Home / ಕವನ / ವಚನ / ಲಿಂಗಮ್ಮನ ವಚನಗಳು – ೯೦

ಲಿಂಗಮ್ಮನ ವಚನಗಳು – ೯೦

ಅಯ್ಯ, ನಾ ಮರ್ತ್ಯದಲ್ಲಿ ಹುಟ್ಟಿ,
ಕಷ್ಟ ಸಂಸಾರಿ ಎನಿಸಿಕೊಂಡೆ.
ಕತ್ತಲೆಯಲ್ಲಿ ಮುಳುಗಿದೆ.
ಕರ್ಮಕ್ಕೆ ಗಿರಿಯಾಗುತಿದ್ದರೆ,
ಹೆತ್ತ ತಾಯಿ ಎಂಬ ಗುರುಸ್ವಾಮಿ
ಎನ್ನ ಕೊರಳಿಗೆ ಗಂಡನೆಂಬ ಲಿಂಗಕಟ್ಟಿದನು.
ತಂದೆ ಎಂಬ ಜಂಗಮಲಿಂಗವು
ಎನ್ನ ಪ್ರಾಣಕ್ಕೆ ಪ್ರಸಾದವ ಊಡಿದನು.
ಪ್ರಾಣಕ್ಕೆ ಪ್ರಸಾದವನೊಡಲಾಗಲೆ,
ಕತ್ತಲೆ ಹರಿಯಿತ್ತು. ಕರ್ಮ ಹಿಂಗಿತ್ತು.
ಮನ ಬತ್ತಲೆಯಾಯಿತ್ತು.
ಚಿತ್ತ ಸುಯಿಧಾನವಾಯಿತ್ತು, ನಿಶ್ಚಿಂತವಾಯಿತ್ತು.
ನಿಜನ ನೆಮ್ಮಿ ನೋಡುವನ್ನಕ್ಕ,
ಎನ್ನ ಅತ್ತೆ ಮಾವನು ಅರತು ಹೋದರು.
ಅತ್ತಿಗೆ ನಾದಿನಿಯರು ಎತ್ತಲೋಡಿ ಹೋದರು.
ಸುತ್ತಲಿರುವ ಬಂಧುಗಳೆಲ್ಲ ಬಯಲಾದರು.
ಎನ್ನ ತಂದೆ ತಾಯಿ ಕಟ್ಟಿದ
ಚಿಕ್ಕಂದಿನ ಗಂಡನ ದಿಟ್ಟಿಸಿ,
ನೋಡುವ ನೋಟ ಹೋಗಿ,
ಎನ್ನ ಮನಕ್ಕೆ ಸಿಲ್ಕಿತ್ತು.
ಅಂಗಲಿಂಗವೆಂಬ ಉಭಯವಳಿಯಿತ್ತು.
ಸಂಗಸುಖ ಹಿಂಗಿತ್ತು.
ಮಂಗಳದ ಮಹಾಬೆಳಗಿನಲ್ಲಿ
ಓಲಾಡಿ ಸುಖಿಯಾದೆನಯ್ಯ
ಅಪ್ಪಣಪ್ರಿಯ ಚನ್ನಬಸವಣ್ಣಾ.
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...