Home / ಕವನ / ಕವಿತೆ / ಕಾರ್ಪೊರೇಶನ್ ಸರ್ಕಲ್ಲಿನ ರಸ್ತೆಗಳು

ಕಾರ್ಪೊರೇಶನ್ ಸರ್ಕಲ್ಲಿನ ರಸ್ತೆಗಳು

ಆ ಸರ್ಕಲ್ಲೇ ಹಾಗೆ ಭಯಪಡಬೇಡಿ,
ಸುತ್ತ ಮುತ್ತಲಿನ ದೊಡ್ಡ ದೊಡ್ಡ ಇಮಾರತಿಯ
ಕೆಳಗೆಲ್ಲ ಒಳಗೆಲ್ಲ ಹೊರಗೆಲ್ಲ
ಸುತ್ತೆಲ್ಲ ಕಾಯುತ್ತಿರುತ್ತಾರೆ ಬೇಟೆಗಾರರು.

ಹಸಿರು ಲೈಟು ಕಣ್ಣುಹೊಡೆದದ್ದೇ ಸಾಕು
ಅದೇನು ತರಾತುರಿ
ಬೇಟೆ ಎಲ್ಲಿ ತಪ್ಪೀತೇನೋ ಎನ್ನುವ ಓಟ,
ಅಬ್ಬಾ! ಸುತ್ತೆಲ್ಲ ಬಣ್ಣ ಬಣ್ಣದ ಕಾರುಗಳ
ವೀರ ಭಂಟರು ಬೇಟೆಗಾರರು ಬರುತ್ತಿದ್ದಾರೆ.

ವಿಧಾನಸೌಧದೆಡೆಗೆ ನುಗ್ಗಿ
ಲೂಟಿ ಮಾಡುವ ರಾಜಕೀಯದವರು-
ಮ್ಯಾಜೆಸ್ಟಿಕ್ ಹೊಕ್ಕು
ಪರ್ಸ್ ಸರ ಹಾರಿಸುವ ಲಘಂಗರು-
ಎಮ್.ಜಿ ರೋಡಿಗೆ ಧಾವಿಸಿ
೫೦%ದ ಸೇಲ್ ಬೋರ್ಡ್ ಹಾಕಿ
ಹಳೇ ಸ್ಟಾಕ್ ಮಾರುವ ಮೋಸಗಾರರು-
ಜೆ. ಸಿ ರೋಡ್, ಕೆ. ಅರ್ ಮಾರ್ಕೆಟ್ಟಿನ
ಡುಪ್ಲಿಕೇಟ್ ಸಾಮಾನಿನ ಖದೀಮರು-
ಸರ್ಕಲ್ಲಿನ ಸುತ್ತ ಧಾವಿಸಿ ಓಡುತ್ತಿದ್ದಾರೆ.

ಇಡೀದಿನ ಬೇಟೆಯಾಡಿ ಗಹಗಹಿಸುವ ಇವರು-
ಡುಪ್ಲಿಕೇಟ್ ಮೋಡಕಾ ತುಂಬಿಕೊಂಡ ಹೋದ ಅವರು-
ಪರ್ಸ ಕಳೆದುಕೊಂಡು
ಮನೆ ಸೇರಲೂ ಕಾಸಿಲ್ಲದೆ ಆಟೋಹಿಡಿದು
ಚಿಲ್ಲರೆ ಹೊಂದಿಸಿ ಉಸಿರುಬಿಟ್ಟಿದ್ದೇನು.
ಇಲ್ಲಿ ಮೋಸ ಹೊಂದಿ ಕಣ್ಣೀರು ಸುರಿಸುವ
ಜಗಳ ಹೊತ್ತಿಕೊಳ್ಳುವ ಸಂಜೆಯ ಸಮಯ.
ಅಲ್ಲಿ ನಡುರಾತ್ರಿಯವರೆಗೂ
ಗುಂಡು ಹಾಕಿ ಕೇಕೆಹೊಡೆಯುವ ಸಂಭ್ರಮ

ಗೊತ್ತಿರಲಿ ನಿಮಗೆ,
ಉದ್ದುದ್ದಾಗಿ, ಅಡ್ಡಡ್ಡಾಗಿ ಡೊಂಕಾಗಿ
ಇಂಬಾಗಿ ಕಾಣಿಸಿಕೊಳ್ಳುವ ರಸ್ತೆಗಳ
ಸುತ್ತ ಮುತ್ತಲಿನ ದೊಡ್ಡ ದೊಡ್ಡ
ಇಮಾರತಿಯ ಕೆಳಗೆಲ್ಲ ಒಳಗೆಲ್ಲ
ಹೊರಗೆಲ್ಲ ಸುತ್ತೆಲ್ಲ ಕಾಯುತ್ತಿರುತ್ತಾರೆ
ಬೇಟೆಗಾರರು.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...