ಪಾಹಿ ಪರಬ್ರಹ್ಮಣಿ ತ್ರಾಣಿ

ಪಾಹಿ ಪರಬ್ರಹ್ಂಣಿ ತ್ರಾಣಿ
ಪಾಹಿ ಪರಬ್ರಹ್ಮಣಿ                            ||ಪ||

ಸೇವಿತ ಕಿಂಕರ ಸದಾ ಪರಜೀವ ಸದ್ಗುರು ಭಾವನಾತ್ಮಳೆ
ದೇವಿ ಪರಾತ್ಪರ ಕಾಯ್ವುದೆನ್ನ ಸದಾವಕಾಲದಿ            ||೧||

ಶುಂಭ ನಿಶುಂಭ ಸಂಹಾರಿಣಿ ನಿಶುಂಭನ ಡಂಬ ಪರಿಹರಿಣಿ
ನಂಬಿ ನಿನ್ನ ಪಾದಾಂಬುಜಕೆ ಕೈ ಇಂಬುಗೊಟ್ಟೆನು ಕರುಣಿಸೆನುತಲಿ    ||೨||

ಶುಂಭರಾರಿಯ ಮನಕೆ ಮೈತುಂಬಿ ನಲಿಯುತ ನೊಲುಮೆಯಿಂದಲಿ
ಕಂಬುಕಂದರೆ ಭಕ್ತಪ್ರೇಮಿಯೆ ನಂಬಿದೆನು ಸದಾವ ಕಾಲದಿ            ||೩||

ವಸುಧೆಪಾಲಕಳೆ ನಿನ್ನ ಅಸಮ ಮಹಿಮೆಯ ಪೊಗಳುವೆ
ವಸುಧೆಯೊಳು ಶಿಶುನಾಳಧೀಶನ ಅಸಮ ಪಾದಕೆ ನುತಿಸಿ ಬೇಡುವೆ        ||೪||
*    *    *    *

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಾನಾಪಮಾನ ನಿನ್ನವಮ್ಮಾ
Next post ನಾ ಕಂಡೆನೀಗ ಶಾಕಾಂಬರಿಯಾ

ಸಣ್ಣ ಕತೆ

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

  • ಹಳ್ಳಿ…

    ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿ‌ಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…