Home / ಕಥೆ / ಜನಪದ / ತಮ್ಮಕ್ಕ – ಅಕ್ಕೆಲೆ

ತಮ್ಮಕ್ಕ – ಅಕ್ಕೆಲೆ

Yeleyಮನೆಗೆ ಬಂದ ಅತಿಥಿ ಅಭ್ಯಾಗತರನ್ನು ಸತ್ಕರಿಸುವುದಕ್ಕೆ ಹಿಂದಿನ ದಿನಗಳಲ್ಲಿ ತಂಬಾಕು ಸೇದುವ ಏರ್ಪಾಡು ಮಾಡಿಕೊಡುತ್ತಿದ್ದರು. ಬಂದವರಿಗೆ ಎಕ್ಕೆಲೆ – ತಂಬಾಕುಗಳನ್ನು ಒದಗಿಸಿದರೆ ದೊಡ್ಡ ಮನ್ನಣೆ ಮಾಡಿದಂತೆ. ಬಂದ ಅತಿಥಿಯಾಗಲಿ ಆಪ್ತರಾಗಲಿ ಮನೆಯವರಿತ್ತ ಎಕ್ಕೆಲೆಯಿಂದ ಚುಟ್ಟಕಟ್ಟಿ ಅದರಲ್ಲಿ ತಂಬಾಕು ತುಂಬಿ, ಮೇಲೆ ಬೆಂಕಿಯ ಕಿಡಿಯಿಟ್ಟು ಧೂಮ್ರಪಾನ ಮಾಡುತ್ತಿದ್ದರು.

ಎಕ್ಕೆಲೆ ತಂಬಾಕುಗಳಿಗೆ ಅಷ್ಟೂಂದು ದೊಡ್ಡಸ್ತಿಕೆ ಬರಲು ಕಾರಣವೇನು ? ಎಕ್ಕೆಲೆ ತಂಬಾಕುಗಳು ಹುಟ್ಟಿಕೊಂಡಿದ್ದು ಎಂದಿನಿಂದ ?

ಬಹಳ ಹಿಂದಿನ ಕಾಲದಲ್ಲಿ ಅ೦ದರೆ ಈ ಭೂಮಿಯ ಮೇಲೆ ಮನುಷ್ಯ ಪ್ರಾಣಿ ಹುಟ್ಟಿಬಂದ ಬಳಿಕ, ಮನೆಯೊಳಗಿನ ಗಂಡು ಹೆಣ್ಣುಗಳಿಗೆ ಹೊಂದಾಣಿಕೆಗೊಳಿಸಿ ಮದುವೆ ಮಾಡುವ ಪರಿಪಾಠವಿರಿಸಿಕೊಳ್ಳಲಾಗಿತ್ತು. ಮುಂದೆ ಅನೇಕ ಶತಮಾನಗಳನ್ನು ಕಳೆಯುವ ಹೊತ್ತಿಗೆ ಮನುಷ್ಯರ ಸಂಖ್ಯೆ ಬೆಳೆಯಿತು. ಅವರು ಗುಂಪು ಗುಂಪಾಗಿ ನೆಲೆಸತೊಡಗಿದರು. ಆವಾಗ ಮನುಷ್ಯ ಪ್ರಮುಖರು ಹೊಸಯುಕ್ತಿಯೊಂದನ್ನು ಕಂಡುಹಿಡಿದರು. ಏನೆಂದರೆ – ಗಂಡಿಗೆ ಹೆಣ್ಣನ್ನು ಮನೆಯೊಳಗಿಂದಲೇ ತೆಗೆದುಕೊಳ್ಳದೆ ಬೇರೂಂದು ಗುಂಪಿನೊಳಗಿನಿಂದ ತರುವುದು ಒಳ್ಳೆಯದು.

ಹೀಗೆ ಕೊಡುಗೂಸುಗಳನ್ನು ಬೇರೊಂದು ಮನೆಗೆ ಕೊಡುವ ಕ್ರಮವು ಬಳಕೆಯಲ್ಲಿ ಬಂದಿತು. ಆದರೆ ಹಳೆಯ ಸಂಪ್ರದಾಯವೂ ಅಧರ್ಮವೆನಿಸುತ್ತಿರಲಿಲ್ಲ. ಬೇರೊಂದು ಗುಂಪಿಗೆ ಕೊಡಮಾಡಿದ ಹೆಣ್ಣನ್ನು ಹಬ್ಬ – ಹುಣ್ಣಿಮೆ. ಉತ್ಸವ ಆಮೋದದ ಕಾಲಕ್ಕೆ ತವರುಮನೆಗೆ ಕರೆತರತೊಡಗಿದರು.

ನಾಗರಪಂಚಮಿ ಹಬ್ಬದ ಕಾಲಕ್ಕೆ ಮನೆಯ ಹೆಣ್ಮಗಳನ್ನು ತವರಿಗೆ ಕರೆತರುವದಕ್ಕೆ ತಮ್ಮನ್ನು ಕಂಟಲಿ ಎತ್ತು ತೆಗೆದುಕೊಂಡು, ಬೇರೊಂದು ಗುಂಪು ಇರುವಲ್ಲಿಗೆ ಹೋದನು. ಅಕ್ಕನ ಅತ್ತೆ ಮಾವಂದಿರು ಯಾವ ನೆವವನ್ನೂ ಮುಂದೊಡ್ಡದೆ ಸೊಸೆಯನ್ನು ಆಕೆಯ ತವರುಮನೆಗೆ ಕಳಿಸುವ ಏರ್ಪಾಡು ಮಾಡಿದರು.

ಅಕ್ಕನನ್ನು ಎತ್ತಿನಮೇಲೆ ಕುಳ್ಳಿರಿಸಿಕೊಂಡು ತನ್ನೂರಿಗೆ ಸಾಗಿದ ತಮ್ಮನ್ನು ಪ್ರಾಯದಿಂದ ತುಂಬಿತುಳುಕುವ ಅಕ್ಕನನ್ನು ಕಂಡು ತಬ್ಬಿಬ್ಬಾದನು. ಆಕೆಯು ಧರಿಸಿದ ಬಂಗಾರದೊಡವೆಗಳಿಂದ ಆಕೆಯ ಚೆಲುವು ನೂರ್ಮಡಿಸಿತ್ತು. ಹಿಂದಿನ ಕಾಲವಾಗಿದ್ದರೆ ಅಕ್ಕನೇ ತನ್ನ ಹೆ೦ಡತಿ ಆಗುತ್ತಿದ್ದಳಲ್ಲವೇ, ಎಂದು ಎಣಿಸಿದನು. ಅದೇ ಪದ್ಧತಿ ಯೋಗ್ಯವಾಗಿತ್ತೆಂದೂ ಬಗೆದನು. ಅಕ್ಕನೂ ಏನಾದರೂ ಕೇಳಿದರೆ ತಮ್ಮನು ತನ್ನ ತಲೆಯೊಳಗೆ ಸುಳಿದಾಡುವ ವಿಚಾರವನ್ನೇ ಮುಂದೆ ಮಾಡಿ ಮರುನುಡಿಯುವನು. ದಾರಿಸಾಗುತ್ತಲೇ ಇತ್ತು.

ಹೊತ್ತು ಮುಳುಗುವ ಸಮಯವಾಯಿತು. ತಮ್ಮನ ಬುದ್ಧಿ ತೀರ ಚಂಚಲ ಗೊಂಡಿತು. ಅವನ ಕಂಟಲಿ ಎತ್ತು ತೀರ ನಿರ್ಜನಪ್ರದೇಶವನ್ನು ಪ್ರವೇಶಿಸಿತು. ಒಂದೆರಡು ಕೂಗಳತೆ ದಾಟಿತ್ತೋ ಇಲ್ಲವೋ ತಮ್ಮನು ಅಡ್ಡಬಂದು ಎತ್ತಿನ ಮುಗದಾಣಿ ಹಿಡಿದನು. ಅದು ಗಕ್ಕನೆ ನಿಂತಿತು. ಅಕ್ಕನಿಗೆ ಕೆಳಗಿಳಿಯಲು ಹೇಳಿದನು.

ಆಕೆ ಮರುನುಡಿದಳು –

“ಹೊತ್ತು ಮುಳುಗಿತು, ಕತ್ತಲಾಗುವಷ್ಟರಲ್ಲಿ ಊರು ಸೇರುವುದು ಒಳ್ಳೆಯದಲ್ಲವೇ ? ಹುಲಿಕರಡಿಗಳ ಬಾಯಿಗೆ ಬೀಳುವುದಾಗಲಿ, ಕಳ್ಳರ ಕೈಗೆ ಸಿಗುವದಾಗಲಿ ಅದರಿಂದ ತಪ್ಪುತ್ತದೆ. ಆದ್ದರಿಂದ ಎತ್ತನ್ನು ಅವಸರದಿಂದ ಹೊಡೆಯುವುದನ್ನು ಬಿಟ್ಟು ಇಲ್ಲೇಕೆ ಇಳಿಯಬೇಕು?”

“ಊರು ಇನ್ನು ದೂರವಿಲ್ಲ. ಇಳಿದುಬಿಡು. ನೀರು ಕುಡಿದು ಮುಂದೆ ಸಾಗೋಣ” ಎಂದು ತಮ್ಮನು ಅಕ್ಕನಿಗೆ ನೆರವು ನೀಡಿ ಎತ್ತಿನಿಂದ ಕೆಳಗಿಳಿಸಿಕೊಂಡನು. ಆಕೆಯ ಸ್ಪರ್ಶದಿಂದ ಆತನಲ್ಲಿ ವಿದ್ಯುತ್ಸಂಚಾರವೇ ಆದಂತಾಯಿತು.

ಮುಂದೆ ಏನು ನಡೆಯಿತೆಂಬುದನ್ನು ಹೇಳುವ ಕಾರಣವೇ ಇಲ್ಲ, ಬಲಾತ್ಕಾರ! “ಇದು ಧರ್ಮವಲ್ಲ” ಎಂದು ಅಕ್ಕನು ಹಲುಬಿದಳು. “ಹಳೆಯದಾದರೇನು, ಇದು ಧರ್ಮವಾಗಿಯೇ ಇತ್ತು” ಎಂದನು ತಮ್ಮ.

“ಬಿಟ್ಟುಕೊಟ್ಟ ಧರ್ಮದದಾರಿ ಅಧರ್ಮವೇ ಅಲ್ಲವೇ ? ದೇವಿ, ಭೂಮಿತಾಯೀ, ಇಲ್ಲಿ ನೀನಲ್ಲದೆ ಇನ್ನಾರೂ ಇಲ್ಲ. ಅಧರ್ಮದಿಂದ ನನ್ನನ್ನು ಉಳಿಸು ತಾಯಿ” ಎಂದು ಕೈಮುಗಿದು ಹೃತ್ಪೂರ್ವಕವಾಗಿ ಮೊರೆಯಿಟ್ಟಳು.

ಭೂಮಿತಾಯಿಗೆ ಕೇಳಿಸಿತೇನೋ ಆಕೆಯಮೊರೆ. ಅದು ಬಿರಿದು ಬಿಟ್ಟಿತು. ದುಃಖಾರ್ತೆಯು ನೆಲದ ಬಿರುಕಿನಲ್ಲಿ ಇಳಿಯತೊಡಗಿದಳು. ಅದನ್ನು ಕಂಡು ತಮ್ಮನು ಮುಗಿದ ಆ ಕೈಗಳೆರಡನ್ನೂ ಹಿಡಿದು ಹಿಂದೆಳೆಯತೊಡಗಿದನು. ಆದರೆ ಅಕ್ಕನ ಇಡಿಯ ಶರೀರದೊಡನೆ ಮೇಲೆತ್ತಿದ್ದ ಕೈಗಳೆರಡೂ ಅಡಗಿಕೊಂಡವಾದರೂ ಮುಗಿದ ಹಸ್ತಗಳು ಮಾತ್ರ ಹೊರಗೆ ಕಾಣಿಸಿಕೊಂಡವು.

ಅದನ್ನೆಲ್ಲ ಕಂಡು ತಮ್ಮನಿಗೆ ಪಶ್ಚಾತ್ತಾಪವಾಯಿತು. ಅಕ್ಕನನ್ನು ಕಳೆದು ಕೊಂಡೆನೆಂದು ದಿಕ್ಕು ಮರುದನಿಗೊಡುವಂತೆ ಆಕ್ರೋಶಿಸತೊಡಗಿದನು. ಮುಂದುಗಾಣದೆ ಎತ್ತು ಎಳೆದುಕೊಂಡು ಊರದಾರಿ ಹಿಡಿದನು. ತಾಯಿ ತಂದೆಗಳ ಮುಂದೆ ಅಕ್ಕನ ಸುದ್ದಿಯನ್ನು ಏನೆಂದು ಹೇಳಲಿ – ಎಂಬ ವಿಚಾರದಲ್ಲಿಯೇ ಮುಳುಗಿದನು. ನೆಲದಲ್ಲಿ ಮುಗಿದುಹೋದ ಆ ಪವಿತ್ರಾತ್ಮಳ ಹಸ್ತಗಳೆರಡೂ ಮುಂದೆ ಎರಡು ಎಲೆಗಳಾಗಿ ಚಿಗುರಿದವು. ಒಂದು ಅಕ್ಕೆಲೆ, ಇನ್ನೊಂದು ತಮ್ಮಕ್ಕ.

ಅಂದಿನ ಆ ಅಕ್ಕೆಲೆಯೇ ಎಕ್ಕೆಲೆ ಎನಿಸಿತು. ತಮ್ಮಕ್ಕವೆ ತಂಬಾಕು ಎನಿಸಿತು. ಆ ಪವಿತ್ರಾತ್ಮಳು ಕೊಟ್ಟುಹೋದ ಎಕ್ಕೆಲೆ ತಂಬಾಕುಗಳೆರಡೂ ಅತಿಥಿಸತ್ಕಾರದಲ್ಲಿ ಹಿರಿಮೆಯಸ್ಥಾನ ಗಳಿಸಿದವು.
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...