ಬಟ್ಟಬಯಲಲ್ಲಿ ಒಂದು ಶರಧಿ ಹುಟ್ಟಿತ್ತು.
ಆ ಶರಧಿಯ ನಡುವೆ ಒಂದು ಕಮಲ ಹುಟ್ಟಿತ್ತು.
ಆ ಕಮಲದ ನೆಲೆಯ ಕಾಣಲರಿಯದೆ, ತೊಳಲಿ ಬಳಲಿ,
ಜಗದೊಳಗೆ ನಚ್ಚುಮೆಚ್ಚಿಗೊಳಗಾಗಿ,
ಮುಚ್ಚಳ ಪೂಜೆಗೆಸಿಲ್ಕಿ ಕುಲಕೆ ಛಲಕೆ ಕೊಂದಾಡಿ,
ಭವಕೆ ಗುರಿಯಾಗುವ ಮನುಜರ ಕಂಡು,
ನಾಚಿತ್ತನ್ನ ಮನವು. ಈ ಮನದ ಬೆಂಬಳಿಗೊಂಡು,
ಹೋದವರೆಲ್ಲ ಮರುಳಾಗಿ ಹೋದರು.
ಇದ ನೋಡಿ ನಾನು ಬಟ್ಟಬಯಲಲ್ಲಿ
ನಿಂದು ನೋಡಿದರೆ, ಶರಧಿ ಬತ್ತಿತ್ತು,
ಕಮಲ ಕಾಣಬಂದಿತ್ತು, ಆ ಕಮಲ ವಿಕಾಸವಾಯಿತ್ತು.
ಪರಿಮಳವೆಂಬ ವಾಸನೆ ತೀಡಿತ್ತು.
ಆ ವಾಸನೆವಿಡಿದು, ಜಗದಾಸೆಯ ಹಿಂಗಿ,
ಮಾತುಮಥನವ ಕೆಡಿಸಿ ಮಹಾಜ್ಯೋತಿಯ
ಬೆಳಗಿನಲಿ ಓಲಾಡುವ ಶರಣರ ಆಸೆ
ರೋಷ ಪಾಶಕ್ಕೊಳಗಾದ ಈ ಜಗದ
ಹೇಸಿಗಳೆತ್ತಬಲ್ಲರು ಈ ಮಹಾ ಶರಣರ
ನೆಲೆಯ ಅಪ್ಪಣಪ್ರಿಯ ಚನ್ನಬಸವಣ್ಣಾ?
*****
Related Post
ಸಣ್ಣ ಕತೆ
-
ರಾಧೆಯ ಸ್ವಗತ
ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…
-
ದಿನಚರಿಯ ಪುಟದಿಂದ
ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್ಪ್ರೆಸ್ ಬಸ್ಸುಗಳು… Read more…
-
ಬೂಬೂನ ಬಾಳು
ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…
-
ಅಜ್ಜಿ-ಮೊಮ್ಮಗ
ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…
-
ಎರಡು ಪರಿವಾರಗಳು
ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…