Home / ಕಥೆ / ಜನಪದ / ಗೌಡರ ನಾಯಿ

ಗೌಡರ ನಾಯಿ

ಗೋಡಿಹಾಳ ಗ್ರಾಮ ಚಿಕ್ಕದಾದರೂ ಅಲ್ಲಿಯ ಗೌಡರು ದೊಡ್ಡವರಾಗಿದ್ದರು. ಶ್ರೀಮಂತಿಕೆಗಿಂತ ಅವರಲ್ಲಿ ತಿಳಿವಳಿಕೆ ಹೆಚ್ಚಾಗಿತ್ತು. ವಯಸ್ಸಿನಿಂದಲೂ ಹಿರಿಯರಾಗಿದ್ದರು. ಮಕ್ಕಳೆಲ್ಲ ಕೈಗೆ ಬಂದಿದ್ದರು. ಹಿರೇಮಗ ಗೌಡಿಕೆಯನ್ನೂ, ಚಿಕ್ಕವನು ಹೊಲಮನೆಗಳ ಮೇಲ್ವಿಚಾರಣೆಯನ್ನೂ ನಿಸ್ತರಿಸುತ್ತಿದ್ದನು. ದೊಡ್ಡ ಗೌಡರು ವೇದಾಂತಗ್ರಂಥಗಳನ್ನು ಓದುವುದರಲ್ಲಿ ಆಸಕ್ತಿಯುಳ್ಳವರು. ಬಂದವರೊಡನೆ ಚರ್ಚೆ ಮಾಡುವುದರಲ್ಲಿ ಅವರಿಗೆ ವೇಳೆಯೇ ಸಾಲುತ್ತಿರಲಿಲ್ಲ.

ಚಳಿಗಾಲದ ಮುಂಜಾವಿನಲ್ಲಿ ಮನೆಯ ಮುಂದಿನ ಕಟ್ಟೆಯ ಮೇಲೆ ಬಿಸಿಲು ಕಾಯಿಸಿಕೊಳ್ಳುತ್ತ ಕುಳಿತರೆಂದರೆ, ಅವರ ಮಗ್ಗುಲಲ್ಲಿ ಒಂದು ನಾಯಿ ಯಾವಾಗಲೂ ಪವಡಿಸಿರುತ್ತಿತ್ತು. ಗೌಡರ ಸಲುವಾಗಿ ಅದೆಷ್ಟೋ ಜನರು ಅಲ್ಲಿಗೆ ಬಂದಾಗ ಆ ನಾಯಿ ಜಗ್ಗನೆದ್ದು ಕವ್ವನೇ ಬೊಗಳಿ ಹೆದರಿಸುವದು. ಒಮ್ಮೊಮ್ಮೆ ಚಂಗನೆ ನೆಗೆದು ಬಂದವರ ಮೈಮೇಲೆ ಏರಿಹೋಗುವದು. ಆಗ ಗೌಡರು ಬೆದರಿಸಿ ಅದನ್ನು ಹತ್ತಿರ ಕರೆದು ಕುಳ್ಳಿರಿಸಿಕೊಳ್ಳುವರು. ಅದರಿಂದ ಸಂದರ್ಶನಾರ್ಥಿಗಳಿಗೆ ನಿರ್ಬಾಧವಾಗುವದು.

ಅದೆಷ್ಟೋ ಜನರು ನಾಯಿಗಂಜಿಯೇ ಗೌಡರ ಬಳಿಗೆ ಹೋಗುವುದಕ್ಕೆ ಹಿಂಜರಿಯುತ್ತಿದ್ದರು. ನಾಯಿಯ ಆ ಸ್ವಭಾವಕ್ಕಾಗಿ ಗೌಡರಿಗೂ ಬೇಸರವೆನಿಸಿತ್ತು. ಅದರ ಸ್ವಭಾವ ಪರಿವರ್ತನೆಗೊಳಿಸುವದಕ್ಕೆ ಯಾವ ಹಂಚಿಕೆಮಾಡಬೇಕು – ಎಂದು ಯೋಚನೆಗೀಡಾದರು. ಒಂದು ಯುಕ್ತಿಯೂ ಹೊಳೆಯಿತವರಿಗೆ. ಸಿದ್ಧತೆಮಾಡಿ ಕೊಂಡರು. ನಾಯಿಯನ್ನು ಹತ್ತಿರಕ್ಕೆ ಕರೆದು ಕುಳ್ಳಿರಿಸಿಕೊಂಡರು. ಸೂಜಿಯಿಂದ ಕೇರಿನೆಣ್ಣೆ ತೆಗೆದು ನಾಯಿಯ ಪೃಷ್ಠದ್ವಾರದ ಮೇಲೆ ಅಧಿಕ ಚಿಹ್ನ ಬರೆದರು. ಅದು ಒಂದೆರಡು ದಿನಗಳಲ್ಲಿ ಗುದುಗುದಿಸಹತ್ತಿದ್ದರಿಂದ ನಾಯಿ ಎದ್ದುನಿಂತು ಮುಕಳಿಯನ್ನು ನೆಲಕ್ಕೆ ತಿಕ್ಕಿತು. ಅದರಿಂದ ಗುದದ್ವಾರವು ಕೆತ್ತಿಹೋಗಿ ಹುಣ್ಣೇ ಬಿದ್ದಿತು. ಕೀವು ಆಯಿತು. ಆದರೆ ಬಂದ ಹೊಸಬರನ್ನು ಕಂಡು, ವವ್ವ್ ಎಂದು ಬೊಗಳಿ ಅವರ ಮೈಮೇಲೆ ಹೋಗುವುದನ್ನು ಬಿಟ್ಟಿರಲಿಲ್ಲ. ಆದರೆ ವವ್ವ್ ಎಂದು ಬೊಗಳಬೇಕಾದರೆ ಗುದದ್ವಾರವನ್ನು ಬಿಗಿಹಿಡಿಯಬೇಕಾಗುತ್ತದೆ. ಹಾಗೆ ಬಿಗಿಹಿಡಿಯುವಾಗ, ಹುಣ್ಣು ಬಿದ್ದಿದ್ದರಿಂದ ಅಸಹ್ಯವಾದ
ನೋವುಂಟಾಗುವದು. ಅದೆಷ್ಟು ರಭಸದಿಂದ ಚಂಗನೆ ನೆಗೆದು ಬಂದವರ ಮೈಮೇಲೆ ಹೋಗುವದೋ, ಅಷ್ಟೇ ವೇದನೆಯಿಂದ “ಅಂಽಽಽ ಎಂದು ನರಳಿ ಹಿಂದಿರುಗಿ ಬರತೊಡಗಿತು.

ಗುದದ್ವಾರದಲ್ಲಿ ಬಿದ್ದ ಹುಣ್ಣಿನ ನೋವಿಗಂಜಿ ಅದು, ರಭಸದಿಂದ ಬೊಗಳಿ ಬಂದವರ ಮೇಲೆ ಹೋಗುವುದನ್ನು ಒಮ್ಮೆಲೇ ಕಡಿಮೆ ಮಾಡಿತು. ಅಲ್ಲಿಯವರಿಗೆ ಆ ಹುಣ್ಣು ಮಾಯಿಸುವ ಉಪಾಯವನ್ನೇ ಮಾಡಲಿಲ್ಲ ಗೌಡರು.

“ಕಳೆನೋಡಿ ಕೇರು ಹಾಕಿದರೆ ಹಾದಿಗೆ ಬಾರದವರಾರು” ಎಂದು ಗೌಡರು ಮೇಲಿಂದ ಮೇಲೆ ಮಾತಿನಲ್ಲಿ ನುಡಿಯತೊಡಗಿದರು. ಕೇಳಿದವರಿಗೆ ಅದು ಸತ್ಯವೂ ಅನಿಸಿತು.
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಎಂ ಎನ್ ಎಸ್ ರಾವ್