ಒಂದು ಊರಿಗೆ ಒಂಬತ್ತು ಬಾಗಿಲು,
ಆ ಊರಿಗೆ ಐವರು ಕಾವಲು,
ಆರು ಮಂದಿ ಪ್ರಧಾನರು,
ಇಪ್ಪತ್ತೈದು ಮಂದಿ ಪರಿವಾರ,
ಅವರೊಳು ತೊಟ್ಟನೆ ತೊಳಲಿ ಬಳಲಲಾರದೆ,
ಎಚ್ಚತ್ತು ನಿಶ್ಚಿಂತನಾದ ಅರಸರ ಕಂಡೆ.
ಅರಸಿನ ಗೊತ್ತುವಿಡಿದು, ಒಂಬತ್ತು
ಬಾಗಿಲಿಗೆ ಲಿಂಗಸ್ಥಾಪ್ಯವ ಮಾಡಿ,
ಒಂದು ಬಾಗಿಲಲ್ಲಿ ನಿಂದು,
ಕಾವಲರ ಕಟ್ಟಿ, ಪ್ರಧಾನಿಯನೆ ಮೆಟ್ಟಿ ಸೀಳಿ,
ಪರಿವಾರವನೆ ಸುಟ್ಟು, ಅರಸ ಮುಟ್ಟಿ,
ಹಿರಿದು ಓಲೈಸಲು, ಸಪ್ತಧಾತು ಷಡುವರ್ಗವನೆ ಕಂಡು,
ಕತ್ತಲೆಯ ಕದಳಿಯ ದಾಂಟಿ,
ನಿಶ್ಚಿಂತದಲ್ಲಿ ಬಚ್ಚಬರಿಯ ಬೆಳಗಿನೊಳಗೆಯೋಲಾಡಿ,
ಸುಖಿಯಾದೆನಯ್ಯ ಅಪ್ಪಣಪ್ರಿಯ ಚನ್ನಬಸವಣ್ಣಾ.
*****
Related Post
ಸಣ್ಣ ಕತೆ
-
ಬೂಬೂನ ಬಾಳು
ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…
-
ಮಲ್ಲೇಶಿಯ ನಲ್ಲೆಯರು
ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…
-
ಕೊಳಲು ಉಳಿದಿದೆ
ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…
-
ಸಂಶೋಧನೆ
ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…
-
ಎರಡು ರೆಕ್ಕೆಗಳು
ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…