Home / ಲೇಖನ / ಇತರೆ / ಹೆಸರಿಸಲಾರದ ಸಂಬಂಧಗಳು !

ಹೆಸರಿಸಲಾರದ ಸಂಬಂಧಗಳು !

ಚಿತ್ರ: ಅಪೂರ್ವ ಅಪರಿಮಿತ
ಚಿತ್ರ: ಅಪೂರ್ವ ಅಪರಿಮಿತ

ಪ್ರಿಯ ಸಖಿ,

ನಮಗೆ ಎಲ್ಲ ಸಂಬಧಗಳಿಗೂ ಹೆಸರಿಟ್ಟು ಕರೆಯುವ ಹುಚ್ಚು. ಅಪ್ಪ, ಅಮ್ಮ, ಅಣ್ಣ, ಅಕ್ಕ, ಚಿಕ್ಕಮ್ಮ, ದೊಡ್ಡಪ್ಪ, ಅಂಕಲ್, ಆಂಟಿ, ಗಂಡ, ಹೆಂಡತಿ, ಫ್ರೆಂಡ್…. ಇತ್ಯಾದಿ ಹೆಸರುಗಳನ್ನಿಟ್ಟು ಸಂಬಂಧಗಳ ವ್ಯಾಪ್ತಿ ಮಿತಿಗೊಳಿಸಿಬಿಡುತ್ತೇವೆ. ಆದರೆ ಈ ಹೆಸರಿಟ್ಟ ಸಂಬಂಧಗಳು ಕೆಲವೊಮ್ಮೆ ಹೆಸರಿನ ಮಿತಿಯಷ್ಟೇ ಪರಿಮಿತಿಯನ್ನು ಹೊಂದಿರುವುದಿಲ್ಲ. ಇನ್ನೂ ವಿಸ್ತಾರವಾಗಿ ಬೆಳೆದಿರುತ್ತದೆ. ಹಾಗೇ ಇನ್ನೂ ಕೆಲವೊಮ್ಮೆ ಆ ಸಂಬಂಧಗಳು ಆಳಕ್ಕಿಳಿಯದೆ ಬರಿಯ ‘ನಾಮಕಾವಾಸ್ತೆ’ ಸಂಬಂಧಗಳಾಗಿ ಹೆಸರಿನ ಮಿತಿಯಲ್ಲೇ ನಿಂತುಬಿಡುತ್ತವೆ.

ಆದರೆ ಇಂತಹಾ ಹೆಸರಿರುವ ಸಂಬಂಧಗಳನ್ನೂ ಮೀರಿ ಹೆಸರೇ ಇಲ್ಲದ ಅನೇಕ ಸಂಬಂಧಗಳು ಕೆಲ ಗಂಟೆಗಳು, ಕೆಲ ದಿನಗಳು ವರ್ಷಗಳು ಕೆಲವೊಮ್ಮೆ ಜೀವನ ಪರ್ಯಂತ ಕಾಡುತ್ತವೆ. ಬದುಕು ನಡೆಸುತ್ತವೆ, ಹೆಸರಿರುವ ಎಷ್ಟೆಷ್ಟೋ ಸಂಬಂಧಗಳಿಗಿಂತಾ ಆತ್ಮೀಯವಾಗಿ ಹೃದಯ ತಟ್ಟುತ್ತವೆ. ಮುಟ್ಟುತ್ತವೆ.  ಅದೇ ಸೋಜಿಗದ ವಿಷಯ. ಬಸ್ಸಿನಲ್ಲಿ ಕೆಲವೇ ಗಂಟೆ ಸಹಪ್ರಯಾಣಿಕನಾಗಿದ್ದ ವ್ಯಕ್ತಿಯೊಂದಿಗಿನ ಸಂಬಂಧ, ಕಳೆದುಹೋದ ಅತ್ಯಮೂಲ್ಯ ವಸ್ತುವನ್ನು ಜೋಪಾನವಾಗಿ ಹಿಂದಿರುಗಿಸಿದ ಪ್ರಾಮಾಣಿಕ ವ್ಯಕ್ತಿಯೊಂದಿಗಿನ ಸಂಬಂಧ, ಬದುಕಿನಲ್ಲಿ ಇನ್ನುಳಿದಿರುವುದು ಸಾವು ಮಾತ್ರ ಎಂದು ನಿರ್ಧರಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದವನಿಗೆ ಇನ್ನುಳಿದ ಬದುಕು ಪೂರ್ತಿ ಆಶಾವಾದಿಯಾಗಿ ಬದುಕಲು ಸ್ಪೂರ್ತಿ ನೀಡಿದ ಅಪರಿಚಿತ ವ್ಯಕ್ತಿಯೊಂದಿಗಿನ ಸಂಬಂಧ, ಮಧ್ಯದಲ್ಲೆಲ್ಲೋ ಕೆಲವೇ ನಿಮಿಷಗಳು ಪ್ರತ್ಯಕ್ಷವಾಗಿ ಒಂದು ಪೋಷಕ ಪಾತ್ರ ದಿನಗಟ್ಟಲೇ ಕಾಡುವಾಗಿನ ಸಂಬಂಧ, ಜೀವನವಿಡೀ  ಕಷ್ಟಗಳನ್ನೆದುರಿಸಿಯೇ ಬದುಕುವ ದುರಂತ ಕಥೆಯೊಂದರ ಪಾತ್ರದೊಳಗಿನ ಸಂಬಂಧ, ಬದುಕಿನಲ್ಲಿ ಸೋತು ಕುಸಿವ ಗಳಿಗೆಯಲ್ಲೆಲ್ಲಾ ‘ಏಳು ಎದ್ದೇಳು ಗುರಿ ಸೇರುವವರೆಗೂ ನಿಲ್ಲಬೇಡ’ ಎಂದು ಸಂತೈಸುವ ವಿವೇಕಾನಂದರೊಂದಿಗಿನ ಮಾನಸಿಕ ಸಂಬಂಧ….. ಇಂತಹ ಹತ್ತು ಹಲವು ಸಂಬಂಧಗಳಿಗೆ ಯಾವ ಹೆಸರು?

ಕೆಲವೊಂದು ಸಂಬಂಧಗಳಿಗೆ ಹೆಸರಿರುವುದಿಲ್ಲ. ಮತ್ತೆ ಕೆಲವಕ್ಕೆ ಹೆಸರೇ ಬೇಕಿಲ್ಲ. ಆದರೂ ನಮ್ಮ ಸಮಾಜ ಹೆಸರಿರುವ ಸಂಬಂಧಗಳನ್ನು ಪುರಸ್ಕರಿಸುವಂತೆ ಹೆಸರಿಲ್ಲದ ಸಂಬಂಧಗಳನ್ನು ಪುರಸ್ಕರಿಸುವುದಿಲ್ಲ. ಸಂಬಂಧಗಳಿಗೆಲ್ಲಾ ಬಲವಂತವಾಗಿಯಾದರೂ ಯಾವುದೇ ಒಂದು ಹೆಸರಿಟ್ಟರೆ  ನಂತರ ಜೀವಮಾನವಿಡೀ ಆ ಹೆಸರಿಟ್ಟ ಸಂಬಂಧಗಳ ಚೌಕಟ್ಟಿನೊಳಗೇ ಸಂಬಂಧ ಕಲ್ಪಿಸಿಕೊಳ್ಳುತ್ತಾ ಹೋಗುವ ಸರ್ಕಸ್ಸು!

ಸಖಿ, ಒಮ್ಮೆಯೂ ನಾವು ಕಣ್ಣಾರೆ ಕಂಡಿರದ ವ್ಯಕ್ತಿ ಕೂಡ ಎಷ್ಟೋ ಬಾರಿ ನಮ್ಮ ಆತ್ಮೀಯನಾಗಿ, ಹೃದಯ ಭಾಂಧವನಾಗಿ ಮನಸ್ಸಿನಾಳದಲ್ಲಿ  ಸೇರಿಹೋಗುವುದಿಲ್ಲವೇ? ಹೆಸರಿಲ್ಲಿದ ಎಷ್ಟೋ ಸಂಬಂಧಗಳು, ನಾವು ಹೆಸರಿಟ್ಟು ಚೌಕಟ್ಟು ನಿರ್ಮಿಸಿದ ಸಂಬಂಧಗಳಿಗಿಂತಾ ಹೆಚ್ಚು ಅಮೂಲ್ಯವಾಗಿರುತ್ತವೆ ಕಾಡುತ್ತವೆ, ಬದುಕು ಮುನ್ನಡೆಸುತ್ತವೆ. ವೃಥಾ ಅವುಗಳಿಗೆ ಹೆಸರಿಡುವ ತೆವಲು ನಮಗೇಕೆ “?
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...