ಲಿಂಗಮ್ಮನ ವಚನಗಳು – ೫೩

ಬಯಲು ದೇಹದಲ್ಲಿ ಒಂದು ತೊಲಗದ ಕಂಬವ ಕಂಡೆ.
ಆ ತೊಲಗದ ಕಂಬವ ಹಿಡಿದು ಹೋಗುವನ್ನಕ್ಕ,
ಮುಂದೆ ಸರೋವರವ ಕಂಡೆ.
ಆ ಸರೋವರವ ಒಳಹೊಕ್ಕು ನೋಡಲು,
ಮುಂದೆ ಗಟ್ಟಿ ಬೆಟ್ಟಗಳು
ಹೋಗಬಾರದ ಆನೆಗಳು ಅಡ್ಡಲಾದವು.
ಕೋಣ ಮುಂದುವರಿದವು.
ನಾಯಿಗಳಟ್ಟಿಕೊಂಡು ಬಂದವು.
ಇರುಹು ಕಚ್ಚಿಕೊಂಡು ಬಿಡವು.
ಇದ ಕಂಡು ನಾ ಹೆದರಿಕೊಂಡು,
ಮನವೆಂಬ ಅರಸನ ಹಿಡಿದು,
ಕಟ್ಟಿಗೆ ತಂದು, ಗೊತ್ತಿಗೆ ನಿಲಿಸಿ,
ಆ ಅರಸನ ಶಕ್ತಿವಿಡಿದು,
ಆ ಸರೋವರದೊಳಗಣ ಗಟ್ಟಬೆಟ್ಟವನೆ ದಾಂಟಿ,
ಅಷ್ಟಮದವನೆ ಹಿಟ್ಟು ಗುಟ್ಟಿ,
ಕೋಡಗನ ಕೊರಳ ಮುರಿದು,
ನಾಯಿಗಳನೆ ಕೊಂದು,
ಈ ಇರುಹಿನ ಗೂಡಿಗೆ ಕಿಚ್ಚನಿಕ್ಕಿ
ನಿರ್ಮಳವಾದ ದೇಹದಲ್ಲಿ ನಿಂದು,
ಮುಂದುವರಿದು ನೋಡಲು
ಇಟ್ಟೆಡೆಯ ಬಾಗಿಲ ಕಂಡೆ.
ಆ ಇಟ್ಟೆಡೆಯ ಬಾಗಿಲ ಹೊಕ್ಕು,
ಹಿತ್ತಿಲಬಾಗಿಲ ಕದವ ತೆಗೆದು
ನೋಡಲು, ಬಟ್ಟಬಯಲಾಯಿತ್ತು.
ಆ ಬಟ್ಟಬಯಲಲ್ಲಿ ನಿಂದು,
ನಾನೆತ್ತ ಹೋದೆನೆಂದರಿಯೆನಯ್ಯ
ನಿಮ್ಮ ಪಾದವಿಡಿದು,
ಅಪ್ಪಣಪ್ರಿಯ ಚನ್ನಬಸವಣ್ಣಾ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹ್ಯಾಂಗ ಹೋಗಲೇ
Next post ನಗೆ ಡಂಗುರ – ೧೭೩

ಸಣ್ಣ ಕತೆ

  • ಪ್ಲೇಗುಮಾರಿಯ ಹೊಡೆತ

    ಪ್ರಕರಣ ೧೩ ಕೆಲವು ದಿನಗಳ ತರುವಾಯ ತಿಪ್ಪೂರು ಹೋಬಳಿಯ ಪಾಠಶಾಲೆಗಳಿಂದ ಅನಿಷ್ಟ ವರ್ತಮಾನಗಳು ಬರಲಾರಂಭಿಸಿದುವು. ಹಳ್ಳಿಯಲ್ಲಿ ಪ್ಲೇಗುಮಾರಿ ಹೊಕ್ಕಿದೆ; ಒಂದೆರಡು ಸಾವುಗಳಾದುವು; ಜನರೆಲ್ಲ ಹೊಲಗಳಲ್ಲಿ ಗುಡಿಸಿಲುಗಳನ್ನು ಹಾಕಿಕೊಳ್ಳುತ್ತಿದಾರೆ;… Read more…

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…

  • ಹೃದಯ ವೀಣೆ ಮಿಡಿಯೆ….

    ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…