ಲಿಂಗಮ್ಮನ ವಚನಗಳು – ೮೪

ಮಾಯದ ಬೊಂಬೆಯ ಮಾಡಿ,
ಕಂಗಳಿಗೆ ಕಾಮನ ಬಾಣವ ಹೂಡಿ,
ನಡೆನುಡಿಯೊಳಗೆ ರಂಜಕದ ತೊಡೆಗೆಯನೆ ತೊಡಿಸಿ,
ಮುಂದುಗಾಣಿಸದೆ ಹಿಂದನರಸದೆ.
ಲಿಂಗವ ಮರಹಿಸಿ, ಜಂಗಮವತೋರಿಸದೆ,
ಸಂದೇಹದಲ್ಲಿ ಸತ್ತುಹುಟ್ಟುವ,
ಈ ಭವ ಬಂಧನಿಗಳೆತ್ತ
ಬಲ್ಲರೋ ಈ ಶರಣರ ನೆಲೆಯ?
ಅವರ ನೆಲೆ ತಾನೆಂತೆಂದರೆ, ಹಿಂದನರಿದು,
ಮುಂದೆ ಲಿಂಗದಲ್ಲಿ ಬೆರೆವ ಭೇದವ ಕಂಡು,
ಜಗದ ಜಂಗುಳಿಗಳ ಹಿಂಗಿ,
ಕಂಗಳ ಕರುಳನೆ ಕೊಯಿದು,
ಮನದ ತಿರುಳನೆ ಹುರಿದು,
ಅಂಗಲಿಂಗವೆಂಬ ಉಭಯವಳಿದು,
ಸರ್ವಾಂಗ ಲಿಂಗವಾಗಿ,
ಮಂಗಳದ ಮಹಾಬೆಳಗಿನಲ್ಲಿ
ಓಲಾಡುವ ಶರಣರ ನೆಲೆಯ
ಜಗದ ಜಂಗುಳಿಯಗಳೆತ್ತ ಬಲ್ಲರೊ
ಅಪ್ಪಣಪ್ರಿಯ ಚನ್ನಬಸವಣ್ಣಾ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಶಿಕ್ಷಕ ದಿನಾಚರಣೆ
Next post ತಂಬಾಕು

ಸಣ್ಣ ಕತೆ

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

cheap jordans|wholesale air max|wholesale jordans|wholesale jewelry|wholesale jerseys