Home / ಬಾಲ ಚಿಲುಮೆ / ಕವಿತೆ / ನಾನೇ ಅಪ್ಪ ಆಗ್ತೀನಿ

ನಾನೇ ಅಪ್ಪ ಆಗ್ತೀನಿ

ಅಪ್ಪ ಹೊರಗಡೆ ಹೋದಾಗ
ಕೋಟು ಬೂಟು ಹಾಕ್ಕೊಂಡು
ಅಪ್ಪನ ಕಪ್ಪನೆ ಕನ್ನಡಕ
ಕಣ್ಣಿಗೆ ಸರಿಯಾಗ್ ಇಟ್ಕೊಂಡು
ನಾನೇ ಅಪ್ಪ ಆಗ್ತೀನಿ
ದಪ್ಪನೆ ದನೀಲಿ ಕೂಗ್ತೀನಿ
ಅಣ್ಣ ಅಕ್ಕ ಎಲ್ಲರಿಗೂ
ಸಖತ್ತು ರೋಪು ಹಾಕ್ತೀನಿ!

ಅಣ್ಣನ್ ಕರೆದು ಕೇಳ್ತೀನಿ:
“ಯಾಕೋ ಸ್ಕೂಲಿಗೆ ಹೋಗ್ಲಿಲ್ಲ?
ತಮ್ಮನ್ ಬಯ್ತೀಯಂತಲ್ಲೋ
ಪೆದ್ದ, ನಾಚಿಕೆ ಆಗೊಲ್ವ?
ನಿನ್ನಲ್ಲಿರೋ ಚೆಂಡನ್ನ
ಬ್ಯಾಟು ಬಳಪ ಗೋಲೀನ
ತೆಪ್ಪಗೆ ಅವ್ನಿಗೆ ಕೊಟ್ಟು ಬಿಡು
ಇಲ್ಲವೆ, ತಿನ್ತೀ ಒದೆಯನ್ನ.”

ಅಕ್ಕನ್ ಕರೆದು ಕೇಳ್ತೀನಿ:
“ಎಲ್ಲಿದ್ದಾನೇ ನಿನ್ ತಮ್ಮ?
ಅಂಥಾ ಮುದ್ದಿನ ಹುಡುಗನ್ನ
ಓದಿಸಿ ದಣಿಸೋದೇನಮ್ಮ,
ಚಿಕ್ಕವನಾದ್ರೂ ಏನ್ ಬುದ್ದಿ
ಅವನ್ಯಾಕ್ ಪಾಠ ಓದ್ಬೇಕು?
ಪಾಠ ಬೇಡ ಅವನನ್ನು
ಆಟಕ್ ಕರ್‍ಕೊಂಡು ಹೋಗ್ಬೇಕು.”

ಅಮ್ಮನ್ ಕರೆದು ಕೇಳ್ತೀನಿ:
“ತಿಂಡಿ ತುಂಬಿದ ಡಬ್ಬಾನ
ಗೂಡಿನ ಒಳಗಡೆ ಮುಚ್ಚಿಟ್ಟು
ಯಾಕೇ ಬೀಗ ಹಾಕ್ತೀಯ?
ತಿಂಡಿ ಇರೋದು ಚಿಕ್ ಮಕ್ಳು
ತಿನ್ನೋದಕ್ಕೇ ಅಲ್ವೇನೇ?
ಮಗೂಗೆ ಎಲ್ಲಾ ಕೊಟ್ಟುಬಿಡೆ
ನಾವ್ ತಿಂದಿದ್ದು ಸಾಲ್ದೇನೇ?”

ಅಜ್ಜೀನ್ ಕರೆದು ಕೇಳ್ತೀನಿ:
“ಯಾಕೇ ಮಗೂನ ಬಯ್ತೀಯ?
ಉಸ್ಮಾನ್ ಜೊತೆಗೆ ಆಡಿದರೆ
ಯಾತಕ್ ಸಿಡಿ ಸಿಡಿ ಮಾಡ್ತೀಯ?
ಬೇರೆ ಜಾತಿ ಆದ್ರೇನು
ಅವನೂ ಮನುಷ್ಯ ಅಲ್ವೇನೆ?
ಜಾತಿ ಮತದ ಭೇದ ಮಾಡೋದ್
ಯಾರೇ ಆದ್ರೂ ಸರಿಯೇನೇ?”

ಅಕ್ಕನ ಪಾಠ ತಪ್ಪತ್ತೆ
ಅಣ್ಣಂಗ್ ಲಾತ ಬೀಳತ್ತೆ!
ಅವನ ಆಟದ ಸಾಮಾನು
ಎಲ್ಲಾ ನಂಗೇ ಸಿಕ್ಕತ್ತೆ!
ಎಲ್ಲಾ ತಿಂಡಿ ಬಾಚ್ಕೊಂಡು
ಅಟ್ಟದ ಮೇಲೆ ಇಟ್ಕೊಂಡು
ಖರಮ್ ಖುರಮ್ ತಿಂತೀನಿ
ಟೀಪೂ ಬಿರ್ಜು ಕರ್‍ಕೊಂಡು!
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...