Home / ಕವನ / ಕವಿತೆ / ತೇರು ಬಂತು, ದಾರಿ

ತೇರು ಬಂತು, ದಾರಿ


ಗಾಲಿ ಉರುಳಿದಂತೆ-ಕಾಡಿನ
ಗಾಳಿ ಹೊರಳಿದಂತೆ-
ಬಾನ ದೇಗುಲದ
ಬೆಳ್ಳಿ ಗೋಪುರದ
ಘಂಟೆ ಮೊಳಗಿದಂತೆ,
ಹಾಲು ಕಂಚಿನ
ಹೊನ್ನ ಮಿಂಚಿನ
ಘಂಟೆ ಮೊಳಗಿದಂತೆ,
ಊರ ದಾರಿಯಲಿ
ಹೂವ ತೇರಿನಲಿ
ಕೃಷ್ಣ ಬರುವನಂತೆ!


ಎತ್ತಿ ನೋಡು ಕಣ್ಣ, ಬಾನಿಗೆ
ಹತ್ತಿ ಹೊಳೆವ ಬಣ್ಣ!
ಬೆಳದ ಭಕ್ತಿಯೇ ಊರ ದೇವರಿಗೆ
ತೇರು ಆಯಿತಣ್ಣ!
ಗುಡಿಯ ಮಟ್ಟದ
ಗುಡುಗು ಹುಟ್ಟುವ
ನಡೆದು ಬರುವ ಬೆಟ್ಟ!
ಗಿರಿಯನೆತ್ತಿದ
ಕೊಳಲ ಬಿತ್ತಿದ
ಕೃಷ್ಣ ಬಂದುಬಿಟ್ಟ,
ಚೆಲುವ ಬಂದುಬಿಟ್ಟ!


ಗೋಪಿ ನೀನೆ ಧನ್ಯೆ! – ಕೃಷ್ಣ
ನಿನ್ನ ಕಂದನೇನೆ?
ಇಲ್ಲಿ ನೋಡು ತಾನೇ ತನ್ನ
ತೇರನೇರಿದಾನೆ!
ಕೊಳಲ ಬಾರಿಸದೆ
ಜಗವ ತೋರಿಸದೆ
ಹಿಗ್ಗಿ ಬರುತಿದಾನೆ.
ಚರಣ ಚಂದ್ರಿಕೆಗೆ
ಜೀವ ಹಿಗ್ಗುತಿದೆ
ಕೃಷ್ಣ ಬರುತಿದಾನೆ-
ತೇರಮೇಲೆ ತಾನೆ.


ತೇರು ಬಂತು ದಾರಿ-ದಾರಿ!
ಹಣ್ಣು ದವನ ಬೀರಿ!
ಬೀದಿ ತಿರುಗಿನಲಿ
ಜನದ ಕರಗಿನಲಿ
ತೇರು ಬಂತು ದಾರಿ!
ತಡೆದು ಗುಡುಗಿ ಬಹ
ದೊಡ್ಡ ತೇರು, ಅಹ!
ಬಿಡಿರಿ ಬಿಡಿರಿ, ದಾರಿ!
ಮುತ್ತ ಮೆಟ್ಟಿರುವ
ಮಕುಟವಿಟ್ಟಿರುವ
ಕೃಷ್ಣ ಬಂದ, ದಾರಿ!


ಸೆರಗ ಸೆಳೆದರಿಯ, ಬೆಣ್ಣೆ ಕದ್ದರಿಯ;
ಚೆಲುವ ಬಂದ, ದಾರಿ!
ಹಣೆಯ ಕತ್ತುರಿಯ, ತಿಲಕದಚ್ಚರಿಯ
ಕಂದ ಬಂದ, ದಾರಿ!
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...