ಲಿಂಗಮ್ಮನ ವಚನಗಳು – ೮೭

ಆಗದಾಗದು ಮರ್ತ್ಯದ ಮನುಜರಿಗೆ ಶಿವಸುಖ.
ಅದೆಂತೆಂದರೆ ಕಾಳು ವಿಷಯದಲ್ಲಿ
ಬಿದ್ದು ನುಡಿವುತ್ತ, ಮರವೆ ನಡೆವುತ್ತ,
ಮರವೆ ಮುಟ್ಟುತ್ತ, ಮರವೆ ಕೇಳುತ್ತ,
ಮರವೆ ನೋಡುತ್ತ, ಮರವೆ ಇಂತು ಮರಹಿನೊಳಗಿರ್ದು,
ಅರುಹ ಕಂಡಿಹೆನೆಂಬ ಅಣ್ಣಗಳಿರಾ, ನೀವು ಕೇಳಿರೋ.
ನಮ್ಮ ಶರಣರ ನಡೆ ಎಂತೆಂದರೆ,
ಐದು ಗುಣವನೆ ಅಳಿದು, ಐದು ಗುಣವನೆ ಹಿಡಿದು,
ನುಡಿವುತ್ತ ಲಿಂಗವಾಗಿ ನುಡಿದರು.
ಮುಟ್ಟುತ್ತ ಲಿಂಗವಾಗಿ ಮುಟ್ಟುವರು.
ನಡೆವುತ್ತ ಲಿಂಗವಾಗಿ ನಡೆವರು.
ಕೇಳುತ್ತ ಲಿಂಗವಾಗಿ ಕೇಳುವರು.
ನೋಡುತ್ತ ಲಿಂಗವಾಗಿ ನೋಡುವರು.
ಸರ್ವಾಂಗವು ಲಿಂಗವಾಗಿ,
ಅಂಗಲಿಂಗವೆಂಬೆ ಉಭಯವಳಿದು,
ಮಂಗಳದ ಮಹಾ ಬೆಳಗಿನಲ್ಲಿ,
ಲಿಂಗವೆ ಗೂಡಾಗಿರ್ದ ಕಾರಣ
ಅಪ್ಪಣಪ್ರಿಯ ಚನ್ನಬಸವಣ್ಣಾ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಎಂಥ ಭಾರತ ೧
Next post ರೇಡಿಯೋ

ಸಣ್ಣ ಕತೆ

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ಗದ್ದೆ

    ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…

cheap jordans|wholesale air max|wholesale jordans|wholesale jewelry|wholesale jerseys