ಗಿರಣಿ ವಿಸ್ತಾರ ನೋಡಮ್ಮಾ

ಗಿರಣಿ ವಿಸ್ತಾರ ನೋಡಮ್ಮಾ
ಶರಣಿ ಕೂಡಮ್ಮ ||ಪ||

ಧರಣಿಪತಿಯು ರಾಣಿ
ಕರುಣಾಕ ರಾಜ್ಯಕೆ
ತರಿಸಿದ ಘನಚೋದ್ಯವೋ ಚೀನಾದ ವಿದ್ಯವೋ ||ಅ.ಪ.||

ಜಲ ಆಗ್ನಿ ವಾಯು ಒಂದಾಗಿ
ಕಲೆತು ಚಂದಾಗಿ
ಜಲ ಅಗ್ನಿ ವಾಯು ಒಂದಾಗಿ
ನೆಲದಿಂದ ಗಗನಕ್ಕೆ ಮುಟ್ಟಿದಂತೆಸೆವುದು
ಚಲುವ ಚನ್ನಿಗವಾದ ಕಂಭವೋ, ಹೊಗಿಯ ಬಿಂಬವೋ ||೧||

ಒಳಗೊಂದು ಬೇರೆ ಆಕಾರ
ತಿಳಕೋ ಚಮತ್ಕಾರ
ಒಳಗೊಂದು ಬೇರೆ ಆಕಾರ
ದಳಗಳೊಂಭತ್ತು ಚಕ್ರ ಸುಳಿವ ಸೂತ್ರಾಧಾರ
ಲಾಳಿ ಮೂರು ಕೊಳವಿಯೊಳು ಎಳೆತುಂಬುತದರೊಳು ||೨||

ಅಲ್ಲಿ ಬರದಿಟ್ಟರಳಿ ಹಿಂಜಿ
ಅಲ್ಲ್ಯಾದವು ಹಂಜಿ
ಅಲ್ಲಿ ಬರದಿಟ್ಟರಳಿ ಹಿಂಜಿ
ಗಾಲಿಯೆರಡರ ಮೇಲೆ ಮೂಲಬ್ರಹ್ಮದ ಶೀಲ
ನಾಡಿ ಸುಷುಮ್ನನು ಕೂಡಿ ಅಲ್ಲ್ಯಾಯ್ತೋ ಕುಕ್ಕಡಿ ||೩||

ಪರಮಾನೆಂಬುವ ಪಟ್ಟೇವೋ ಅಲ್ಲೆ
ಮಾರಾಕಿಟ್ಟೇವೋ ಅಲ್ಲೆ
ಪರಮಾನೆಂಬುವ ಪಟ್ಟೇವೋ
ಧರೆಯೊಳು ಶಿಶುನಾಳ ದೇವಾಂಗ ಋಷಿಯಿಂದ
ನೇಸಿ ಹಚ್ಚಡ ಹೊಚ್ಚಿತೋ ಲೋಕ ಮೆಚ್ಚಿತೋ ||೪||

****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಾನು ನಿನ್ನನ್ನು ಪ್ರೀತಿಸುತ್ತೇನೆ
Next post ವಿಶ್ವರೂಪ

ಸಣ್ಣ ಕತೆ

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

  • ಅವರು ನಮ್ಮವರಲ್ಲ

    ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…