Home / ಲೇಖನ / ಇತರೆ / ಹೆಸರಿಸಲಾರದ ಸಂಬಂಧಗಳು !

ಹೆಸರಿಸಲಾರದ ಸಂಬಂಧಗಳು !

ಚಿತ್ರ: ಅಪೂರ್ವ ಅಪರಿಮಿತ
ಚಿತ್ರ: ಅಪೂರ್ವ ಅಪರಿಮಿತ

ಪ್ರಿಯ ಸಖಿ,

ನಮಗೆ ಎಲ್ಲ ಸಂಬಧಗಳಿಗೂ ಹೆಸರಿಟ್ಟು ಕರೆಯುವ ಹುಚ್ಚು. ಅಪ್ಪ, ಅಮ್ಮ, ಅಣ್ಣ, ಅಕ್ಕ, ಚಿಕ್ಕಮ್ಮ, ದೊಡ್ಡಪ್ಪ, ಅಂಕಲ್, ಆಂಟಿ, ಗಂಡ, ಹೆಂಡತಿ, ಫ್ರೆಂಡ್…. ಇತ್ಯಾದಿ ಹೆಸರುಗಳನ್ನಿಟ್ಟು ಸಂಬಂಧಗಳ ವ್ಯಾಪ್ತಿ ಮಿತಿಗೊಳಿಸಿಬಿಡುತ್ತೇವೆ. ಆದರೆ ಈ ಹೆಸರಿಟ್ಟ ಸಂಬಂಧಗಳು ಕೆಲವೊಮ್ಮೆ ಹೆಸರಿನ ಮಿತಿಯಷ್ಟೇ ಪರಿಮಿತಿಯನ್ನು ಹೊಂದಿರುವುದಿಲ್ಲ. ಇನ್ನೂ ವಿಸ್ತಾರವಾಗಿ ಬೆಳೆದಿರುತ್ತದೆ. ಹಾಗೇ ಇನ್ನೂ ಕೆಲವೊಮ್ಮೆ ಆ ಸಂಬಂಧಗಳು ಆಳಕ್ಕಿಳಿಯದೆ ಬರಿಯ ‘ನಾಮಕಾವಾಸ್ತೆ’ ಸಂಬಂಧಗಳಾಗಿ ಹೆಸರಿನ ಮಿತಿಯಲ್ಲೇ ನಿಂತುಬಿಡುತ್ತವೆ.

ಆದರೆ ಇಂತಹಾ ಹೆಸರಿರುವ ಸಂಬಂಧಗಳನ್ನೂ ಮೀರಿ ಹೆಸರೇ ಇಲ್ಲದ ಅನೇಕ ಸಂಬಂಧಗಳು ಕೆಲ ಗಂಟೆಗಳು, ಕೆಲ ದಿನಗಳು ವರ್ಷಗಳು ಕೆಲವೊಮ್ಮೆ ಜೀವನ ಪರ್ಯಂತ ಕಾಡುತ್ತವೆ. ಬದುಕು ನಡೆಸುತ್ತವೆ, ಹೆಸರಿರುವ ಎಷ್ಟೆಷ್ಟೋ ಸಂಬಂಧಗಳಿಗಿಂತಾ ಆತ್ಮೀಯವಾಗಿ ಹೃದಯ ತಟ್ಟುತ್ತವೆ. ಮುಟ್ಟುತ್ತವೆ.  ಅದೇ ಸೋಜಿಗದ ವಿಷಯ. ಬಸ್ಸಿನಲ್ಲಿ ಕೆಲವೇ ಗಂಟೆ ಸಹಪ್ರಯಾಣಿಕನಾಗಿದ್ದ ವ್ಯಕ್ತಿಯೊಂದಿಗಿನ ಸಂಬಂಧ, ಕಳೆದುಹೋದ ಅತ್ಯಮೂಲ್ಯ ವಸ್ತುವನ್ನು ಜೋಪಾನವಾಗಿ ಹಿಂದಿರುಗಿಸಿದ ಪ್ರಾಮಾಣಿಕ ವ್ಯಕ್ತಿಯೊಂದಿಗಿನ ಸಂಬಂಧ, ಬದುಕಿನಲ್ಲಿ ಇನ್ನುಳಿದಿರುವುದು ಸಾವು ಮಾತ್ರ ಎಂದು ನಿರ್ಧರಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದವನಿಗೆ ಇನ್ನುಳಿದ ಬದುಕು ಪೂರ್ತಿ ಆಶಾವಾದಿಯಾಗಿ ಬದುಕಲು ಸ್ಪೂರ್ತಿ ನೀಡಿದ ಅಪರಿಚಿತ ವ್ಯಕ್ತಿಯೊಂದಿಗಿನ ಸಂಬಂಧ, ಮಧ್ಯದಲ್ಲೆಲ್ಲೋ ಕೆಲವೇ ನಿಮಿಷಗಳು ಪ್ರತ್ಯಕ್ಷವಾಗಿ ಒಂದು ಪೋಷಕ ಪಾತ್ರ ದಿನಗಟ್ಟಲೇ ಕಾಡುವಾಗಿನ ಸಂಬಂಧ, ಜೀವನವಿಡೀ  ಕಷ್ಟಗಳನ್ನೆದುರಿಸಿಯೇ ಬದುಕುವ ದುರಂತ ಕಥೆಯೊಂದರ ಪಾತ್ರದೊಳಗಿನ ಸಂಬಂಧ, ಬದುಕಿನಲ್ಲಿ ಸೋತು ಕುಸಿವ ಗಳಿಗೆಯಲ್ಲೆಲ್ಲಾ ‘ಏಳು ಎದ್ದೇಳು ಗುರಿ ಸೇರುವವರೆಗೂ ನಿಲ್ಲಬೇಡ’ ಎಂದು ಸಂತೈಸುವ ವಿವೇಕಾನಂದರೊಂದಿಗಿನ ಮಾನಸಿಕ ಸಂಬಂಧ….. ಇಂತಹ ಹತ್ತು ಹಲವು ಸಂಬಂಧಗಳಿಗೆ ಯಾವ ಹೆಸರು?

ಕೆಲವೊಂದು ಸಂಬಂಧಗಳಿಗೆ ಹೆಸರಿರುವುದಿಲ್ಲ. ಮತ್ತೆ ಕೆಲವಕ್ಕೆ ಹೆಸರೇ ಬೇಕಿಲ್ಲ. ಆದರೂ ನಮ್ಮ ಸಮಾಜ ಹೆಸರಿರುವ ಸಂಬಂಧಗಳನ್ನು ಪುರಸ್ಕರಿಸುವಂತೆ ಹೆಸರಿಲ್ಲದ ಸಂಬಂಧಗಳನ್ನು ಪುರಸ್ಕರಿಸುವುದಿಲ್ಲ. ಸಂಬಂಧಗಳಿಗೆಲ್ಲಾ ಬಲವಂತವಾಗಿಯಾದರೂ ಯಾವುದೇ ಒಂದು ಹೆಸರಿಟ್ಟರೆ  ನಂತರ ಜೀವಮಾನವಿಡೀ ಆ ಹೆಸರಿಟ್ಟ ಸಂಬಂಧಗಳ ಚೌಕಟ್ಟಿನೊಳಗೇ ಸಂಬಂಧ ಕಲ್ಪಿಸಿಕೊಳ್ಳುತ್ತಾ ಹೋಗುವ ಸರ್ಕಸ್ಸು!

ಸಖಿ, ಒಮ್ಮೆಯೂ ನಾವು ಕಣ್ಣಾರೆ ಕಂಡಿರದ ವ್ಯಕ್ತಿ ಕೂಡ ಎಷ್ಟೋ ಬಾರಿ ನಮ್ಮ ಆತ್ಮೀಯನಾಗಿ, ಹೃದಯ ಭಾಂಧವನಾಗಿ ಮನಸ್ಸಿನಾಳದಲ್ಲಿ  ಸೇರಿಹೋಗುವುದಿಲ್ಲವೇ? ಹೆಸರಿಲ್ಲಿದ ಎಷ್ಟೋ ಸಂಬಂಧಗಳು, ನಾವು ಹೆಸರಿಟ್ಟು ಚೌಕಟ್ಟು ನಿರ್ಮಿಸಿದ ಸಂಬಂಧಗಳಿಗಿಂತಾ ಹೆಚ್ಚು ಅಮೂಲ್ಯವಾಗಿರುತ್ತವೆ ಕಾಡುತ್ತವೆ, ಬದುಕು ಮುನ್ನಡೆಸುತ್ತವೆ. ವೃಥಾ ಅವುಗಳಿಗೆ ಹೆಸರಿಡುವ ತೆವಲು ನಮಗೇಕೆ “?
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...