ತನುವೆಂಬ ಹುತ್ತದಲ್ಲಿ,
ಮನವೆಂಬ ಸರ್ಪ ಹೆಡೆಯನುಡಿಗಿ ಕೊಂಡಿರಲು,
ಜ್ಞಾನಶಕ್ತಿ ಬಂದು ಎಬ್ಬಿಸಲು,
ಉರಿ ಭುಗಿಲೆನುತ್ತ ಹೆಡೆಯನೆತ್ತಿ ಊರ್ಧ್ವಕ್ಕೇರಲು,
ಅಷ್ಟಮದವೆಲ್ಲ ಹಿಟ್ಟುಗುಟ್ಟಿದವು.
ಕರಣಂಗಳೆಲ್ಲ ಉರಿದು ಹೋದವು.
ಇದ್ದ ಶಕ್ತಿಯನೆ ಕಂಡು,
ಮನ ನಿಶ್ಚಯವಾದುದನೆ ಕಂಡು,
ಪಶ್ಚಿಮದ ಕದವ ತೆಗೆದು,
ಬಚ್ಚಬರಿಯ ಬೆಳಗಿನೊಳಗೆ ಓಲಾಡಿ
ಸುಖಿಯಾದೆನಯ್ಯ ಅಪ್ಪಣಪ್ರಿಯ ಚನ್ನಬಸವಣ್ಣಾ.
*****
Related Post
ಸಣ್ಣ ಕತೆ
-
ಮೈಥಿಲೀ
"ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…
-
ಕ್ಷಮೆ
ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…
-
ಮತ್ತೆ ಬಂದ ವಸಂತ
ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…
-
ಆವಲಹಳ್ಳಿಯಲ್ಲಿ ಸಭೆ
ಪ್ರಕರಣ ೯ ಹಿಂದೆಯೇ ನಿಶ್ಚೈಸಿದ್ದಂತೆ ಆವಲಹಳ್ಳಿಯಲ್ಲಿ ಉಪಾಧ್ಯಾಯರ ಸಂಘದ ಸಭೆಯನ್ನು ಸೇರಿಸಲು ಏರ್ಪಾಟು ನಡೆದಿತ್ತು. ರಂಗಣ್ಣನು ಹಿಂದಿನ ದಿನ ಸಾಯಂಕಾಲವೇ ಆವಲಹಳ್ಳಿಗೆ ಬಂದು ಮೊಕ್ಕಾಂ ಮಾಡಿದನು. ಸಭೆಯಲ್ಲಿ… Read more…
-
ಎರಡು ಪರಿವಾರಗಳು
ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…