡಿ ಇನ್ನು ಸುತ್ತಿಗೆ
ಕೊಡು ಇನ್ನು ಪೆಟ್ಟು ಬಾ ಮತ್ತೊಮ್ಮೆ…
ಮಾಂಸ ಮೃಷ್ಟಾನ್ನ ಭೋಜನದ ಬೊಜ್ಜುಗಾರರಿಗೆ
ಏರ್ ಕಂಡೀಷನ್‌ದ ಮೋಜುಗಾರರಿಗೆ
ಅಧಿಕಾರ ಮದದ ಗೂಳಿ ಗೂಂಡಾಗಳಿಗೆ
ಗುಂಡಿನ ಲಾಬಿಗಳಲಿ ಹೊರಳಾಡುವ ಹೆಗ್ಗಣ ಹದ್ದುಗಳಿಗೆ
ಧರ್ಮದ ನೆಪ ಧರ್ಮಾಂಧರಿಗೆ
ಸಮಯ ಸಾಧಕರಿಗೆ ಪಕ್ಷಾಂತರಿಗಳನೆಲ್ಲ
ಚಿಲುಮೆಯಗ್ನಿಯಲಿ ಹಾಕು ಸುಡು
ಕುಲುಮೆಯಲಿ ಕಾಯಿಸಿ ಕರಗಿಸಿ
ಸುತ್ತುಗೆಯಿಂದ ಹೊಡೆ ಹೊಡೆದು
ರೂಪ ಕೊಡಲು ಬಾ ಮತ್ತೊಮ್ಮೆ
ದೇಶಕ್ಕೆ ಕಮ್ಮಾರನಾಗಿ
ಕೇಳಿಸಲಿ ಮತ್ತೊಮ್ಮೆ ಆ
ಚಮ್ಮಟೆ ಧ್ವನಿ ದೇಶದೊಳ ಹೊರಗೆಲ್ಲ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...