ಬಯಲು ದೇಹದಲ್ಲಿ ಒಂದು ತೊಲಗದ ಕಂಬವ ಕಂಡೆ.
ಆ ತೊಲಗದ ಕಂಬವ ಹಿಡಿದು ಹೋಗುವನ್ನಕ್ಕ,
ಮುಂದೆ ಸರೋವರವ ಕಂಡೆ.
ಆ ಸರೋವರವ ಒಳಹೊಕ್ಕು ನೋಡಲು,
ಮುಂದೆ ಗಟ್ಟಿ ಬೆಟ್ಟಗಳು
ಹೋಗಬಾರದ ಆನೆಗಳು ಅಡ್ಡಲಾದವು.
ಕೋಣ ಮುಂದುವರಿದವು.
ನಾಯಿಗಳಟ್ಟಿಕೊಂಡು ಬಂದವು.
ಇರುಹು ಕಚ್ಚಿಕೊಂಡು ಬಿಡವು.
ಇದ ಕಂಡು ನಾ ಹೆದರಿಕೊಂಡು,
ಮನವೆಂಬ ಅರಸನ ಹಿಡಿದು,
ಕಟ್ಟಿಗೆ ತಂದು, ಗೊತ್ತಿಗೆ ನಿಲಿಸಿ,
ಆ ಅರಸನ ಶಕ್ತಿವಿಡಿದು,
ಆ ಸರೋವರದೊಳಗಣ ಗಟ್ಟಬೆಟ್ಟವನೆ ದಾಂಟಿ,
ಅಷ್ಟಮದವನೆ ಹಿಟ್ಟು ಗುಟ್ಟಿ,
ಕೋಡಗನ ಕೊರಳ ಮುರಿದು,
ನಾಯಿಗಳನೆ ಕೊಂದು,
ಈ ಇರುಹಿನ ಗೂಡಿಗೆ ಕಿಚ್ಚನಿಕ್ಕಿ
ನಿರ್ಮಳವಾದ ದೇಹದಲ್ಲಿ ನಿಂದು,
ಮುಂದುವರಿದು ನೋಡಲು
ಇಟ್ಟೆಡೆಯ ಬಾಗಿಲ ಕಂಡೆ.
ಆ ಇಟ್ಟೆಡೆಯ ಬಾಗಿಲ ಹೊಕ್ಕು,
ಹಿತ್ತಿಲಬಾಗಿಲ ಕದವ ತೆಗೆದು
ನೋಡಲು, ಬಟ್ಟಬಯಲಾಯಿತ್ತು.
ಆ ಬಟ್ಟಬಯಲಲ್ಲಿ ನಿಂದು,
ನಾನೆತ್ತ ಹೋದೆನೆಂದರಿಯೆನಯ್ಯ
ನಿಮ್ಮ ಪಾದವಿಡಿದು,
ಅಪ್ಪಣಪ್ರಿಯ ಚನ್ನಬಸವಣ್ಣಾ.
*****
Related Post
ಸಣ್ಣ ಕತೆ
-
ಮಾದಿತನ
ಮುಂಗೋಳಿ... ಕೂಗಿದ್ದೆ ತಡ, ಪೆರ್ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…
-
ತ್ರಿಪಾದ
ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…
-
ಗುಲ್ಬಾಯಿ
ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…
-
ಜುಡಾಸ್
"ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…
-
ಟೋಪಿ ಮಾರುತಿ
"ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…