Home / ಕವನ / ಕವಿತೆ / ನರ್ತಕಿ ಬಂದಳು

ನರ್ತಕಿ ಬಂದಳು

ನರ್ತಕಿ ಬಂದಳು ಛಲ್‌ಝಲ್ ನಾದದಿ
ಠಮ ಢಮ ತಾಳಕೆ ಕುಣಿಯುತ್ತ
ಪಾತರಗಿತ್ತಿಯ ಆ ಕುಣಿತ.
ಪಾರ್ಥ ಸುಭದ್ರೆಯ ರಾಧಾಕೃಷ್ಣರ-
ನೊಬ್ಬಳೆ ತಾನೆಂದೆಣಿಸುತ್ತ
ರಂಗಸ್ಥಳದಲಿ ತಿರುಗುತ್ತ.

ತುಟಿಯಿಂದುರುಳುವ ಹಾಡಿನ ತನಿರಸ
ಮೌಕ್ತಿಕ ಮಣಿಯಂತುರುಳುವುದು;
ತಾಳದ ಓಜೆಗೆ ಜಾರುವುದು!
ಕತ್ತಲೆ ನಡುವಣ ಚಂದ್ರನ ಬಿಂಬವೊ
ಕೆದರಿತ ಹೆರಳದು ಇಕ್ಕೆಡೆಯು
ಸುಂದರ ಮುಖವೊ ಮಿನುಗೆಲೆಯು.

ಕಣ್ಣಾಲಿಗಳನು ಹೊರಳಿಸಿ ಉರುಳಿಸಿ
ದುಂಡನೆ ರುಂಡವನಲುಗಾಡಿ;
ಕಣ್ಣನು ಮೂಗಿನ ಮೇಲಿರಿಸಿ
ಕುಣುಕುಣು ಮೊಣಕಾಲಾಟದಿ ನೋಟದಿ
ಕೊಂಕಿಸಿ ನಡುವನು ಆ ಮಳ್ಳಿ
ಚಂಚಲ ಮಿಂಚಿನ ಬಾನ್‌ಬಳ್ಳಿ!

ಫಾರಸಿ ಹಿಂದೀ ವಂಗೀಯ ಕಲೆ
ಒಂದಾಯಿತು ಇಂದೀ ಮೇಳ!
ಬೃಂದಾವನದ ಆ ಲೀಲಾ!
ಬಂದಳು ನರ್ತಕಿ ಕೈಗಳ ಬೀಸುತ
ಕೆಳಮೇಲಾಂಗಗಳಾಡಿಸುತ
ಮೆಟ್ಟುತ ಬೆಟ್ಟಲಿ ಆ ಕುಣಿತ.

ಓಹೋ ಓಹೋ ಕನ್ನಡ ಗಾನ
‘ಕಥಕಳಿ’ಯಾಟದ ಬಯಲಾಟ
ಭರತನ ನಾಟ್ಯದ ಮನನೋಟ.
ಲಾಸ್ಯಾನರ್ತನ ನಟಕೇಸರಿ ಮನ
ಜುಂ ಝುಂ ಛಲ್ ಛಲ್ ಈ ಓಜ,
ನರ್ತನ ತೋರಿದ ನಟರಾಜ.

ಹೊರಳುವ ಅಂಗಗಳಾಟವ ನೋಡಿರೊ
ಬೆರಳನು ತೋರವ ತಿರುಳನ್ನು
ಕೊಂಕಿಸಿ ಕಾಲಿನ ನಿಲುವನ್ನು!
ದುಂಡನೆ ತಲೆಯನಲುಗಿಸಿ ತೋರುವ
ಮನ್ಮಥ ಕರೆಯೊ ಅದು ಕೇಳೊ!
ಚಕ ಚಕ ಎದೆಯ ಗೆಲುನೋಡೊ.

ಬಗ್ಗಿದಳೆದ್ದಳು ಹಾರಿದಳೋಡಿದ-
ಳೆಂತೀ ಆಟದ ಈ ಬಲ್ಮೆ
ಕುಲುಕಿತ ಅಂಗಗಳೀ ನಲ್ಮೆ.
ಊರ್ವಶಿ ರಂಭೆಯರಾದಿನದಾಟವ
ತೋರುತ ನರ್ತಕಿ ಬಂದಳದೊ,
ಕುಡಿನೋಟಾಡಿಸಿ ಕುಣಿವಳದೊ!

ಗಿರಿಗಿಟ ತಿರುಗಿದ ತೆರದಲಿ ತಿರುಗಿತು,
ಧಕಥಕ ಧೀಂಕಿಟ ಹಾರಿದಳು
ಗಾಳಿಯ ನರ್ತನ ತೋರಿದಳು.
ವಾನರ ಚೇಷ್ಟಾ ಗೋಷ್ಠಿಯಲಿರಿತಳು
ಹಿಂದೂ ಮುಂದೂ ಜೋಲಾಡಿ
ತನಗೇ ತಾನೇ ತೂಗಾಡಿ.

ಸೂರ್ಯನ ಕಾಂತಿಯ ನೋಡುತ ಭ್ರಾಂತಿಯಿಂ
ಥೈ ಥೈ ಹಾರಿತು-ಆ ರಭಸ
ಲೇ ಲೇ ತಟ್ಟುವ ಪದನ್ಯಾಸ!
ಢಮರುಗ ಭಾರಿಸಿ ಲೋಕವ ತಿರುಗಿಸಿ
ನರ್ತನ ತೋರಿದ ಪರಮೇಶ;
ಬಂದಳು ನರ್ತಕಿ-ಆ ವೇಷ!
*****

Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...