ಮರ್ತ್ಯದಲ್ಲಿ ಹುಟ್ಟಿ ಎತ್ತಲೆಂದರಿಯೆ.
ಕತ್ತಲೆಯೊಳು ಮುಳುಗಿ,
ಕಾಮನ ಬಲೆಯೊಳು ಸಿಲ್ಕಿದ ಎಗ್ಗ
ಮನುಜರಿರಾ, ನೀವು ಕೇಳಿರೋ.
ನಿಮ್ಮ ಇರವು ಎಂತೆಂದರೆ,
ಕಾಯವೆಂದರೆ ಕಳವಳಕ್ಕೊಳಗಾಯಿತ್ತು.
ಜೀವವೆಂದರೆ ಅರುಹು ಮರವೆಯೊಳಗಾಯಿತ್ತು.
ಮನವೆಂದರೆ ಸಚರಾಚರವನೆಲ್ಲವನಾಚರಿಸುವದಕ್ಕೆ
ಒಳಗಾಯಿತ್ತು. ಪ್ರಾಣವೆಂದರೆ ಇವೆಲ್ಲವನು
ಆಡಿಸಿ ನೋಡುವದಕ್ಕೆ ಒಳಗಾಯಿತ್ತು.
ಇದರೊಳಗೆ ಬಿದ್ದು ಏಳಲಾರದ ಬುದ್ಧಿಹೀನರಿರಾ,
ನೀವು ಕೇಳಿ, ಹೇಳಿಹೆನು.
ನಮ್ಮ ಶರಣರು ಜಗದೊಳಗೆ ಹುಟ್ಟಿ
ಜಗವನೆ ಮರೆದು, ಎಚ್ಚತ್ತು, ಚಿತ್ತವ ಧಾನವಮಾಡಿ,
ಕಳವಳಕ್ಕೊಳಗಾಗಿರ್ದ ಕಾಯವನೆ
ಸರ್ವಾಂಗ ಲಿಂಗವನೆ ಮಾಡಿದರು.
ಅರುಹುಮರವೆಯೊಳಗಾಗಿರ್ದ ಜೀವನ ಬುದ್ಧಿಯನೆ,
ಪರಮನ ಬುದ್ಧಿಯ ಮಾಡಿದರು.
ಸಚರಾಚರವ ಚರಿಸುವದಕ್ಕೊಳಗಾಗಿರ್ದ
ಮನವನೆ ಅರುಹ ಮಾಡಿದರು.
ಆಡಿಸಿ ನೋಡೋದಕ್ಕೆ ಒಳಗಾಗಿರ್ದ
ಪ್ರಾಣವನೆ ಲಿಂಗವ ಮಾಡಿದರು.
ಈ ಸರ್ವಾಂಗವನು ಲಿಂಗವನೆ ಮಾಡಿ,
ಆ ಲಿಂಗವನು ಕಂಗಳಲ್ಲಿಯೆ ಹೆರೆಹಿಂಗದೆ ನೋಡಿ,
ಮಂಗಳದ ಮಹಾಬೆಳಗಿನಲ್ಲಿ ಬಯಲಾದೆನಯ್ಯ
ಅಪ್ಪಣಪ್ರಿಯ ಚನ್ನಬಸವಣ್ಣಾ.
*****
Related Post
ಸಣ್ಣ ಕತೆ
-
ಧರ್ಮಸಂಸ್ಥಾಪನಾರ್ಥಾಯ
ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…
-
ವರ್ಗಿನೋರು
ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…
-
ವ್ಯವಸ್ಥೆ
ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…
-
ಕರಾಚಿ ಕಾರಣೋರು
ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…
-
ವಿಷಚಕ್ರ
"ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…