Home / ಕಥೆ / ಜನಪದ / ಗೌಡರ ನಾಯಿ

ಗೌಡರ ನಾಯಿ

ಗೋಡಿಹಾಳ ಗ್ರಾಮ ಚಿಕ್ಕದಾದರೂ ಅಲ್ಲಿಯ ಗೌಡರು ದೊಡ್ಡವರಾಗಿದ್ದರು. ಶ್ರೀಮಂತಿಕೆಗಿಂತ ಅವರಲ್ಲಿ ತಿಳಿವಳಿಕೆ ಹೆಚ್ಚಾಗಿತ್ತು. ವಯಸ್ಸಿನಿಂದಲೂ ಹಿರಿಯರಾಗಿದ್ದರು. ಮಕ್ಕಳೆಲ್ಲ ಕೈಗೆ ಬಂದಿದ್ದರು. ಹಿರೇಮಗ ಗೌಡಿಕೆಯನ್ನೂ, ಚಿಕ್ಕವನು ಹೊಲಮನೆಗಳ ಮೇಲ್ವಿಚಾರಣೆಯನ್ನೂ ನಿಸ್ತರಿಸುತ್ತಿದ್ದನು. ದೊಡ್ಡ ಗೌಡರು ವೇದಾಂತಗ್ರಂಥಗಳನ್ನು ಓದುವುದರಲ್ಲಿ ಆಸಕ್ತಿಯುಳ್ಳವರು. ಬಂದವರೊಡನೆ ಚರ್ಚೆ ಮಾಡುವುದರಲ್ಲಿ ಅವರಿಗೆ ವೇಳೆಯೇ ಸಾಲುತ್ತಿರಲಿಲ್ಲ.

ಚಳಿಗಾಲದ ಮುಂಜಾವಿನಲ್ಲಿ ಮನೆಯ ಮುಂದಿನ ಕಟ್ಟೆಯ ಮೇಲೆ ಬಿಸಿಲು ಕಾಯಿಸಿಕೊಳ್ಳುತ್ತ ಕುಳಿತರೆಂದರೆ, ಅವರ ಮಗ್ಗುಲಲ್ಲಿ ಒಂದು ನಾಯಿ ಯಾವಾಗಲೂ ಪವಡಿಸಿರುತ್ತಿತ್ತು. ಗೌಡರ ಸಲುವಾಗಿ ಅದೆಷ್ಟೋ ಜನರು ಅಲ್ಲಿಗೆ ಬಂದಾಗ ಆ ನಾಯಿ ಜಗ್ಗನೆದ್ದು ಕವ್ವನೇ ಬೊಗಳಿ ಹೆದರಿಸುವದು. ಒಮ್ಮೊಮ್ಮೆ ಚಂಗನೆ ನೆಗೆದು ಬಂದವರ ಮೈಮೇಲೆ ಏರಿಹೋಗುವದು. ಆಗ ಗೌಡರು ಬೆದರಿಸಿ ಅದನ್ನು ಹತ್ತಿರ ಕರೆದು ಕುಳ್ಳಿರಿಸಿಕೊಳ್ಳುವರು. ಅದರಿಂದ ಸಂದರ್ಶನಾರ್ಥಿಗಳಿಗೆ ನಿರ್ಬಾಧವಾಗುವದು.

ಅದೆಷ್ಟೋ ಜನರು ನಾಯಿಗಂಜಿಯೇ ಗೌಡರ ಬಳಿಗೆ ಹೋಗುವುದಕ್ಕೆ ಹಿಂಜರಿಯುತ್ತಿದ್ದರು. ನಾಯಿಯ ಆ ಸ್ವಭಾವಕ್ಕಾಗಿ ಗೌಡರಿಗೂ ಬೇಸರವೆನಿಸಿತ್ತು. ಅದರ ಸ್ವಭಾವ ಪರಿವರ್ತನೆಗೊಳಿಸುವದಕ್ಕೆ ಯಾವ ಹಂಚಿಕೆಮಾಡಬೇಕು – ಎಂದು ಯೋಚನೆಗೀಡಾದರು. ಒಂದು ಯುಕ್ತಿಯೂ ಹೊಳೆಯಿತವರಿಗೆ. ಸಿದ್ಧತೆಮಾಡಿ ಕೊಂಡರು. ನಾಯಿಯನ್ನು ಹತ್ತಿರಕ್ಕೆ ಕರೆದು ಕುಳ್ಳಿರಿಸಿಕೊಂಡರು. ಸೂಜಿಯಿಂದ ಕೇರಿನೆಣ್ಣೆ ತೆಗೆದು ನಾಯಿಯ ಪೃಷ್ಠದ್ವಾರದ ಮೇಲೆ ಅಧಿಕ ಚಿಹ್ನ ಬರೆದರು. ಅದು ಒಂದೆರಡು ದಿನಗಳಲ್ಲಿ ಗುದುಗುದಿಸಹತ್ತಿದ್ದರಿಂದ ನಾಯಿ ಎದ್ದುನಿಂತು ಮುಕಳಿಯನ್ನು ನೆಲಕ್ಕೆ ತಿಕ್ಕಿತು. ಅದರಿಂದ ಗುದದ್ವಾರವು ಕೆತ್ತಿಹೋಗಿ ಹುಣ್ಣೇ ಬಿದ್ದಿತು. ಕೀವು ಆಯಿತು. ಆದರೆ ಬಂದ ಹೊಸಬರನ್ನು ಕಂಡು, ವವ್ವ್ ಎಂದು ಬೊಗಳಿ ಅವರ ಮೈಮೇಲೆ ಹೋಗುವುದನ್ನು ಬಿಟ್ಟಿರಲಿಲ್ಲ. ಆದರೆ ವವ್ವ್ ಎಂದು ಬೊಗಳಬೇಕಾದರೆ ಗುದದ್ವಾರವನ್ನು ಬಿಗಿಹಿಡಿಯಬೇಕಾಗುತ್ತದೆ. ಹಾಗೆ ಬಿಗಿಹಿಡಿಯುವಾಗ, ಹುಣ್ಣು ಬಿದ್ದಿದ್ದರಿಂದ ಅಸಹ್ಯವಾದ
ನೋವುಂಟಾಗುವದು. ಅದೆಷ್ಟು ರಭಸದಿಂದ ಚಂಗನೆ ನೆಗೆದು ಬಂದವರ ಮೈಮೇಲೆ ಹೋಗುವದೋ, ಅಷ್ಟೇ ವೇದನೆಯಿಂದ “ಅಂಽಽಽ ಎಂದು ನರಳಿ ಹಿಂದಿರುಗಿ ಬರತೊಡಗಿತು.

ಗುದದ್ವಾರದಲ್ಲಿ ಬಿದ್ದ ಹುಣ್ಣಿನ ನೋವಿಗಂಜಿ ಅದು, ರಭಸದಿಂದ ಬೊಗಳಿ ಬಂದವರ ಮೇಲೆ ಹೋಗುವುದನ್ನು ಒಮ್ಮೆಲೇ ಕಡಿಮೆ ಮಾಡಿತು. ಅಲ್ಲಿಯವರಿಗೆ ಆ ಹುಣ್ಣು ಮಾಯಿಸುವ ಉಪಾಯವನ್ನೇ ಮಾಡಲಿಲ್ಲ ಗೌಡರು.

“ಕಳೆನೋಡಿ ಕೇರು ಹಾಕಿದರೆ ಹಾದಿಗೆ ಬಾರದವರಾರು” ಎಂದು ಗೌಡರು ಮೇಲಿಂದ ಮೇಲೆ ಮಾತಿನಲ್ಲಿ ನುಡಿಯತೊಡಗಿದರು. ಕೇಳಿದವರಿಗೆ ಅದು ಸತ್ಯವೂ ಅನಿಸಿತು.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...