ಸೃಷ್ಠಿಗೆ ಗಡಿಗಳಿವೆಯೇ ?

ಚಿತ್ರ: ಅಪೂರ್ವ ಅಪರಿಮಿತ
ಚಿತ್ರ: ಅಪೂರ್ವ ಅಪರಿಮಿತ

ಪ್ರಿಯ ಸಖಿ,
ಆಗಿನ್ನೂ ಬೆಳಗಿನ ಚುಮಚುಮು ಬೆಳಕು ಪಸರಿಸುತ್ತಿದೆ. ಕೊರೆವ ಚಳಿಯಲ್ಲಿ ರಾತ್ರಿಯಿಡೀ ಆ ಹಿಮಪರ್ವತದ ಮೇಲೆ ಗಡಿ ಕಾಯುತ್ತಾ ಇವನು ಬೆಂಡಾಗಿದ್ದಾನೆ. ಇನ್ನೇನು ಕೆಲವೇ ನಿಮಿಷಗಳಲ್ಲಿ ಇವನ  ಪಾಳಿ ಮುಗಿಯಲಿದೆ. ಆಮೇಲೆ ಚೆನ್ನಾಗಿ ನಿದ್ದೆ ಮಾಡಬಹುದು ಎಂದುಕೊಂಡೊಡನೆ ಆಕಳಿಕೆ ಬಂತು. ಒಂದು ಕ್ಷಣ ಕಣ್ಣನ್ನು ಮೆಲ್ಲಗೆ ಮುಚ್ಚಿದ….ಅಷ್ಟರಲ್ಲೇ ಹತ್ತಿರದಲ್ಲೇ ಎಲ್ಲೋ ಶಬ್ದ. ತಕ್ಷಣ ಇವನು ಬೆಚ್ಚಿ ಕಣ್ತೆರೆದ. ಕೈಲಿದ್ದ ರೈಫಲ್ ತನ್ನಂತೆ ತಾನೇ ಸಿದ್ಧವಾಯ್ತು! ಎಚ್ಚರದ ಕಣ್ಣಿನಿಂದ ಸುತ್ತಮುತ್ತ ಗಮನಿಸಲಾರಂಭಿಸಿದ. ಮೆಲ್ಲಗೆ ತೆವಳುತ್ತಲೇ ಸ್ವಲ್ಪ ದೂರ ಹೋಗಿ ಬಂದ. ಮತ್ತೆ ಪಟ ಪಟ ಶಬ್ಧ, ಈಗ ಮತ್ತೂ ಹತ್ತಿರದಿಂದ ಕೇಳಿದಾಗ ಮತ್ತಷ್ಟು ಕಿವಿನಿಮಿರಿಸಿ ಕುಳಿತು ರೈಫಲನ್ನು ಶಬ್ದದೆಡೆಗೆ ಹೊರಳಿಸಿ ಗುರಿಯಿಟ್ಟು ಕಾದ.

ಕೆಲಹೊತ್ತು ನಿಶ್ಶಬ್ದ. ಇದ್ದಕ್ಕಿದ್ದಂತೆ ಶತ್ರು ದೇಶದ ಭೂಮಿಯೆಡೆಯಿಂದ ಭರ್ರನೆ ಹಾರಿ ಬಂದ ಹಕ್ಕಿ ನಮ್ಮ ದೇಶದ ಮೇಲೆ ಕುಳಿತು ಪಟಪಟನೆ ರೆಕ್ಕೆ ಬಡಿಯಿತು! ಇವನು ಕ್ಷಣಕಾಲ ಸ್ತಂಭೀಭೂತನಾಗಿ ಕುಳಿತು ಬಿಟ್ಟ ಆ ಹಕ್ಕಿ ಶತ್ರು ದೇಶದ್ದೋ ? ತನ್ನ ದೇಶದ್ದೋ ? ಅದನ್ನು ಕೊಲ್ಲಲೋ ? ಬೇಡವೋ ? ಯೋಚಿಸಲಾರಂಭಿಸಿದ.

ತನ್ನ ಯೋಚನೆಗೆ ಅವನಿಗೆ ನಗು ಬಂತು. ಪಕ್ಕದಲ್ಲೇ ಎಲ್ಲೋ ಅಸ್ಪಷ್ಟವಾಗಿ ನದಿ ಹರಿಯುವ ಶಬ್ಧ ತನ್ನ ದೇಶದ ನದಿ. ಶತ್ರು ದೇಶಕ್ಕೆ ಹರಿಯುವ ಶಬ್ಧ. ತನ್ನ ದೇಶದ ನದಿ ಶತ್ರು ದೇಶಕ್ಕೆ ಹರಿದು ಹೋಗುತ್ತಿದೆ. ಶತ್ರು ದೇಶದಿಂದ ಬೀಸಿದ ಗಾಳಿ ತನ್ನ ದೇಶವನ್ನು ಆವರಿಸುತ್ತಿದೆ. ಇತ್ತಲಿನ ಪರ್ವತದ ಮುಖ ತನ್ನ ದೇಶದ್ದು. ಅತ್ತಲಿನ ಪರ್ವತದ ಮುಖ ಶತ್ರು ದೇಶದ್ದು. ಪರ್ವತ ಒಂದೇ ಆದರೂ ಹೆಸರು ಮಾತ್ರ ಎರಡು.

ಶತ್ರು ದೇಶದ ಈ ನದಿ, ಗಾಳಿ, ಪರ್ವತಕ್ಕೆ ಈಗಷ್ಟೆ ಶತ್ರುದೇಶದಿಂದ ಹಾರಿ ಬಂದ ಆ ಹಕ್ಕಿಗೆ ಹೇಗೆ ಗುಂಡಿಕ್ಕಿ ಕೊಲ್ಲಲಿ ? ಸೃಷ್ಠಿ ಎಂದಾದರೂ ಗಡಿಗಳನ್ನು ಹಾಕಿಕೊಂಡಿದೆಯೇ ? ಮಾನವನಿಗಷ್ಟೆ ಈ ಗಡಿ ! ನದಿ, ಗಾಳಿ, ಮಳೆ, ಭೂಮಿ, ಪ್ರಾಣಿ ಪಕ್ಷಿಗಳೂ ಮಾನವನಂತೆಯೇ ಗಡಿಗಳನ್ನು ಹಾಕಿಕೊಂಡು ತಮ್ಮ ತಮ್ಮಲ್ಲೇ ವಿರೋಧಿ ಬಣಗಳನ್ನು ಸೃಷ್ಟಿಸಿಕೊಂಡು ಬಿಟ್ಟರೆ… ಆಗೇನು ಮಾಡುವುದು ? ಈ ಆಲೋಚನೆ ಬಂದೊಡನೆ ಆ ಕೊರೆವ ಚಳಿಯಲ್ಲೂ ಅವನು  ಬೆವೆತು ಹೋದ. ಮನದಲ್ಲೇ ದೇವರಿಗೆ ಕೃತಜ್ಞತೆ ಸಲ್ಲಿಸುತ್ತಾ ‘ಹೇ ದೇವ, ಮಾನವನ ಸ್ವಾರ್ಥದಿಂದಷ್ಟೇ ಗಡಿಗಳ ಸೃಷ್ಟಿಯಾಯ್ತು. ಸೃಷ್ಟಿಗೂ ಶತ್ರು – ಮಿತ್ರನೆಂಬ ಗಡಿಯನ್ನು ನೀ ಎಳಿಯಲಿಲ್ಲವಲ್ಲ’ ಎನ್ನುತ್ತಾ ನಿಟ್ಟುಸಿರಿಟ್ಟ ಏಕೋ ಕೈಯಲ್ಲಿದ್ದ ರೈಫಲ್ ಎತ್ತಲಾಗದಷ್ಟು ಭಾರವಾಗುತ್ತಿದೆ ಎನಿಸಿ ಭೂಮಿಗೆ ಕುಸಿದು ಕುಳಿತ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮ್ಯಾಚಿಂಗ್
Next post ಪರೆಗಳು

ಸಣ್ಣ ಕತೆ

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…

  • ಕರಿ ನಾಗರಗಳು

    ಚಿತ್ರ: ಆಂಬರ್‍ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್‌ ನೀರು ಹರಿಯುತ್ತಿದ್ದ… Read more…

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…

cheap jordans|wholesale air max|wholesale jordans|wholesale jewelry|wholesale jerseys