ದೂರ್ವಾಸರಿಗೆ

ಮಹಾಭಾರತದ ಮಹಾಮುನಿಗಳಲಿ ದೂರ್ವಾಸ
ಅಪೂರ್ವ ನಿನ್ನ ಮಹಿಮೆ. ವ್ಯಾಸ, ಕುವರವ್ಯಾಸ
ಕಾಲ ಶಿಲೆಯಲ್ಲಿ ಕಡೆದಿಹರು ನಿನ್ನ ಅಶಾಂತ
ಗ್ರೀಷ್ಮ ಮಧ್ಯಾಹ್ನ ಮೂರ್ತಿಯನು. ಆರ್ಯಾವರ್ತ
ಒಂದು ಕಾಲದಲಿ ಆಶ್ರಮ ನಿಯಮ ಹದಗೆಟ್ಟು
ತ್ಯಾಗದ ಮುಖದ ಮೇಲೆ ಭೋಗದ ಬಂಗು ಬರಲು
ನೀ ಬಂದೆ, ಋಷಿ ಕುಲವ ಶಾಪದಿಂದಲೆ ತೊಳೆದೆ,
ಬೆಳಗಿದೆ, ನಿಲ್ಲಿಸಿದೆ ಧರ್ಮಾಸನದ ಮೇಲೆ.-

ಮುಟ್ಟಿದರೆ ಮುನಿಯೆಂದು ದೂರುತ್ತಲೇ ಇರಲಿ
ನಿನ್ನ ನೆನೆಯಲು ಕೂಡ ಬಲವಿರದ ಹೆಂಬೇಡಿ,
ವರ ಕೊಡುವ ಸಣ್ಣ ಕರುಣೆಗೆ ತೊತ್ತೆ ನೀನು?
ಶಾಪವೇ ನಿನ್ನ ಭಾಗ್ಯದ ಕಾಮಧೇನು.
ನೀನಿತ್ತ ಶಾಪದಿಂದಲೆ, ಶಾಪದಿಂದಲೇ
ಸರ್ವದಮನೋದಯವ ಕಂಡಳು ಶಕುಂತಲೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹರಿಯುವ ನೀರು
Next post ಹುಲ್ಲು ಹೇಗೆ ಹಾಲಾಗುತ್ತೆ?

ಸಣ್ಣ ಕತೆ

  • ಬಿರುಕು

    ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್‍ತಿ ಬೆಚ್ಚಿ… Read more…

  • ಹಳ್ಳಿ…

    ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿ‌ಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…

  • ವ್ಯವಸ್ಥೆ

    ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ಕರಿ ನಾಗರಗಳು

    ಚಿತ್ರ: ಆಂಬರ್‍ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್‌ ನೀರು ಹರಿಯುತ್ತಿದ್ದ… Read more…