‘ಶ್ರೀ’ ಅವರಿಗೆ

ಪ್ರಸನ್ನ ಶರದಿಂದುಮಂಡಲದಂತೆ ‘ಶ್ರೀ’ ಗುರುವೆ
ನೀವೆನ್ನ ಹೃದಯಪೀಠವನೇರಿದಂತೆನಗೆ
ನಿಮ್ಮ ಸಂಸ್ಮರಣೆ. ನಿಮ್ಮಿಂದ ಪಂಪನ ಜೊತೆಗೆ
ಬಂದರಾ ಪೇಕ್ಸ್‌ಪಿಯರ್ ಸಾಫೊಕ್ಲೀಸ್ ಭಾಸರೆ;
ದೈವಹತ ಧನ್ಯಾತ್ಮನಾದನಶ್ವತ್ಥಾಮನ್.
ಇತ್ತ ‘ಇಂಗ್ಲಿಷ್ ಗೀತೆ’ ಹೊಸತೊಂದು ಲೋಕಮನ್
ಕನ್ನಡದ ಕಣ್ಗೆ ತೆರೆದಿತ್ತು ಸಂಪ್ರೀತಿಯಲಿ.
ನಿಮ್ಮ ಸಿಂಹ ಧ್ವನಿಯೆ ಪಂಜಾಯ್ತು ಪಯಣದಲಿ.

ಈಗ, ನೀವಂದು ಮುತ್ತಿಟ್ಟು ಮೀರಿದ ನೆಲವೆ
ನಿಮ್ಮ ನೆನೆವಂತೆ ನನ್ನೆಣಿಕೆ. ಅಂತಿರಬಹುದೆ?
ಜ್ವಲಿಸುವ ವಸಂತವಿದೆ, ತಿಳಿನೀಲಿ ಗಗನವಿದೆ
ಅರೆ ಯಾವುದಿಲ್ಲಿ? ಅರೆ ನಿಮ್ಮ ದನಿಯೊಂದೆ!
ನಿಮ್ಮ ಸಿರಿ ದನಿಯೊಂದೆ, ಅರೆ ನಿಮ್ಮ ದನಿಯೊಂದೆ.
ಅರಕೆಯನೆ ಸರ ಕಟ್ಟಿ ನಿಮ್ಮಡಿಗಳಿಗೆ ತಂದೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕುಣಿತದ ಧ್ವನಿತ
Next post ಇಲೀ ಮರೀ ಇಲೀ ಮರೀ

ಸಣ್ಣ ಕತೆ

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…