ಲಿಂಗಮ್ಮನ ವಚನಗಳು – ೭೩

ಒಂದು ಹುತ್ತಕ್ಕೆ ಒಂಬತ್ತು ಬಾಗಿಲು ಇರುವದು.
ಒಂದು ಸರ್ಪ ಒಂಬತ್ತು ಬಾಗಿಲಲ್ಲಿಯು ನೋಡುತಿಪ್ಪುದು.
ಒಂಬತ್ತು ಬಾಗಿಲಿಗೆ ಕದವನಿಕ್ಕಿ ಒಂದು ಬಾಗಿಲ
ಅಗುಳಿ ದಾರವಂದವನಿಕ್ಕಿ ಬಲಿಯಲು
ತಿರುಗುವುದಕ್ಕೆ ತಾವ ಕಾಣದೆ,
ಇರುವುದಕ್ಕೆ ಇಂಬ ಕಾಣದೆ,
ನಿಲುವುದಕ್ಕೆ ಎಡೆಯ ಕಾಣದೆ,
ಉರಿ ಎದ್ದು ಊರ್ಧ್ವಕ್ಕೇರಲು, ಶರಧಿ ಬತ್ತಿತ್ತು.
ಅಲ್ಲಿದ್ದ ಖಗಮೃಗವೆಲ್ಲ ದಹನವಾದವು.
ಸರೋವರವೆಲ್ಲ ಉರಿದು ಹೋದವು.
ಕತ್ತಲೆ ಹರಿಯಿತ್ತು.
ಮುಂದೆ ದಿಟ್ಟಿಸಿ ನೋಡುವನ್ನಕ್ಕ,
ಇಟ್ಟೆಡೆಯ ಬಾಗಿಲು ಸಿಕ್ಕಿತ್ತು.
ಆ ಇಟ್ಟೆಡೆಯ ಬಾಗಿಲ ಹೊಕ್ಕು ಹೊಡಕರಿಸಿ,
ಪಶ್ಚಿಮದ ಕದವ ತೆಗೆದು,
ಬಟ್ಟ ಬಯಲಲ್ಲಿ ನಿಂದು,
ನಾನೆತ್ತ ಹೋದೆನೆಂದರಿಯೆನಯ್ಯ
ಅಪ್ಪಣಪ್ರಿಯ ಚನ್ನಬಸವಣ್ಣಾ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಆನಂದ
Next post ನಗೆ ಡಂಗುರ – ೧೯೩

ಸಣ್ಣ ಕತೆ

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…