Home / ಲೇಖನ / ಇತರೆ / ಸೃಷ್ಠಿಗೆ ಗಡಿಗಳಿವೆಯೇ ?

ಸೃಷ್ಠಿಗೆ ಗಡಿಗಳಿವೆಯೇ ?

ಚಿತ್ರ: ಅಪೂರ್ವ ಅಪರಿಮಿತ
ಚಿತ್ರ: ಅಪೂರ್ವ ಅಪರಿಮಿತ

ಪ್ರಿಯ ಸಖಿ,
ಆಗಿನ್ನೂ ಬೆಳಗಿನ ಚುಮಚುಮು ಬೆಳಕು ಪಸರಿಸುತ್ತಿದೆ. ಕೊರೆವ ಚಳಿಯಲ್ಲಿ ರಾತ್ರಿಯಿಡೀ ಆ ಹಿಮಪರ್ವತದ ಮೇಲೆ ಗಡಿ ಕಾಯುತ್ತಾ ಇವನು ಬೆಂಡಾಗಿದ್ದಾನೆ. ಇನ್ನೇನು ಕೆಲವೇ ನಿಮಿಷಗಳಲ್ಲಿ ಇವನ  ಪಾಳಿ ಮುಗಿಯಲಿದೆ. ಆಮೇಲೆ ಚೆನ್ನಾಗಿ ನಿದ್ದೆ ಮಾಡಬಹುದು ಎಂದುಕೊಂಡೊಡನೆ ಆಕಳಿಕೆ ಬಂತು. ಒಂದು ಕ್ಷಣ ಕಣ್ಣನ್ನು ಮೆಲ್ಲಗೆ ಮುಚ್ಚಿದ….ಅಷ್ಟರಲ್ಲೇ ಹತ್ತಿರದಲ್ಲೇ ಎಲ್ಲೋ ಶಬ್ದ. ತಕ್ಷಣ ಇವನು ಬೆಚ್ಚಿ ಕಣ್ತೆರೆದ. ಕೈಲಿದ್ದ ರೈಫಲ್ ತನ್ನಂತೆ ತಾನೇ ಸಿದ್ಧವಾಯ್ತು! ಎಚ್ಚರದ ಕಣ್ಣಿನಿಂದ ಸುತ್ತಮುತ್ತ ಗಮನಿಸಲಾರಂಭಿಸಿದ. ಮೆಲ್ಲಗೆ ತೆವಳುತ್ತಲೇ ಸ್ವಲ್ಪ ದೂರ ಹೋಗಿ ಬಂದ. ಮತ್ತೆ ಪಟ ಪಟ ಶಬ್ಧ, ಈಗ ಮತ್ತೂ ಹತ್ತಿರದಿಂದ ಕೇಳಿದಾಗ ಮತ್ತಷ್ಟು ಕಿವಿನಿಮಿರಿಸಿ ಕುಳಿತು ರೈಫಲನ್ನು ಶಬ್ದದೆಡೆಗೆ ಹೊರಳಿಸಿ ಗುರಿಯಿಟ್ಟು ಕಾದ.

ಕೆಲಹೊತ್ತು ನಿಶ್ಶಬ್ದ. ಇದ್ದಕ್ಕಿದ್ದಂತೆ ಶತ್ರು ದೇಶದ ಭೂಮಿಯೆಡೆಯಿಂದ ಭರ್ರನೆ ಹಾರಿ ಬಂದ ಹಕ್ಕಿ ನಮ್ಮ ದೇಶದ ಮೇಲೆ ಕುಳಿತು ಪಟಪಟನೆ ರೆಕ್ಕೆ ಬಡಿಯಿತು! ಇವನು ಕ್ಷಣಕಾಲ ಸ್ತಂಭೀಭೂತನಾಗಿ ಕುಳಿತು ಬಿಟ್ಟ ಆ ಹಕ್ಕಿ ಶತ್ರು ದೇಶದ್ದೋ ? ತನ್ನ ದೇಶದ್ದೋ ? ಅದನ್ನು ಕೊಲ್ಲಲೋ ? ಬೇಡವೋ ? ಯೋಚಿಸಲಾರಂಭಿಸಿದ.

ತನ್ನ ಯೋಚನೆಗೆ ಅವನಿಗೆ ನಗು ಬಂತು. ಪಕ್ಕದಲ್ಲೇ ಎಲ್ಲೋ ಅಸ್ಪಷ್ಟವಾಗಿ ನದಿ ಹರಿಯುವ ಶಬ್ಧ ತನ್ನ ದೇಶದ ನದಿ. ಶತ್ರು ದೇಶಕ್ಕೆ ಹರಿಯುವ ಶಬ್ಧ. ತನ್ನ ದೇಶದ ನದಿ ಶತ್ರು ದೇಶಕ್ಕೆ ಹರಿದು ಹೋಗುತ್ತಿದೆ. ಶತ್ರು ದೇಶದಿಂದ ಬೀಸಿದ ಗಾಳಿ ತನ್ನ ದೇಶವನ್ನು ಆವರಿಸುತ್ತಿದೆ. ಇತ್ತಲಿನ ಪರ್ವತದ ಮುಖ ತನ್ನ ದೇಶದ್ದು. ಅತ್ತಲಿನ ಪರ್ವತದ ಮುಖ ಶತ್ರು ದೇಶದ್ದು. ಪರ್ವತ ಒಂದೇ ಆದರೂ ಹೆಸರು ಮಾತ್ರ ಎರಡು.

ಶತ್ರು ದೇಶದ ಈ ನದಿ, ಗಾಳಿ, ಪರ್ವತಕ್ಕೆ ಈಗಷ್ಟೆ ಶತ್ರುದೇಶದಿಂದ ಹಾರಿ ಬಂದ ಆ ಹಕ್ಕಿಗೆ ಹೇಗೆ ಗುಂಡಿಕ್ಕಿ ಕೊಲ್ಲಲಿ ? ಸೃಷ್ಠಿ ಎಂದಾದರೂ ಗಡಿಗಳನ್ನು ಹಾಕಿಕೊಂಡಿದೆಯೇ ? ಮಾನವನಿಗಷ್ಟೆ ಈ ಗಡಿ ! ನದಿ, ಗಾಳಿ, ಮಳೆ, ಭೂಮಿ, ಪ್ರಾಣಿ ಪಕ್ಷಿಗಳೂ ಮಾನವನಂತೆಯೇ ಗಡಿಗಳನ್ನು ಹಾಕಿಕೊಂಡು ತಮ್ಮ ತಮ್ಮಲ್ಲೇ ವಿರೋಧಿ ಬಣಗಳನ್ನು ಸೃಷ್ಟಿಸಿಕೊಂಡು ಬಿಟ್ಟರೆ… ಆಗೇನು ಮಾಡುವುದು ? ಈ ಆಲೋಚನೆ ಬಂದೊಡನೆ ಆ ಕೊರೆವ ಚಳಿಯಲ್ಲೂ ಅವನು  ಬೆವೆತು ಹೋದ. ಮನದಲ್ಲೇ ದೇವರಿಗೆ ಕೃತಜ್ಞತೆ ಸಲ್ಲಿಸುತ್ತಾ ‘ಹೇ ದೇವ, ಮಾನವನ ಸ್ವಾರ್ಥದಿಂದಷ್ಟೇ ಗಡಿಗಳ ಸೃಷ್ಟಿಯಾಯ್ತು. ಸೃಷ್ಟಿಗೂ ಶತ್ರು – ಮಿತ್ರನೆಂಬ ಗಡಿಯನ್ನು ನೀ ಎಳಿಯಲಿಲ್ಲವಲ್ಲ’ ಎನ್ನುತ್ತಾ ನಿಟ್ಟುಸಿರಿಟ್ಟ ಏಕೋ ಕೈಯಲ್ಲಿದ್ದ ರೈಫಲ್ ಎತ್ತಲಾಗದಷ್ಟು ಭಾರವಾಗುತ್ತಿದೆ ಎನಿಸಿ ಭೂಮಿಗೆ ಕುಸಿದು ಕುಳಿತ!
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...