ಸೀತೆಯ ಭಾಗ್ಯ

ಸೀತೆಯೇ ಲೋಕಕ್ಕೆ ತಾಯಿ. ಸಾವಿರ ರಾಮ
ತೂಗುವರೆ ಇವಳ ತೂಕಕ್ಕೆ? ರಾಮಾಯಣದ
ಅಂಕಿತವೆ ಒಂದು ಅನ್ಯಾಯ ಸೀತೆಯ ಕಥೆಗೆ.
ಯಾರಿಗಾ ಸೇತುಬಂಧನ? ಸೀತೆಯ ವ್ಯಥೆಗೆ?
ಯಾರಿಗಾ ರಾಕ್ಷಸ ವಿನಾಶ ? ಯುದ್ಧ ಮುಗಿಯಲು,
ಸೆರೆತೆರೆದು ಬಂದ ಮಡದಿಯನು ಕೈಹಿಡಿದವನು
ಸಂಶಯದ ಓರೆಗಣ್ಣಿನಲಿ ನೋಡಿದಮೇಲೆ
ಇನ್ಯಾವ ಭಾಗ್ಯ ಉಳಿದಿತ್ತು ಸೀತೆಗೆ? ಇದಕೆ
ಲೋಕವನು ಒಪ್ಪಿಸುನ ಕುಂಟು ಕಾರಣವೇಕೆ ?…
ಬೆಂಕಿಯಲಿ ನಿಂತು ಬೆಳ್ದಿಂಗಳಾದಳು ಸೀತೆ.

ಮಹಾಲಕ್ಷ್ಮಿ ಸೀತೆ. ಗಂಡಿಗೆ ಬಂದ ಸಂಶಯವೆ
ಹೆಣ್ಣಿಗೂ ಬಂದು, ಒಂದೇ ಮಾತನಾಡಿದಳೆ?
ಲೋಕ ಸಮ್ಮತಿಯ ಬೇಡಿದಳೆ ? ಹೂ ಬಾಡದೆಯೆ,
ಬಂದು ನಿಂತಳು ನಗುತ ರಾಫವನ ಜೊತೆಗೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನೇತಾಜಿ
Next post ಅಡಿಗೆ ಮನೇಲಿ ನೂರಾರ್ ಡಬ್ಬ

ಸಣ್ಣ ಕತೆ

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

cheap jordans|wholesale air max|wholesale jordans|wholesale jewelry|wholesale jerseys