ಚಳಿಗಾಲದ ಅಗ್ಗಿಷ್ಟಿಕೆಯ ಬಿಸಿ
ಒಳ ಹೊರಗೆಲ್ಲ ಸುಟ್ಟು ಕರಕಲು
ಬೆಚ್ಚನೆಯ ಬೂದಿಯೊಳಗೆ ಸದಾ ಅವಳ ಚಿತ್ರ.
ಮೊಳಕೆಯೊಡೆಯುತ್ತವೆ ಮುರುಟಿದ ಕಾಳುಗಳು
ಬರಸೆಳೆತದ ಚಿಗುರು ಎಲೆ
ಹುಚ್ಚು ಹಿಡಿಸುವ ಹಚ್ಚೆಯ ಚಿತ್ತಾರ
ಮನೆ ತುಂಬ ರಂಗೋಲಿಯ
ಚಿತ್ತಾಕರ್ಷಕ ಗೆರೆಗಳು
ಪ್ರಶಾಂತ ಕಡಲಿಗೆ ನೀಲಿ ಕೋಟು
ಜೇಬು ತುಂಬೆಲ್ಲ ರಂಗು ರಂಗಿನ ಮುತ್ತುಗಳು
ಕಬಳಿಸಿದಷ್ಟು ಇನ್ನೂ ಗುಳುಗುಳಿಸುವ ರತ್ನಗಳು
ಚಿವುಟಿದಷ್ಟೂ ಚಿಗಿಯುವ
ಕೊರಡು ಕೊನರುವ ಸೃಷ್ಟಿ ಲಯ
ಪ್ರೀತಿಯೊಳಗಿನೋನ್ಮಾದಕೆ ಬಿಡದ ಛಲ.
*****
Related Post
ಸಣ್ಣ ಕತೆ
-
ಹನುಮಂತನ ಕಥೆ
ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…
-
ಮೌನರಾಗ
ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…
-
ಕರಾಚಿ ಕಾರಣೋರು
ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…
-
ಎರಡು ರೆಕ್ಕೆಗಳು
ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…
-
ಇಬ್ಬರು ಹುಚ್ಚರು
ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…