‘ಶ್ರೀ’ ಅವರಿಗೆ

ಪ್ರಸನ್ನ ಶರದಿಂದುಮಂಡಲದಂತೆ ‘ಶ್ರೀ’ ಗುರುವೆ
ನೀವೆನ್ನ ಹೃದಯಪೀಠವನೇರಿದಂತೆನಗೆ
ನಿಮ್ಮ ಸಂಸ್ಮರಣೆ. ನಿಮ್ಮಿಂದ ಪಂಪನ ಜೊತೆಗೆ
ಬಂದರಾ ಪೇಕ್ಸ್‌ಪಿಯರ್ ಸಾಫೊಕ್ಲೀಸ್ ಭಾಸರೆ;
ದೈವಹತ ಧನ್ಯಾತ್ಮನಾದನಶ್ವತ್ಥಾಮನ್.
ಇತ್ತ ‘ಇಂಗ್ಲಿಷ್ ಗೀತೆ’ ಹೊಸತೊಂದು ಲೋಕಮನ್
ಕನ್ನಡದ ಕಣ್ಗೆ ತೆರೆದಿತ್ತು ಸಂಪ್ರೀತಿಯಲಿ.
ನಿಮ್ಮ ಸಿಂಹ ಧ್ವನಿಯೆ ಪಂಜಾಯ್ತು ಪಯಣದಲಿ.

ಈಗ, ನೀವಂದು ಮುತ್ತಿಟ್ಟು ಮೀರಿದ ನೆಲವೆ
ನಿಮ್ಮ ನೆನೆವಂತೆ ನನ್ನೆಣಿಕೆ. ಅಂತಿರಬಹುದೆ?
ಜ್ವಲಿಸುವ ವಸಂತವಿದೆ, ತಿಳಿನೀಲಿ ಗಗನವಿದೆ
ಅರೆ ಯಾವುದಿಲ್ಲಿ? ಅರೆ ನಿಮ್ಮ ದನಿಯೊಂದೆ!
ನಿಮ್ಮ ಸಿರಿ ದನಿಯೊಂದೆ, ಅರೆ ನಿಮ್ಮ ದನಿಯೊಂದೆ.
ಅರಕೆಯನೆ ಸರ ಕಟ್ಟಿ ನಿಮ್ಮಡಿಗಳಿಗೆ ತಂದೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕುಣಿತದ ಧ್ವನಿತ
Next post ಇಲೀ ಮರೀ ಇಲೀ ಮರೀ

ಸಣ್ಣ ಕತೆ

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…

  • ದೇವರೇ ಪಾರುಮಾಡಿದಿ ಕಂಡಿಯಾ

    "Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

cheap jordans|wholesale air max|wholesale jordans|wholesale jewelry|wholesale jerseys