Home / ಕವನ / ಕವಿತೆ / ಕಂಡೆನೊ ನಾ!

ಕಂಡೆನೊ ನಾ!

ಕಂಡೆನೊ ನಾ! ಬೇವಿನ ಜೀವದ ಈ-ಬಾ-ಳು!!

ಈ ಲೋಕ ಈ ರಾಜ್ಯ ಈ ಊರು ಈ ಮನೆ
ಕಾಲಾನುಕ್ರಮದಲ್ಲಿ ಜನರಾಶಿ ಒಂದಾಗಿ,
ಬಲ್ಲಿದ ಬಡವನ ಶತಕೋಟಿ ಸಂಸಾರ-  ||ಕಂ||

ಸಾಗರ-ಭೂಮಿಯ ನಡೆ ಕಂಡು ಮೊರೆವುದೊ,
ಯೋಗ ತಾರಕೆಗಳು ಮಿಣುಮಿಣುಕಿ ನಗುವುದೊ;
ಆಗದೀ ಜನಭಾರ ಕಲ್ಭೂಮಿ ಆಳುವುದೊ-  ||ಕಂ||

ತತ್ವಗಳೊಂದೆಡೆಽ ಉದ್ಧಾರ ಕಾಯ್ವುವು,
ನೀತಿಗಳ್ ಬಿರುಗಾಳಿ ಅಲೆಯೊಳು ಸಾಗ್ವುವು;
ಮಾತು ಮಾತಿನ ಜೀವ, ತೋರಲಿದರೆ ಜೀವ-  ||ಕಂ||

ಅವಸರದ ಆಲಾಪ, ದಣೀದ ದೇಹಿಯ ತಾಪ,
ಭುವನತ್ರಯದ ಪಾಪ, ಸಮ್ಮಿಳಿತ ಮಾಕೂಪ,
ಭವ ಸರಸಿಜನದು ಸರಸತಿಯರ ಶಾಪ-  ||ಕಂ||

ಮನುಜನ ಮನಶ್ಶಕ್ತಿ ಮರುಳಾಗಿ ಕಲ್ಲಂತೆ,
ತನುಮನವೆಲ್ಲವು ಸ್ವಾರ್ಥಕ್ಕೆ ಮರೆಹೋಗಿ
ಜನಗಣವು ಪಶುಗಣವಾದ ವೈಚಿತ್ರ್‍ಯವೊ-  ||ಕಂ||

ರಂಗುರಂಗಿನ ತಳಕು, ಬಣ್ಣ ಬಣ್ಣದ ಬೆಳಕು;
ಶೃಂಗಾರ ಸಂಪತ್ತು ನಗುಸರಸ ಸವಿಮಾತು;
ಭೃಂಗಕುಂತಲ ‘ಷೋಕು’, ಕೃತಕ ಜೀವದ ಮಂಕು-  ||ಕಂ||

ಜನ ಜನಿತ ಜನಮೋಹ, ಜೀತ ಜೀತದ ಜೀವ,
ಗಣನೀಯ ಗಂಭೀರ, ಚಂಚಲ ವ್ಯವಹಾರ,
ದಣಿದ ಬಾಳಿನ ಸಾರ ಸಾಕು ಸಾಕು ಸಾಕೀ ಹಾರ!  ||ಕಂ||

ಒಂದಿಽನ ನಾನೊಂದು ಪೂಗಿಡವ ನಟ್ಟೆನೊ,
ಮುಂದಾರು ದಿನ ಕಳೆದು ನಾನೋಡಿ ಅತ್ತೆನೊ;
ಅಂದಿಽತು ನನಗಽದು ‘ಚಿಗುರೆಽಲೆ ಕೊಡೆ’ನೆಂದು-  ||ಕಂ||

ಹಸುರಾಂತ ವನಶೋಭೆ ನೀಲಾಕಾಶದ ಪ್ರಭೆ,
ಹಸುಗೂಸು ಹುಸಿ ಸೊಬಗು ಪಂಚಭೂತದ ಬೆಡಗು,
ನಸುನಗುತ ಒಲಿದಽರು ವಿರಸ ಪ್ರಕೃತಿಯದೊ-  ||ಕಂ||

ಜನಕೋಟಿ ಈ ಜಗದಿ ಸಂಸಾರವೆಂದೆಂದು
ಮುನಿಜನವು ಕವಿಗಣವು ಹಾಡಿ ಪಾಡಿದರಂದು,
ಋಣಮುಕ್ತ ಜೀವಽದ ಪಾಡನ್ನು ಹಾಡುತ್ತ;  ||ಕಂ||

ಲೋಕವು ದಿನಕೊಂದು ರೂಪವ ಪಡೆವುದೊ,
ಸಾಕಿಽದ ಕೋಳಿಯ ಬೆಳೆಸಂತೆ ಬದಲಾಗೆ;
ಈ ಕರ್ಮ ಜಾಲಕ್ಕೆ ಪ್ರಾಣಗಳರ್ಪಿಸಿ-  ||ಕಂ||

ಸಲ್ಲಲಿತ ಸುಖಶಾಂತಿ-ರಣರಂಗ ಭಯಕ್ರಾಂತಿ;
ಮಲ್ಲಳಿಯ ಇನಿವಾಡು-ಸಂಸಾರ ಒಳಪಾಡು,
ಬಲ್ಲವರ ವಿದ್ವತ್ತು-ಲೋಕನಾಶಕೆ ಹೇತು!  ||ಕಂ||
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...