Home / ಕವನ / ಕವಿತೆ / ಕಂಡೆನೊ ನಾ!

ಕಂಡೆನೊ ನಾ!

ಕಂಡೆನೊ ನಾ! ಬೇವಿನ ಜೀವದ ಈ-ಬಾ-ಳು!!

ಈ ಲೋಕ ಈ ರಾಜ್ಯ ಈ ಊರು ಈ ಮನೆ
ಕಾಲಾನುಕ್ರಮದಲ್ಲಿ ಜನರಾಶಿ ಒಂದಾಗಿ,
ಬಲ್ಲಿದ ಬಡವನ ಶತಕೋಟಿ ಸಂಸಾರ-  ||ಕಂ||

ಸಾಗರ-ಭೂಮಿಯ ನಡೆ ಕಂಡು ಮೊರೆವುದೊ,
ಯೋಗ ತಾರಕೆಗಳು ಮಿಣುಮಿಣುಕಿ ನಗುವುದೊ;
ಆಗದೀ ಜನಭಾರ ಕಲ್ಭೂಮಿ ಆಳುವುದೊ-  ||ಕಂ||

ತತ್ವಗಳೊಂದೆಡೆಽ ಉದ್ಧಾರ ಕಾಯ್ವುವು,
ನೀತಿಗಳ್ ಬಿರುಗಾಳಿ ಅಲೆಯೊಳು ಸಾಗ್ವುವು;
ಮಾತು ಮಾತಿನ ಜೀವ, ತೋರಲಿದರೆ ಜೀವ-  ||ಕಂ||

ಅವಸರದ ಆಲಾಪ, ದಣೀದ ದೇಹಿಯ ತಾಪ,
ಭುವನತ್ರಯದ ಪಾಪ, ಸಮ್ಮಿಳಿತ ಮಾಕೂಪ,
ಭವ ಸರಸಿಜನದು ಸರಸತಿಯರ ಶಾಪ-  ||ಕಂ||

ಮನುಜನ ಮನಶ್ಶಕ್ತಿ ಮರುಳಾಗಿ ಕಲ್ಲಂತೆ,
ತನುಮನವೆಲ್ಲವು ಸ್ವಾರ್ಥಕ್ಕೆ ಮರೆಹೋಗಿ
ಜನಗಣವು ಪಶುಗಣವಾದ ವೈಚಿತ್ರ್‍ಯವೊ-  ||ಕಂ||

ರಂಗುರಂಗಿನ ತಳಕು, ಬಣ್ಣ ಬಣ್ಣದ ಬೆಳಕು;
ಶೃಂಗಾರ ಸಂಪತ್ತು ನಗುಸರಸ ಸವಿಮಾತು;
ಭೃಂಗಕುಂತಲ ‘ಷೋಕು’, ಕೃತಕ ಜೀವದ ಮಂಕು-  ||ಕಂ||

ಜನ ಜನಿತ ಜನಮೋಹ, ಜೀತ ಜೀತದ ಜೀವ,
ಗಣನೀಯ ಗಂಭೀರ, ಚಂಚಲ ವ್ಯವಹಾರ,
ದಣಿದ ಬಾಳಿನ ಸಾರ ಸಾಕು ಸಾಕು ಸಾಕೀ ಹಾರ!  ||ಕಂ||

ಒಂದಿಽನ ನಾನೊಂದು ಪೂಗಿಡವ ನಟ್ಟೆನೊ,
ಮುಂದಾರು ದಿನ ಕಳೆದು ನಾನೋಡಿ ಅತ್ತೆನೊ;
ಅಂದಿಽತು ನನಗಽದು ‘ಚಿಗುರೆಽಲೆ ಕೊಡೆ’ನೆಂದು-  ||ಕಂ||

ಹಸುರಾಂತ ವನಶೋಭೆ ನೀಲಾಕಾಶದ ಪ್ರಭೆ,
ಹಸುಗೂಸು ಹುಸಿ ಸೊಬಗು ಪಂಚಭೂತದ ಬೆಡಗು,
ನಸುನಗುತ ಒಲಿದಽರು ವಿರಸ ಪ್ರಕೃತಿಯದೊ-  ||ಕಂ||

ಜನಕೋಟಿ ಈ ಜಗದಿ ಸಂಸಾರವೆಂದೆಂದು
ಮುನಿಜನವು ಕವಿಗಣವು ಹಾಡಿ ಪಾಡಿದರಂದು,
ಋಣಮುಕ್ತ ಜೀವಽದ ಪಾಡನ್ನು ಹಾಡುತ್ತ;  ||ಕಂ||

ಲೋಕವು ದಿನಕೊಂದು ರೂಪವ ಪಡೆವುದೊ,
ಸಾಕಿಽದ ಕೋಳಿಯ ಬೆಳೆಸಂತೆ ಬದಲಾಗೆ;
ಈ ಕರ್ಮ ಜಾಲಕ್ಕೆ ಪ್ರಾಣಗಳರ್ಪಿಸಿ-  ||ಕಂ||

ಸಲ್ಲಲಿತ ಸುಖಶಾಂತಿ-ರಣರಂಗ ಭಯಕ್ರಾಂತಿ;
ಮಲ್ಲಳಿಯ ಇನಿವಾಡು-ಸಂಸಾರ ಒಳಪಾಡು,
ಬಲ್ಲವರ ವಿದ್ವತ್ತು-ಲೋಕನಾಶಕೆ ಹೇತು!  ||ಕಂ||
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...