Home / ಕವನ / ಕವಿತೆ / ಶಿವರಾಮರಾಯರು

ಶಿವರಾಮರಾಯರು

ಶಿವರಾಮರಾಯರು ಹೆಸರಾಂತ ಲಾಯರು,
ವ್ಯವಹಾರ ಭೂಮಿಯಲಿ ಕಾಮಧೇನು;
ಬೆಟ್ಟಗಲ ಜರತಾರಿಯಂಚಿನ ರುಮಾಲೇನು,
ರಟ್ಟೆಯಷ್ಟೇ ಇರುವ ಮೀಸೆಯೇನು!

ಮೇಲ್ಮನೆಯೆ ಮೆಲ್ದನಿಯ ಶಿವರಾಮರಾಯರು.
ಮೈಬಣ್ಣ ಕೆಂಪಿನ ಗುಲಾಬಿಯಂತೆ ;
ಸತ್ಯವಂತರಿಗಿವರು ಸುಲಭದಲಿ ಲಾಯರು
ಇವರಿದ್ದ ಕಡೆ ಗೆಲ್ವು ಸಿದ್ಧವಂತೆ.

ಶಿವರಾಮರಾಯರು ತುಂಬಿರುವ ಸಂಸಾರಿ;
ಹತ್ತೂರ ಮುಂದಾಳು, ಮುತ್ತು ಇವರು.
ಕೈಹಿಡಿದ ಮಡದಿಯೋ ಸಂಕ್ಷಿಪ್ತ ಗಾಂಧಾರಿ.-
ಸಂಸಾರಸಾಗರವ ದಾಟುತಿಹರು.

ಶಿವರಾಮರಾಯರು ಅದೃಷ್ಟಶಾಲಿಗಳೆನ್ನಿ! –
ಆಗರ್ಭ ಶ್ರೀಮಂತರೆನುವ ಬಿರುದು.
ಹತ್ತೂರ ಗೋಜೆಲ್ಲ ಇವರ ಮನೆ ಬಾಗಿಲಲಿ
ಇತ್ಯರ್ಥವಾಗುವುದು, ದಾರಿ ಹೊಳೆದು.

ಶಿವರಾಮರಾಯರು ತುಂಬ ಖಂಡಿತವಾದಿ;
ಮಂದಹಾಸವೆ ಇವರ ಸಿರಿ ಬಾವುಟ.
ನಿರ್ಭಯದಿ ಬಳಸುವರು ‘ಕೋಡು’ಗಳ ಕಾಡಿನಲಿ;
‘ಕೋರ್ಟಿ’ಗೂ ಹಿತವಂತೆ ಇವರಾವುಟ.

ರಜವಿದ್ದ ಸಂಜೆಯಲಿ ಒಳಮುನೆಯ ಬೆಳಕಿನಲಿ
ಪುಸ್ತಕದ ಪಂಕ್ತಿಯಲಿ ವಲ್ಲಿ ಹೊದ್ದು;
ಕನ್ನಡಕದಂಚಿನಲಿ ಜಿಗಿವ ಕಣ್ಮಿಂಚಿನಲಿ
ಮುದ್ದು ಮಗಳೇ ಇಳಿದು ಗುದ್ದು ಕೊಡಲು,

ಪತ್ರ ಓದುತ್ತಲೇ ಚರ್ಚೆ ಮಾಡುತ್ತಲೇ
ಹೆಂಡತಿಯ ಸೂಚನೆಗೆ ಸನ್ನೆಮಾಡಿ,
ಒಂದೆ ನದಿ ಎರಡು ಎತ್ತರಗಳಲಿ ಹರಿವಂತೆ,
ಜೀವನವ ನಡಸುತ್ತ ಗೌರವದಲಿ,

ಗೆದ್ದವರನಾದರಿಸಿ ಸೋತವರ ಸಂತವಿಸಿ
ತಾವು ಎರಡೂ ಕಡೆಗೆ ಬಂಧುವೆನಿಸಿ
ದೇವರಿಗೆ ಕೈಮುಗಿಸಿ ಸ್ನೇಹಗಳ ತಲೆಯುಳಿಸಿ
ಅಲಲ್ಲಿಗಂದಂದೆ ಗಂಟು ಬಿಡಿಸಿ,

ಶಿವರಾಮರಾಯರು, ಹೆಸರಾಂತ ಲಾಯರು
ತಮ್ಮ ಹೊರೆಯೇ ತಮ್ಮ ಬೆನ್ನಿಗಿರಲು,
ಸುಮ್ಮನಿರಲಾರದೆಯೆ ಅವರಿವರ ದುರಿತವನು
ಆಧುನಿಕ ‘ಆಟ್ಲಾಸಿನಂತೆ’ ಹೊತ್ತು-

ಭಗವಂತನಡಿಯಮೇಲಗಣಿತ ವ್ಯೂಹದಲಿ
ಬಣ್ಣ ಬಣ್ಣದ ಬುಗುರಿ ಆಡುತಿರಲು
ಕಂತೆಗಳು, ಚಿಂತೆಗಳು, ಸಂತೆಗಳು ಸುತ್ತಾಡಿ
ಇದ್ದಲ್ಲೆ ಬಿದ್ದಲ್ಲೆ ಬೀಳುತಿರಲು,-

ಹೋರಾಡುತಿರುವರು. ಪಾಪ! ಇವರೊಬ್ಬರು ;
ತಲೆ ಬೆಳ್ಳಗಾಗಿಹುದು ತೊಂದರೆಯಲಿ.
ವಿಧಿನಿಯಮವಿದ್ದಂತೆ, ಹೋದ ಮಳೆ ಬಿದ್ದಂತೆ
ನಡೆವುದೂರಿನ ಬಾಳು ತೋರಿಕೆಯಲಿ.-

ಈ ನಡುನೆ ತಲೆಹಾಕಿ ಕಂಡ ಪಾತಾಳದಲಿ
ಕಾಲಿಟ್ಟು ಬೀಳುವುದು ಒಂದು ತಪ್ಪು.
ಕ್ಷೀರಸಾಗರನೆಂದು ಹಾಡಿರಲಿ ಕವಿತೆಯಲಿ,
ಕಡಲ ನೀರೆಲ್ಲೆಲ್ಲು ತುಂಬ ಉಪ್ಪು.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...