Home / ಕಥೆ / ಜನಪದ / ಕಾಳಿನ ಮೇಲೆ ಹೆಸರು

ಕಾಳಿನ ಮೇಲೆ ಹೆಸರು

ಚಿತ್ರ: ಅಪೂರ್ವ ಅಪರಿಮಿತ
ಚಿತ್ರ: ಅಪೂರ್ವ ಅಪರಿಮಿತ

ಸಾಹುಕಾರನು ನೆಲಗಡಲೆ ತಿನ್ನುತ್ತ ತನ್ನ ಮನೆಯ ತಲೆವಾಗಿಲ ಮುಂದೆ ಕುಳಿತಿದ್ದನು. ಅತ್ತಕಡೆಯಿಂದ ಒಬ್ಬ ಸಾಧು ಬಂದು ಭಿಕ್ಷೆ ಬೇಡಿದನು. “ಮುಂದಿನ ಮನೆಗೆ ಹೋಗು’” ಎಂದು ಸಾಹುಕಾರನು ನುಡಿದನು.

“ತಿನ್ನಲು -ನಾಲ್ಕು ಕಾಯಿಗಳನ್ನಾದರೂ ಕೊಡಿರಿ” ಎಂದನು ಸಾಧು.

“ಅವು ಪುಕ್ಕಟೆ ಬಂದಿಲ್ಲ. ನಮಗೆ ಸಾಕಾಗಿ ಉಳಿದರೆ, ನಿನ್ನನ್ನು ಕರೆದು ಕೊಡುವೆನು. ಆಯಿತೇ ?” ಎಂದು ಸಾಹುಕಾರನು ಹೀಯಾಳಿಸಿದನು.

“ಎಲ್ಲವನ್ನೂ ನಾನೇ ತಿನ್ನುವೆನೆಂದರೆ ಸಾಧ್ಯವೇ ? ಪ್ರತಿಯೊಂದು ಕಾಳಿನ ಮೇಲೆ ಅದು ಹುಟ್ಟುವಾಗಲೇ ಅದನ್ನು ಯಾರು ತಿನ್ನಬೇಕಾಗಿದೆಯೋ ಅವರ ಹೆಸರು ಬರೆದಿರುತ್ತದೆ.”

ಸಾಹುಕಾರನ ತಲೆ ತಿರುಗಿತು – ಸಾಧುವಿನ ಬ್ರಹ್ಮಜ್ಞಾನವನ್ನು ಕೇಳಿ. ಕೇಳಿದನು – “ನೀನೊಬ್ಬ ಒಂಟೆಯ ಮೇಲಿನ ಜಾಣನೇ ಬಂದಿರುವೆಯಲ್ಲ ! ಇಲ್ಲಿ ನೋಡು ನನ್ನ ಕೈ ಬೆರಳಿನಲ್ಲಿ ಹಿಡಿದ ಕಾಳು ! ಇದರ ಮೇಲೆ ಯಾರ ಹೆಸರು ಬರೆದಿದೆ ಹೇಳು ನೋಡುವಾ.”

“ಅದರ ಮೇಲೆ ಒಂದು ಕಾಗೆಯ ಹೆಸರಿದೆ. ಆ ಕಾಳು ಅದರ ಆಹಾರ” ಎಂದನು ಸಾಧು.

ಸಾಹುಕಾರನು ಈರ್ಷೆಯಿಂದ – “ಇದೋ ನಾನಿದನ್ನು ತಿಂದುಬಿಡುವೆ. ಎಲ್ಲಿದೆ ನಿನ್ನ ಆ ಕಾಗೆ ?” ಎನ್ನುತ್ತ ಆ ಕಾಳನ್ನು ಬಾಯಲ್ಲಿ ಒಗೆದುಕೊಳ್ಳಹೋದನು. ಅದು ತಪ್ಪಿ ಅವನ ಮೂಗಿನ ಹೊರಳೆಯಲ್ಲಿ ಸೇರಿಬಿಟ್ಟಿತು.

ನೆಲಗಡಲೆಯಕಾಳು ಮೂಗಿನ ಹೊರಳೆಯಲ್ಲಿ ಸೇರಿಬಿಟ್ಟಿದ್ದರಿಂದ ಸಾಹುಕಾರನ ಉಸಿರಾಟಕ್ಕೆ ತಡೆಯಾಯಿತು. ಕೂಗಾಡತೊಡಗಿದನು. ಆ ಗಲವಿಲಿಗೆ ನೆರೆಹೊರೆಯವರು ನೆರೆದರು. ಆತನನ್ನು ಹೊತ್ತುಕೊಂಡು ಕ್ಷೌರಿಕನ ಮನೆಗೆ ಹೋದರು.

ತನ್ನಲ್ಲಿರುವ ಚಿಮಟಿಗೆಯಿಂದ ಹಡಪಿಗನು, ಸಾಹುಕಾರನ ಮೂಗಿನೊಳಗಿನ ಆ ಕಾಳನ್ನು ತೆಗೆದು ಬೀಸಿ ಅಂಗಳಕ್ಕೆ ಒಗೆದನು. ಕೂಡಲೇ ಬದಿಯ ಗಿಡದಲ್ಲಿ ಕುಳಿತ ಕಾಗೆ ಹಾರಿಬಂದು ಆ ಕಾಳನ್ನು ಕಟ್ಟಿಕೊಂಡು ಹೋಯಿತು.

“ಕಾಗೆಗೆಂದು ಹುಟ್ಟಿದ ಕಾಳು ಕಾಗೆಗೆ ಸಂದಿತು” ಎಂದನು ಆ ಸಾಧು. ಆ ಬಳಿಕ ಸಾಧುವನ್ನು ಕರೆದು ಸಾಹುಕಾರನು ಸತ್ಕರಿಸಿ ಕಳಿಸಿದನು.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...