ಒಂದು ಹುತ್ತಕ್ಕೆ ಒಂಬತ್ತು ಬಾಗಿಲು ಇರುವದು.
ಒಂದು ಸರ್ಪ ಒಂಬತ್ತು ಬಾಗಿಲಲ್ಲಿಯು ನೋಡುತಿಪ್ಪುದು.
ಒಂಬತ್ತು ಬಾಗಿಲಿಗೆ ಕದವನಿಕ್ಕಿ ಒಂದು ಬಾಗಿಲ
ಅಗುಳಿ ದಾರವಂದವನಿಕ್ಕಿ ಬಲಿಯಲು
ತಿರುಗುವುದಕ್ಕೆ ತಾವ ಕಾಣದೆ,
ಇರುವುದಕ್ಕೆ ಇಂಬ ಕಾಣದೆ,
ನಿಲುವುದಕ್ಕೆ ಎಡೆಯ ಕಾಣದೆ,
ಉರಿ ಎದ್ದು ಊರ್ಧ್ವಕ್ಕೇರಲು, ಶರಧಿ ಬತ್ತಿತ್ತು.
ಅಲ್ಲಿದ್ದ ಖಗಮೃಗವೆಲ್ಲ ದಹನವಾದವು.
ಸರೋವರವೆಲ್ಲ ಉರಿದು ಹೋದವು.
ಕತ್ತಲೆ ಹರಿಯಿತ್ತು.
ಮುಂದೆ ದಿಟ್ಟಿಸಿ ನೋಡುವನ್ನಕ್ಕ,
ಇಟ್ಟೆಡೆಯ ಬಾಗಿಲು ಸಿಕ್ಕಿತ್ತು.
ಆ ಇಟ್ಟೆಡೆಯ ಬಾಗಿಲ ಹೊಕ್ಕು ಹೊಡಕರಿಸಿ,
ಪಶ್ಚಿಮದ ಕದವ ತೆಗೆದು,
ಬಟ್ಟ ಬಯಲಲ್ಲಿ ನಿಂದು,
ನಾನೆತ್ತ ಹೋದೆನೆಂದರಿಯೆನಯ್ಯ
ಅಪ್ಪಣಪ್ರಿಯ ಚನ್ನಬಸವಣ್ಣಾ.
*****
Related Post
ಸಣ್ಣ ಕತೆ
-
ಮರೀಚಿಕೆ
ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…
-
ಮಿಂಚಿನ ದೀಪ
ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…
-
ಮಂಜುಳ ಗಾನ
ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…
-
ಏಕಾಂತದ ಆಲಾಪ
ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…
-
ದೇವರು ಮತ್ತು ಅಪಘಾತ
ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…