Home / ಕಥೆ / ಜನಪದ / ಕಾಳಿನ ಮೇಲೆ ಹೆಸರು

ಕಾಳಿನ ಮೇಲೆ ಹೆಸರು

ಚಿತ್ರ: ಅಪೂರ್ವ ಅಪರಿಮಿತ
ಚಿತ್ರ: ಅಪೂರ್ವ ಅಪರಿಮಿತ

ಸಾಹುಕಾರನು ನೆಲಗಡಲೆ ತಿನ್ನುತ್ತ ತನ್ನ ಮನೆಯ ತಲೆವಾಗಿಲ ಮುಂದೆ ಕುಳಿತಿದ್ದನು. ಅತ್ತಕಡೆಯಿಂದ ಒಬ್ಬ ಸಾಧು ಬಂದು ಭಿಕ್ಷೆ ಬೇಡಿದನು. “ಮುಂದಿನ ಮನೆಗೆ ಹೋಗು’” ಎಂದು ಸಾಹುಕಾರನು ನುಡಿದನು.

“ತಿನ್ನಲು -ನಾಲ್ಕು ಕಾಯಿಗಳನ್ನಾದರೂ ಕೊಡಿರಿ” ಎಂದನು ಸಾಧು.

“ಅವು ಪುಕ್ಕಟೆ ಬಂದಿಲ್ಲ. ನಮಗೆ ಸಾಕಾಗಿ ಉಳಿದರೆ, ನಿನ್ನನ್ನು ಕರೆದು ಕೊಡುವೆನು. ಆಯಿತೇ ?” ಎಂದು ಸಾಹುಕಾರನು ಹೀಯಾಳಿಸಿದನು.

“ಎಲ್ಲವನ್ನೂ ನಾನೇ ತಿನ್ನುವೆನೆಂದರೆ ಸಾಧ್ಯವೇ ? ಪ್ರತಿಯೊಂದು ಕಾಳಿನ ಮೇಲೆ ಅದು ಹುಟ್ಟುವಾಗಲೇ ಅದನ್ನು ಯಾರು ತಿನ್ನಬೇಕಾಗಿದೆಯೋ ಅವರ ಹೆಸರು ಬರೆದಿರುತ್ತದೆ.”

ಸಾಹುಕಾರನ ತಲೆ ತಿರುಗಿತು – ಸಾಧುವಿನ ಬ್ರಹ್ಮಜ್ಞಾನವನ್ನು ಕೇಳಿ. ಕೇಳಿದನು – “ನೀನೊಬ್ಬ ಒಂಟೆಯ ಮೇಲಿನ ಜಾಣನೇ ಬಂದಿರುವೆಯಲ್ಲ ! ಇಲ್ಲಿ ನೋಡು ನನ್ನ ಕೈ ಬೆರಳಿನಲ್ಲಿ ಹಿಡಿದ ಕಾಳು ! ಇದರ ಮೇಲೆ ಯಾರ ಹೆಸರು ಬರೆದಿದೆ ಹೇಳು ನೋಡುವಾ.”

“ಅದರ ಮೇಲೆ ಒಂದು ಕಾಗೆಯ ಹೆಸರಿದೆ. ಆ ಕಾಳು ಅದರ ಆಹಾರ” ಎಂದನು ಸಾಧು.

ಸಾಹುಕಾರನು ಈರ್ಷೆಯಿಂದ – “ಇದೋ ನಾನಿದನ್ನು ತಿಂದುಬಿಡುವೆ. ಎಲ್ಲಿದೆ ನಿನ್ನ ಆ ಕಾಗೆ ?” ಎನ್ನುತ್ತ ಆ ಕಾಳನ್ನು ಬಾಯಲ್ಲಿ ಒಗೆದುಕೊಳ್ಳಹೋದನು. ಅದು ತಪ್ಪಿ ಅವನ ಮೂಗಿನ ಹೊರಳೆಯಲ್ಲಿ ಸೇರಿಬಿಟ್ಟಿತು.

ನೆಲಗಡಲೆಯಕಾಳು ಮೂಗಿನ ಹೊರಳೆಯಲ್ಲಿ ಸೇರಿಬಿಟ್ಟಿದ್ದರಿಂದ ಸಾಹುಕಾರನ ಉಸಿರಾಟಕ್ಕೆ ತಡೆಯಾಯಿತು. ಕೂಗಾಡತೊಡಗಿದನು. ಆ ಗಲವಿಲಿಗೆ ನೆರೆಹೊರೆಯವರು ನೆರೆದರು. ಆತನನ್ನು ಹೊತ್ತುಕೊಂಡು ಕ್ಷೌರಿಕನ ಮನೆಗೆ ಹೋದರು.

ತನ್ನಲ್ಲಿರುವ ಚಿಮಟಿಗೆಯಿಂದ ಹಡಪಿಗನು, ಸಾಹುಕಾರನ ಮೂಗಿನೊಳಗಿನ ಆ ಕಾಳನ್ನು ತೆಗೆದು ಬೀಸಿ ಅಂಗಳಕ್ಕೆ ಒಗೆದನು. ಕೂಡಲೇ ಬದಿಯ ಗಿಡದಲ್ಲಿ ಕುಳಿತ ಕಾಗೆ ಹಾರಿಬಂದು ಆ ಕಾಳನ್ನು ಕಟ್ಟಿಕೊಂಡು ಹೋಯಿತು.

“ಕಾಗೆಗೆಂದು ಹುಟ್ಟಿದ ಕಾಳು ಕಾಗೆಗೆ ಸಂದಿತು” ಎಂದನು ಆ ಸಾಧು. ಆ ಬಳಿಕ ಸಾಧುವನ್ನು ಕರೆದು ಸಾಹುಕಾರನು ಸತ್ಕರಿಸಿ ಕಳಿಸಿದನು.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...