ಪಾಹಿ ಪರಬ್ರಹ್ಮಣಿ ತ್ರಾಣಿ

ಪಾಹಿ ಪರಬ್ರಹ್ಂಣಿ ತ್ರಾಣಿ
ಪಾಹಿ ಪರಬ್ರಹ್ಮಣಿ                            ||ಪ||

ಸೇವಿತ ಕಿಂಕರ ಸದಾ ಪರಜೀವ ಸದ್ಗುರು ಭಾವನಾತ್ಮಳೆ
ದೇವಿ ಪರಾತ್ಪರ ಕಾಯ್ವುದೆನ್ನ ಸದಾವಕಾಲದಿ            ||೧||

ಶುಂಭ ನಿಶುಂಭ ಸಂಹಾರಿಣಿ ನಿಶುಂಭನ ಡಂಬ ಪರಿಹರಿಣಿ
ನಂಬಿ ನಿನ್ನ ಪಾದಾಂಬುಜಕೆ ಕೈ ಇಂಬುಗೊಟ್ಟೆನು ಕರುಣಿಸೆನುತಲಿ    ||೨||

ಶುಂಭರಾರಿಯ ಮನಕೆ ಮೈತುಂಬಿ ನಲಿಯುತ ನೊಲುಮೆಯಿಂದಲಿ
ಕಂಬುಕಂದರೆ ಭಕ್ತಪ್ರೇಮಿಯೆ ನಂಬಿದೆನು ಸದಾವ ಕಾಲದಿ            ||೩||

ವಸುಧೆಪಾಲಕಳೆ ನಿನ್ನ ಅಸಮ ಮಹಿಮೆಯ ಪೊಗಳುವೆ
ವಸುಧೆಯೊಳು ಶಿಶುನಾಳಧೀಶನ ಅಸಮ ಪಾದಕೆ ನುತಿಸಿ ಬೇಡುವೆ        ||೪||
*    *    *    *

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಾನಾಪಮಾನ ನಿನ್ನವಮ್ಮಾ
Next post ನಾ ಕಂಡೆನೀಗ ಶಾಕಾಂಬರಿಯಾ

ಸಣ್ಣ ಕತೆ

  • ಜಡ

    ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…