ಅಯ್ಯ, ನಾ ಮರ್ತ್ಯದಲ್ಲಿ ಹುಟ್ಟಿ,
ಕಷ್ಟ ಸಂಸಾರಿ ಎನಿಸಿಕೊಂಡೆ.
ಕತ್ತಲೆಯಲ್ಲಿ ಮುಳುಗಿದೆ.
ಕರ್ಮಕ್ಕೆ ಗಿರಿಯಾಗುತಿದ್ದರೆ,
ಹೆತ್ತ ತಾಯಿ ಎಂಬ ಗುರುಸ್ವಾಮಿ
ಎನ್ನ ಕೊರಳಿಗೆ ಗಂಡನೆಂಬ ಲಿಂಗಕಟ್ಟಿದನು.
ತಂದೆ ಎಂಬ ಜಂಗಮಲಿಂಗವು
ಎನ್ನ ಪ್ರಾಣಕ್ಕೆ ಪ್ರಸಾದವ ಊಡಿದನು.
ಪ್ರಾಣಕ್ಕೆ ಪ್ರಸಾದವನೊಡಲಾಗಲೆ,
ಕತ್ತಲೆ ಹರಿಯಿತ್ತು. ಕರ್ಮ ಹಿಂಗಿತ್ತು.
ಮನ ಬತ್ತಲೆಯಾಯಿತ್ತು.
ಚಿತ್ತ ಸುಯಿಧಾನವಾಯಿತ್ತು, ನಿಶ್ಚಿಂತವಾಯಿತ್ತು.
ನಿಜನ ನೆಮ್ಮಿ ನೋಡುವನ್ನಕ್ಕ,
ಎನ್ನ ಅತ್ತೆ ಮಾವನು ಅರತು ಹೋದರು.
ಅತ್ತಿಗೆ ನಾದಿನಿಯರು ಎತ್ತಲೋಡಿ ಹೋದರು.
ಸುತ್ತಲಿರುವ ಬಂಧುಗಳೆಲ್ಲ ಬಯಲಾದರು.
ಎನ್ನ ತಂದೆ ತಾಯಿ ಕಟ್ಟಿದ
ಚಿಕ್ಕಂದಿನ ಗಂಡನ ದಿಟ್ಟಿಸಿ,
ನೋಡುವ ನೋಟ ಹೋಗಿ,
ಎನ್ನ ಮನಕ್ಕೆ ಸಿಲ್ಕಿತ್ತು.
ಅಂಗಲಿಂಗವೆಂಬ ಉಭಯವಳಿಯಿತ್ತು.
ಸಂಗಸುಖ ಹಿಂಗಿತ್ತು.
ಮಂಗಳದ ಮಹಾಬೆಳಗಿನಲ್ಲಿ
ಓಲಾಡಿ ಸುಖಿಯಾದೆನಯ್ಯ
ಅಪ್ಪಣಪ್ರಿಯ ಚನ್ನಬಸವಣ್ಣಾ.
*****
Related Post
ಸಣ್ಣ ಕತೆ
-
ಬಲಿ
ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…
-
ವಾಮನ ಮಾಸ್ತರರ ಏಳು ಬೀಳು
"ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…
-
ದೇವರು
ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…
-
ಪತ್ರ ಪ್ರೇಮ
ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…
-
ಮೈಥಿಲೀ
"ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…